ತಮಿಳುನಾಡಿಗೆ ಹರಿಯುತ್ತಿದೆ ಕಬಿನಿ ನೀರು, ಕ್ರಮ ಯಾವಾಗ?
ಮೈಸೂರು, ಜನವರಿ 7: ಸಿಎಂ ತವರು ಜಿಲ್ಲೆಯ ಕಬಿನಿ ಜಲಾಶಯದಲ್ಲಿ ನೀರು ನಿಲ್ಲುತ್ತಿಲ್ಲ ಎಂದು ಜನರು ಶಾಪ ಹಾಕುತ್ತಿದ್ದಾರೆ. ಕಬಿನಿ ಜಲಾಸಯದ ನೀರು ಎಲ್ಲಿಗೆ ಹೊಗುತ್ತಿದೆ ಎಂದರೆ ತಮಿಳುನಾಡಿಗೆ ಅಧಿಕಾರಿಗಳ ಆಟಕ್ಕೆ ನಿತ್ಯವೂ ನೂರು ಕ್ಯೂಸೆಕ್ಸ್ ನೀರು ತಮಿಳರ ಪಾಲಾಗುತ್ತಿದೆ.
ಹೌದು, ಅಧಿಕಾರಿಗಳ ಬೇಜವಬ್ದಾರಿತನವೋ.? ಅಥವಾ ಕಣ್ಣಾಮುಚ್ಚಾಲೆ ಆಟವೋ ಗೊತ್ತಿಲ್ಲ.? ಆದರೆ ನಿತ್ಯವೂ ಮೈಸೂರು ಜಿಲ್ಲೆಯ ಎಚ್.ಡಿ.ಕೋಟೆಯ ಕಬಿನಿ ಡ್ಯಾಂನ ಎಡದಂಡೆ ಮೂಲಕ ತಮಿಳುನಾಡಿಗೆ 100 ಕ್ಯೂಸೆಕ್ಸ್ ನೀರು ಹರಿದು ಹೋಗುತ್ತಿದೆ. ಆದರೆ ಇದು ಅಧಿಕಾರಿಗಳ ಗಮನಕ್ಕೆ ಬಂದಿಲ್ಲವಂತೆ. ಏಕೆಂದರೆ ಡ್ಯಾಂನಿಂದ ನೀರು ಬಿಡುತ್ತಿರುವ ಮಹಾನುಭಾವರು ಇವರೇ ಅಲ್ಲವೇ..!

ಒಂದೂವರೆ ತಿಂಗಳಿಂದ ಹರಿಯುತ್ತಿದೆಯಂತೆ ಡ್ಯಾಂನ ನೀರು?
ಸತತ ಒಂದೂವರೆ ತಿಂಗಳಿಂದಲೂ ಹೀಗೆ ನೀರು ಹರಿಯುತ್ತಲೇ ಇದೆ ಎಂಬ ಮಾಹಿತಿ ರೈತರಿಂದ ಲಭ್ಯವಾಗಿದೆ. ಇದರಿಂದ ಕೋಪಗೊಂಡ ರೈತರು ಕೂಡ ನೀರಾವರಿ ಇಲಾಖೆ ಅಧಿಕಾರಿಗಳ ಮೇಲೆ ಪೊಲೀಸರ ಬಳಿ ದೂರು ದಾಖಲಿಸಿದ್ದಾರೆ. ಪೊಲೀಸರು ಯಾವುದೇ ಕ್ರಮ ಕೈಗೊಳ್ಳದೇ ಪ್ರಕರಣವನ್ನೇ ಮರೆಮಾಚಲು ಪ್ರಯತ್ನಿಸುತ್ತಿದ್ದಾರೆ ಎಂಬುದು ಜನರ ಆರೋಪ.

ಪೊಲೀಸ್ ಠಾಣೆ ಇರೋದೆ ನೀರಾವರಿ ಇಲಾಖೆ ಕಟ್ಟಡದಲ್ಲಿ...!!
ವಿಪರ್ಯಾಸವೆಂದರೆ ಬೀಚನಹಳ್ಳಿ ಪೊಲೀಸ್ ಠಾಣೆಗೆ ಸ್ವಂತ ಕಟ್ಟಡವೇ ಇಲ್ಲ. ಈ ಕಾರಣದಿಂದ ಪೊಲೀಸ್ ಠಾಣೆ ನೀರಾವರಿ ಇಲಾಖೆಯ ಕಟ್ಟಡವನ್ನ ಆಶ್ರಯಿಸಿದೆ. ಇದರಿಂದ ಕಬಿನಿ ಡ್ಯಾಂ ಅಧಿಕಾರಿಗಳ ವಿರುದ್ಧವಾದ ಪ್ರಕರಣಗಳನ್ನ ಕೈಗೆತ್ತಿಕೊಂಡರೆ ಠಾಣೆಗೆ ತೊಂದರೆಯಾಗಲಿದೆ. ಎಂಬ ಭಾವನೆಯಿದೆ ಎಂಬುದು ಸ್ಥಳೀಯರ ಅಭಿಪ್ರಾಯ.

ಮೇಲಿನ ಅಧಿಕಾರಿಗಳು ಕ್ರಮ ಕೈಗೊಳ್ತಾರಾ..?
ರೈತರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದು, ಅಧಿಕಾರಿಗಳ ಕಣ್ಣಾಮುಚ್ಚಾಲೆ ಇದೀಗ ಬಯಲಿಗೆ ಬಂದಿದೆ. ಪೊಲೀಸರು ಈ ಬಗ್ಗೆ ಅದ್ಯಾವಾ ರೀತಿಯ ಕ್ರಮ ಕೈಗೊಳ್ಳುತ್ತಾರೆ ನೋಡಬೇಕಿದೆ. ಜೊತೆಯಲ್ಲಿ ಕಬಿನಿ ಜಲಾಶಯದ ಬಗ್ಗೆ ಅಧಿಕಾರಿಗಳು ಏಕೆ ಇಷ್ಟೊಂದು ನಿರ್ಲಕ್ಷ್ಯ ವಹಿಸಿದ್ದಾರೆ ಎಂಬ ರೈತರ ಮಾತುಗಳಿಗೆ ಉತ್ತರ ಕೊಡಬೇಕಿದೆ.
ನೀರಾವರಿ ಅಧಿಕಾರಿಗಳ ಕಣ್ಣಾಮುಚ್ಚಾಲೆ ಆಟಕ್ಕೆ ಬ್ರೇಕ್ ಬೀಳದಿದ್ರೆ ಮುಂದಿನ ದಿನಗಳಲ್ಲಿ ಎಲ್ಲರೂ ನೀರಿಗಾಗಿ ಹಾಹಾಕಾರಪಡೋದಂತೂ ಸುಳ್ಳಲ್ಲ ಅಂತಾರೆ ಸ್ಥಳೀಯ ಜನತೆ.
-
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Karnataka Weather: ಇಂದು ರಾಜ್ಯದ ಹಲವೆಡೆ ಗುಡುಗು ಸಹಿತ ಅಕಾಲಿಕ ಮಳೆ, ಬೆಂಗಳೂರಿನಲ್ಲಿ ಹೇಗಿರಲಿದೆ ವಾತಾವರಣ? -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
Udaan Yatri Cafe: ಏರ್ಪೋರ್ಟ್ನಲ್ಲಿ ದುಬಾರಿ ಊಟಕ್ಕೆ ಬ್ರೇಕ್: 17 ಕಡೆ ಉಡಾನ್ ಕೆಫೆ ಆರಂಭ












Click it and Unblock the Notifications