Kabini Dam: ಇಂದು ಜಲಾಶಯದ ಒಳಹರಿವು ಹೆಚ್ಚಳ, 5000 ಕ್ಯೂಸೆಕ್ ದಾಟುವ ಸಂಭವ, ವಿವರ
ಮೈಸೂರು, ಜುಲೈ 03: ಕರ್ನಾಟಕದಲ್ಲಿ ತಕ್ಕಮಟ್ಟಿಗೆ ಮಳೆ ಕಡಿಮೆ ಆದರೂ ಸಹ ಕೇರಳ, ಗಡಿ ಭಾಗದ ಅರಣ್ಯ ಪ್ರದೇಶಗಳಲ್ಲಿ ನಿರಂತರವಾಗಿ ಸುರಿಯುತ್ತಿರುವ ಮಳೆಯ ಕಾರಣದಿಂದಾಗಿ ಜಲಾಶಯಗಳಲ್ಲಿ ನೀರಿನ ಸಂಗ್ರಹ ಪ್ರಮಾಣ ಏರಿಕೆ ಆಗುತ್ತಿದೆ. ಕೇರಳ ಮೂಲದಲ್ಲಿ ಹುಟ್ಟವ ಕಪಿಲಾ ನದಿಯಲ್ಲಿ ಹೆಚ್ಚು ನೀರು ಸಂಗ್ರಹವಾಗುತ್ತಿದ್ದು, ಇದರಿಂದ ಕಬಿನಿ ಜಲಾಶಯದಲ್ಲಿ ಒಳಹರಿವು ಏರಿಕೆ ಆಗಿದೆ.
ಮೈಸೂರು ಸೇರಿದಂತೆ ಕಾವೇರಿ ಜಲಾನಯನ ಪ್ರದೇಶಗಳಲ್ಲಿ ಧಾರಾಕಾರ ಮಳೆ ಆಗಿದೆ. ಪರಿಣಾಮ ಕಾವೇರಿ ನದಿಯ ಉಪನದಿಗಳಲ್ಲಿ ಒಂದಾಗಿರುವ ಕಪಿಲಾ ನದಿಯು ತುಂಬಿ ಹರಿಯುತ್ತಿದೆ. ಇದರಿಂದಾಗಿ ಮೈಸೂರು ಜಿಲ್ಲೆಯಲ್ಲಿರುವ ಕಬಿನಿ ಜಲಾಶಯದ ಒಳಹರಿವು ಇಂದು ಬುಧವಾರಕ್ಕೆ (ಜುಲೈ 03) ಬರೋಬ್ಬರಿ 9807 ಕ್ಯೂಸೆಕ್ ಇದೆ ಎಂದು ಕರ್ನಾಟಕ ಹವಾಮಾನ ಇಲಾಖೆ ಮಾಹಿತಿ ನೀಡಿದೆ.

ಕಬಿನಿ ಜಲಾಶಯದ ಒಟ್ಟು ಸಾಮರ್ಥ್ಯದ ಪೈಕಿ (19.52 ಟಿಎಂಸಿ) ಈವರೆಗಿನ ನೀರು ಸಂಗ್ರಹಣೆ ಒಟ್ಟು ಶೇಕಡಾ 85.96 ರಷ್ಟಿದೆ. ಅಡಿ ಲೆಕ್ಕದಲ್ಲಿ ನೋಡುವುದಾದರೆ ಒಟ್ಟು 2284 ಅಡಿ ಇರುವ ಜಲಾಶಯದಲ್ಲಿ ಸದ್ಯಕ್ಕೆ 2279.54 ಅಡಿ ನೀರಿನ ಸಂಗ್ರಹ ಇದೆ.
ಆಣೆಕಟ್ಟಿನಿಂದ ಬುಧವಾರ ಕೇವಲ 2917 ಕ್ಯೂಸೆಕ್ ನೀರನ್ನು ಮಾತ್ರವೇ ನದಿ ಇನ್ನಿತರ ಮೂಲಗಳಿಗೆ ಹರಿ ಬಿಡಲಾಗುತ್ತಿದೆ. ಇದರಿಂದಾಗಿ ಸಂಗ್ರಹ ಹೆಚ್ಚಾಗುತ್ತಿದ್ದು, ಹೊರ ಹರಿವು ಕಡಿಮೆ ಇದೆ. ನೀರನ್ನು ಹೆಚ್ಚು ಹೆಚ್ಚು ಸಂಗ್ರಹಿಸಿಟ್ಟುಕೊಳ್ಳಾಗುತ್ತಿದೆ. ಮುಂದಿನ ಮಳೆಗಾಲದವರೆಗೂ ಸಂಗ್ರಹಿಸಿಟ್ಟುಕೊಳ್ಳುವ ಯೋಚನೆ ಇದಾಗಿದೆ.
ಒಳಹರಿವು 5000 ಕ್ಯೂಸೆಕ್ ದಾಟಲಿದೆ
ಸದ್ಯ ಕಾವೇರಿ ಜಲಾನಯನ, ಕೇರಳ ಗಡಿ ಅರಣ್ಯ ಪ್ರದೇಶ ಹಾಗೂ ಕಬಿನಿ ಜಲಾಶಯದ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಕಳೆದ 24 ಗಂಟೆಗಳಲ್ಲಿ 10 ಮಿಲಿ ಮೀಟರ್ ಮಳೆ ದಾಖಲಾಗಿದೆ. ಸದ್ಯ ರಾಜ್ಯದಲ್ಲಿ ಮಳೆ ಕಡಿಮೆ ಆಗಿದ್ದು, ಕರಾವಳಿ ಜಿಲ್ಲೆಗಳಲ್ಲಿ ಮಾತ್ರವೇ ಉತ್ತಮ ಮಳೆ ಬರುವ ಮುನ್ಸೂಚನೆ ಇದೆ. ಮೆಲನಾಡು ಹಾಗೂ ಒಳನಾಡು ಜಿಲ್ಲೆಗಳಲ್ಲಿ ಸಾಧಾರಣ ಮಳೆ ಆಗುವ ಸಂಭವವಿದೆ.

ಕೇರಳದ ವಯನಾಡು ವ್ಯಾಪ್ತಿಯಲ್ಲಿ ಬುಧವಾರ ಬೆಳಗ್ಗೆ ಕೊನೆಗೊಂಡಂತೆ ಹಿಂದಿನ 24 ಗಂಟೆಯಲ್ಲಿ ಬರೋಬ್ಬರಿ 69 ಮಿಮೀ ದಾಖಲಾಗಿದೆ. ಇದರಿಂದ ಮುಂದಿನ ಎರಡೇ ದಿನಗಳಲ್ಲಿ ಕಬಿನಿ ಆಣೆಕಟ್ಟಿನಲ್ಲಿ 5000 ಕ್ಯೂಸೆಕ್ಗಿಂತ ಹೆಚ್ಚಿನ ನಿರಂತರ ಒಳಹರಿವು ಕಂಡು ಬರುವ ಸಾಧ್ಯತೆ ಇದೆ ಎಂದು ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಮೇಲ್ವಿಚಾರಣೆ ಕೇಂದ್ರ (ಕೆಎಸ್ಎನ್ಡಿಎಂಸಿ) ಅಂದಾಜಿಸಿದೆ.
-
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Shivam Dube: ಶಿವಂ ದುಬೆ ಸಾಧನೆಗೆ ಮನಸಾರೆ ಮೆಚ್ಚುಗೆ ಸೂಚಿಸಿದ ಪತ್ನಿ ಅಂಜುಮ್ ಖಾನ್: ಇನ್ಸ್ಟಾ ಪೋಸ್ಟರ್ ಭಾರೀ ವೈರಲ್ -
Fact Check: ಟಿ20 ವಿಶ್ವಕಪ್ ಫೈನಲ್ ಪಂದ್ಯಕ್ಕೂ ಮುನ್ನ ರಾಷ್ಟ್ರಗೀತೆ ವೇಳೆ ಕಣ್ಣೀರಿಟ್ಟ ಕಿವೀಸ್ ಆಟಗಾರ ಇಶ್ ಸೋಧಿ -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ












Click it and Unblock the Notifications