ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ನನಗೆ ಟಿಕೆಟ್ ಸಿಗಬಹುದೆಂಬ ಭರವಸೆಯಿದೆ:ಕೆ.ಶಿವರಾಂ

|
Google Oneindia Kannada News

ಮೈಸೂರು, ಮಾರ್ಚ್ 6:ನಿವೃತ್ತ ಐಎಎಸ್ ಅಧಿಕಾರಿ ಕೆ.ಶಿವರಾಂ ಅವರು ಮಾಜಿ ಸಚಿವ ವಿ.ಶ್ರೀನಿವಾಸ್ ಪ್ರಸಾದ್ ಅವರ ಮನೆಗೆ ಭೇಟಿ ನೀಡಿ ಮಾತುಕತೆ ನಡೆಸಿದರು.

ಲೋಕಸಭೆ ಚುನಾವಣೆಗೆ ರಾಜಕೀಯ ಚಟುವಟಿಕೆ ಗರಿಗೆದರಿದ್ದು, ನಿನ್ನೆ ತಡ ರಾತ್ರಿ ಮಾಜಿ ಸಚಿವ ವಿ.ಶ್ರೀನಿವಾಸ್ ಪ್ರಸಾದ್ ಮನೆಗೆ ಶಿವರಾಂ ಭೇಟಿ ನೀಡಿ, ಬಿಜೆಪಿಯಿಂದ ಟಿಕೆಟ್ ನೀಡುವಂತೆ ಮನವಿ ಮಾಡಿಕೊಂಡರು.

ದಿನೇ ದಿನೇ ಕುತೂಹಲ ಕೆರಳಿಸಿರುವ ಚಾಮರಾಜನಗರ ಲೋಕಸಭಾ ಕ್ಷೇತ್ರ..!ದಿನೇ ದಿನೇ ಕುತೂಹಲ ಕೆರಳಿಸಿರುವ ಚಾಮರಾಜನಗರ ಲೋಕಸಭಾ ಕ್ಷೇತ್ರ..!

ಇದೇ ವೇಳೆ ಮಾತನಾಡಿದ ಕೆ.ಶಿವರಾಂ ಅವರು, ಪ್ರಸಾದ್ ಅಣ್ಣ ಹೇಳಿದವರಿಗೆ ಟಿಕೆಟ್ ಎಂದು ಈ ಹಿಂದೆ ಯಡಿಯೂರಪ್ಪ ಹೇಳಿದ್ದಾರೆ. ನಾನು 30ವರ್ಷದಿಂದಲೂ ಪ್ರಸಾದ್ ಅಣ್ಣ ಅವರೊಂದಿಗೆ ಇದ್ದೇನೆ. ಹೀಗಾಗಿ ಟಿಕೆಟ್ ಕೊಡಿಸುವಂತೆ ಆಶೀರ್ವಾದ ಕೇಳಿದ್ದೇನೆ. ಹಾಗೆಯೇ ಶ್ರೀನಿವಾಸ್ ಪ್ರಸಾದ್ ಅವರು ಸಹ ಟಿಕೆಟ್ ಬಗ್ಗೆ ಭರವಸೆ ನೀಡಿದ್ದಾರೆ. ಅಲ್ಲದೇ ಈ ಕುರಿತಾಗಿ ಹೈ ಕಮಾಂಡ್ ಗೆ ಹೇಳಲಿದ್ದೇನೆ ಎಂದು ಭರವಸೆ ನೀಡಿದ್ದಾರೆ ಎಂದರು.

K. Shivaram visited senior leader Shrinivas Prasad home

 ನಿಖಿಲ್ ಕುಮಾರಸ್ವಾಮಿ ಮೈಸೂರಿನಿಂದ ಸ್ಪರ್ಧೆ? ದಿನೇಶ್ ಗುಂಡೂರಾವ್ ಹೇಳಿದ್ದೇನು? ನಿಖಿಲ್ ಕುಮಾರಸ್ವಾಮಿ ಮೈಸೂರಿನಿಂದ ಸ್ಪರ್ಧೆ? ದಿನೇಶ್ ಗುಂಡೂರಾವ್ ಹೇಳಿದ್ದೇನು?

ಚಾಮರಾಜನಗರ ಲೋಕಸಭಾ ಕ್ಷೇತ್ರದಲ್ಲಿ ಪ್ರಸಾದ್ ಅವರ ಆಶೀರ್ವಾದ ಇಲ್ಲದೆ ಯಾರು ಗೆಲ್ಲಲು ಸಾಧ್ಯವಿಲ್ಲ. ಆಯ್ಕೆ ವಿಚಾರದಲ್ಲಿ ಪ್ರಸಾದ್ ರವರ ತೀರ್ಮಾನವೇ ಅಂತಿಮ. ಸಮರ್ಥ ಅಭ್ಯರ್ಥಿಯನ್ನು ಅವರೇ ತೀರ್ಮಾನ ಮಾಡಲಿದ್ದಾರೆ. ಪ್ರಸಾದ್ ಅಣ್ಣ ಅವರು ಇದಕ್ಕೆ ಕೈ ಹಾಕಬೇಡ ಸುಮ್ಮನಿರು ಎಂದರೆ ಸುಮ್ಮನಾಗುತ್ತೇನೆ. ಯಾರಿಗೆ ಟಿಕೆಟ್ ನೀಡಿದರೂ ಕೆಲಸ ನಿರ್ವಹಿಸುತ್ತೇವೆ. ಲೋಕಸಭಾ ಚುನಾವಣೆಗೆ ನಾನು ಎಲ್ಲ ತಯಾರಿ ಮಾಡಿಕೊಂಡಿದ್ದೇನೆ. ಟಿಕೆಟ್ ನನಗೆ ಸಿಗಬಹುದು ಎಂದು ಭರವಸೆ ವ್ಯಕ್ತಪಡಿಸಿದರು.

English summary
BJP party worker K. Shivaram visited senior leader Shrinivas Prasad home for asking Chamrajnagar Lokasabha ticket at yesterday night.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X