ಮಂಡ್ಯ ರಮೇಶ್, ಸಾಧುಕೋಕಿಲ ಮೇಲೆ ಲೈಂಗಿಕ ಶೋಷಣೆ ಆರೋಪ!
ಮೈಸೂರು, ಡಿಸೆಂಬರ್ 22 : ಮಂಡ್ಯ ರಮೇಶ್, ಸಾಧು ಕೋಕಿಲ ನಮ್ಮ ಸ್ಪಾಗೆ ಬರುತ್ತಿದ್ದರು. ನನ್ನಿಂದ ಮಸಾಜ್ ಮಾಡಿಸಿಕೊಳ್ಳುತ್ತಿದ್ದರು. ನನ್ನನ್ನು ಲೈಂಗಿಕವಾಗಿ ಶೋಷಿಸುತ್ತಿದ್ದರು ಎಂದು ಯುವತಿಯೊಬ್ಬಳು ಹೇಳಿರುವುದಾಗಿ ಆರೋಪ ಕೇಳಿಬಂದಿದೆ.
ಸ್ಟೋಟಕ ಸುದ್ದಿ : ಖ್ಯಾತ ನಟರಿಬ್ಬರ ಮೇಲೆ ಲೈಂಗಿಕ ಕಿರುಕುಳ ಆರೋಪ!
ಇಲ್ಲಿನ ಸ್ಪಾನಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿಕೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ನಟರಾದ ಮಂಡ್ಯ ರಮೇಶ್, ಸಾಧು ಕೋಕಿಲ ಹೆಸರು ಬಂದಿದೆ. ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ ಹಳ್ಳಿಯಿಂದ ಪಾರ್ಲರ್ ನಲ್ಲಿ ಕೆಲಸ ಕೊಡಿಸುವುದಾಗಿ ಮಹಿಳೆಯೊಬ್ಬಳು ನನ್ನನ್ನು ರಾಜೇಶ್ ಬಳಿ ಕಳುಹಿಸಿದರು. ಆದರೆ ರಾಜೇಶ್ ಪಾರ್ಲರ್ ನಲ್ಲಿ ಪುರಷರಿಗೆ ಬಾಡಿ ಮಸಾಜ್ ಮಾಡುವಂತೆ ಬಲವಂತ ಪಡಿಸಿದರು ಎಂದು ಆಕೆ ಆರೋಪಿಸಿದ್ದಾಳೆ.

ರೂಮಿನಲ್ಲಿ ಕೂಡಿ ಹಾಕಿ ಸಹಕರಿಸುವಂತೆ ಬಲವಂತ ಮಾಡಿದರು. ಕನ್ನಡ ಚಿತ್ರರಂಗದ ಸಾಧು ಕೋಕಿಲ ಹಾಗೂ ಮಂಡ್ಯ ರಮೇಶ್ ಗೆ ಎರಡು ಬಾರಿ ನಾನು ಬಾಡಿ ಮಸಾಜ್ ಮಾಡಿದ್ದೇನೆ. ಆ ಸಂದರ್ಭದಲ್ಲಿ ಖಾಸಗಿ ಅಂಗಗಳನ್ನು ಮುಟ್ಟುವಂತೆ ಒತ್ತಾಯಿಸುತ್ತಿದ್ದರು. ಹಾಗೆ ಮಾಡಿದರೆ ಅವರು ನನ್ನ ಗುಪ್ತಾಂಗ ಮುಟ್ಟುತ್ತಿದ್ದರು. ನಿರಾಕರಿಸಿದರೆ ಮಾಲೀಕನಿಗೆ ದೂರುವುದಾಗಿ ಬೆದರಿಕೆ ಹಾಕುತ್ತಿದ್ದರು ಎಂದು ಆರೋಪಿಸಿದ್ದಾಳೆ.
ಹಣದ ಆಮಿಷ ತೋರಿಸಿ, ಲೈಂಗಿಕ ಸುಖಕ್ಕೆ ಇಬ್ಬರೂ ಒತ್ತಾಯಿಸುತ್ತಿದ್ದರು ಎಂದು ಯುವತಿ ಆರೋಪಿಸಿದ್ದಾಳೆ. ಈ ಕುರಿತಾಗಿ ಮಾಹಿತಿ ನೀಡಿದ ನಟ ಮಂಡ್ಯ ರಮೇಶ್, ಯುವತಿಯ ಆರೋಪವನ್ನು ಸಾರಾಸಗಟಾಗಿ ತಳ್ಳಿ ಹಾಕಿದ್ದಾರೆ. ನನಗೆ ಆ ಯುವತಿ ಯಾರೆಂದು ಚಾಮುಂಡೇಶ್ವರಿಯ ಮೇಲಾಣೆ ಗೊತ್ತಿಲ್ಲ. ನಾನು ಸ್ಪಾದಉದ್ಘಾಟನೆಗೆ ತೆರಳಿದ್ದಾಗ ಮಾತ್ರವೇ ಆ ಅಂಗಡಿಯನ್ನು ಗಮನಿಸಿದ್ದೆ. ಮುಂದಿನದು ನನಗೆ ಅರಿವಿಲ್ಲ ಎಂದಿದ್ದಾರೆ.
ಸ್ಪಾ ಉದ್ಘಾಟಿಸಿದ್ದು ನಾನೇ. ಆದರೆ ನನ್ನ ಉತ್ತಮ ಕಾರ್ಯಗಳಿಗೆ ಇದೊಂದು ಕಪ್ಪು ಚುಕ್ಕೆ ಇದ್ದಂತೆ ಎಂದು ಅವರು ಒನ್ ಇಂಡಿಯಾ ಕನ್ನಡಕ್ಕೆ ತಿಳಿಸಿದರು.
-
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್












Click it and Unblock the Notifications