ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ದುಬಾರಿ ದಂಡ ವಿರೋಧಿಸಲು ಟ್ರಾಫಿಕ್ ಪೊಲೀಸ್ ಆದ ವಾಟಾಳ್ ನಾಗರಾಜ್!

|
Google Oneindia Kannada News

Recommended Video

ದುಬಾರಿ ದಂಡ ವಿರೋಧಿಸಲು ವಾಟಾಳ್ ನಾಗರಾಜ್ ಹೊಸ ಬಗೆಯ ಪ್ರತಿಭಟನೆ | Vatal Nagaraj

ಮೈಸೂರು, ಸೆಪ್ಟೆಂಬರ್ 9: ರೈಲ್ವೆ ನಿಲ್ದಾಣದ ಮುಂದೆ ಸಾಗುವ ವಾಹನ ಸವಾರರಿಗೆ ಇಂದು ಅಚ್ಚರಿಯೊಂದು ಕಾದಿತ್ತು. ಕಾರಣ, ಅಲ್ಲಿ ಕನ್ನಡ ಚಳವಳಿ ಪಕ್ಷದ ವಾಟಾಳ್ ನಾಗರಾಜ್ ಟ್ರಾಫಿಕ್ ಪೊಲೀಸ್ ಆಗಿ ದಂಡ ವಸೂಲಿ ಮಾಡುತ್ತಿದ್ದರು.

ಅರೆ, ವಾಟಾಳ್ ನಾಗರಾಜ್ ಯಾವಾಗ ಪೊಲೀಸ್ ಆದರು ಎಂದು ಗಾಬರಿಯಾಗಬೇಡಿ. ಸಂಚಾರಿ ನಿಯಮ ಉಲ್ಲಂಘನೆ ಸಂಬಂಧ ವಾಹನ ಸವಾರರಿಗೆ ಹೆಚ್ಚಿನ ದಂಡ ವಿಧಿಸುವ ಆದೇಶದ ವಿರುದ್ಧ ಕನ್ನಡ ಚಳುವಳಿ ಪಕ್ಷದ ವಾಟಾಳ್ ನಾಗರಾಜ್ ಅವರಿಂದ ಈ ರೀತಿ ವಿನೂತನ ಪ್ರತಿಭಟನೆ ನಡೆದಿದೆ.

ಟ್ರಾಫಿಕ್ ಪೊಲೀಸ್ ಸಮವಸ್ತ್ರ ಧರಿಸಿ ಮೈಸೂರಿನ ರೈಲ್ವೆ ನಿಲ್ದಾಣದ ವೃತ್ತದ ಬಳಿ ವಾಹನ ಸವಾರರನ್ನು ತಪಾಸಣೆ ನಡೆಸುವ ಮೂಲಕ ವಾಟಾಳ್ ನಾಗರಾಜ್ ದಂಡ ಹೆಚ್ಚಳದ ವಿರುದ್ಧ ಪ್ರತಿಭಟನೆ ನಡೆಸಿದರು. ಸಾರ್ವಜನಿಕರೂ ಪ್ರತಿಭಟನೆಗೆ ಸಾಥ್ ನೀಡಿದರು.

Kannada Activist Vatal Nagaraj Dresses Up Traffic Policeman in Mysuru

ಈ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ವಾಟಾಳ್ ನಾಗರಾಜ್, "ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಹೊಸ ಮೋಟಾರು ಕಾಯ್ದೆ ಯಮಪಾಶವಾಗಿದೆ. ಕೂಡಲೇ ಇದನ್ನು ರದ್ದುಪಡಿಸಬೇಕು. ಪಶ್ಚಿಮ ಬಂಗಾಳ ಸೇರಿದಂತೆ ಕೆಲವು ರಾಜ್ಯಗಳು ಈ ಕಾಯ್ದೆಯನ್ನು ಜಾರಿಗೊಳಿಸಿಲ್ಲ. ನಮ್ಮ ರಾಜ್ಯ ಸರ್ಕಾರವೂ ಇದನ್ನು ಜಾರಿಗೊಳಿಸಬಾರದಿತ್ತು. ಇದರಿಂದ ಜನರು ಭಯ ಪಟ್ಟು ವಾಹನ ಚಾಲನೆ ಮಾಡುವಂತಾಗಿದೆ. ಸಂಚಾರ ನಿಯಮ ಉಲ್ಲಂಘನೆಗೆ ದುಬಾರಿ ದಂಡ ವಿಧಿಸುತ್ತಿರುವುದು ಬಡ ವರ್ಗದ ಮತ್ತು ಮಧ್ಯಮ ವರ್ಗದ ವಾಹನ ಸವಾರರ ಮೇಲೆ ಕೆಟ್ಟ ಪರಿಣಾಮ ಬೀರಲಿದೆ. ಅರಿಯದೆ ಮಾಡಿದ ತಪ್ಪಿಗೂ ದುಬಾರಿ ದಂಡ ತೆರುವಂತಾಗಿದೆ" ಎಂದು ಆಕ್ರೋಶ ವ್ಯಕ್ತಪಡಿಸಿದರು.

Kannada Activist Vatal Nagaraj Dresses Up Traffic Policeman in Mysuru

"ಬಂಡೀಪುರ ಹುಲಿ ರಕ್ಷಿತಾರಣ್ಯದಲ್ಲಿ ರಾತ್ರಿ ವೇಳೆ ವಾಹನ ಸಂಚಾರ ಆರಂಭಿಸುವ ಪ್ರಯತ್ನಗಳು ನಡೆಯುತ್ತಿವೆ. ಯಾವುದೇ ಕಾರಣಕ್ಕೂ ರಾತ್ರಿ ವೇಳೆ ವಾಹನ ಸಂಚಾರ ಆರಂಭವಾಗಬಾರದು" ಎಂದು ಆಗ್ರಹಿಸಿದರು.

English summary
Pro-Kannada Activist Vatal Nagaraj Dresses Up As Traffic Policema. He has done unique way of protest in the name of new traffic fine system.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X