ಹಿಂದೂ-ಮುಸ್ಲಿಂ ಮದುವೆ : ಕ್ರಾಂತಿಗೆ ಬುದ್ಧಿಜೀವಿಗಳ ನಾಂದಿ!
ಮೈಸೂರು, ಏಪ್ರಿಲ್ 18 : ಹಿಂದೂಪರ ಸಂಘಟನೆಗಳ ವಿರೋಧದ ನಡುವೆಯೂ ಮಂಡ್ಯದ ವೈದ್ಯರ ಮಗಳು ಆಶಿತಾ ಮತ್ತು ಶಕೀಲ್ ಅವರ ವಿವಾಹ ಮೈಸೂರಿನಲ್ಲಿ ಬಿಗಿಬಂದೋಬಸ್ತ್ನಲ್ಲಿ ನಡೆದಿದೆ. ಈ ಮದುವೆಗೆ ಜಿಲ್ಲಾಡಳಿತ ಮತ್ತು ವಿವಿಧ ಪ್ರಗತಿಪರ ಸಂಘಟನೆಗಳು ಬೆಂಬಲ ನೀಡಿದ್ದಂತು ನಿಜ.
ಎಲ್ಲ ಅಡ್ಡಿ ಆತಂಕಗಳ ನಡುವೆ ಹಿಂದೂ ವಧು, ಮುಸ್ಲಿಂ ವರ ಒಂದಾಗಿದ್ದಾರೆ. ಅದು ಆಚೆಗಿರಲಿ. ಇದೀಗ ಬಂದಿರುವ ಸುದ್ದಿಯ ಪ್ರಕಾರ, ಈ ವಿವಾಹದ ನಂತರ ಅಂತರ್ಧರ್ಮೀಯ ವಧು-ವರರ ರಕ್ಷಣೆಗೆ ರಾಜ್ಯ ಮಟ್ಟದ ಸಂಘಟನೆ ರಚಿಸಲು ವಿಚಾರವಾದಿಗಳು, ಪ್ರಗತಿಪರರು ಮುಂದಾಗಿದ್ದಾರೆ. ಇಂತಹ ಸಂಘಟನೆ ಹುಟ್ಟಿಗೆ ಆಶಿತಾ ಮತ್ತು ಶಕೀಲ್ ವಿವಾಹ ಪ್ರಕರಣ ವೇದಿಕೆಯಾಗಿದೆ ಎಂದರೆ ತಪ್ಪಾಗಲಾರದು. [ಕಡೆಗೂ ನಡೆದೇಹೋಯಿತು ಆಶಿತಾ-ಶಕೀಲ್ ವಿವಾಹ]
ವಿವಾಹ ಸಮಾರಂಭಕ್ಕೆ ಆಗಮಿಸಿದ ಪ್ರೊ. ಕೆ.ಎಸ್.ಭಗವಾನ್, ಸಾಹಿತಿ ದೇವನೂರು ಮಹದೇವ, ಗೌರಿ ಲಂಕೇಶ್, ಜನವಾದಿ ಸಂಘಟನೆ ಮುಖ್ಯಸ್ಥೆ ವಿಮಲಾ, ವಿಚಾರವಾದಿ ಪ.ಮಲ್ಲೇಶ್ ಸೇರಿದಂತೆ ಹಲವರು ಸಂಘಟನೆ ಹುಟ್ಟು ಹಾಕುವ ಬಗ್ಗೆ ತೀರ್ಮಾನಿಸಿದ್ದಾರೆ, ಬಹುದೊಡ್ಡ ಸಮಾಜವಾದಿ ಚಳವಳಿಗೆ, ಕ್ರಾಂತಿಗೆ ಶ್ರೀಕಾರ ಹಾಕಲು ಸಜ್ಜಾಗಿದ್ದಾರೆ. [ಹೇ ಭಗವಾನ್! ಯಾರು? ಏನು? ಎತ್ತ? ಏನಿದೆಲ್ಲ?]

ವಿವಾಹ ಸಮಾರಂಭಕ್ಕೂ ಮುನ್ನ ಮೈಸೂರು ನಗರದ ಜೆಎಲ್ಬಿ ರಸ್ತೆಯಲ್ಲಿರುವ ರೋಟರಿ ಶಾಲೆಯ ಎಫ್.ಕೆ.ಇರಾನಿ ಸಭಾಂಗಣದಲ್ಲಿ ಸೇರಿದ ಸಮಾನ ಮನಸ್ಕರು ಅಂತರ್ ಧರ್ಮೀಯ, ಅಂತರ್ಜಾತಿ ವಿವಾಹಿತರಿಗೆ ಸಾಮಾಜಿಕ, ಆರ್ಥಿಕ ಭದ್ರತೆ ಒದಗಿಸಲು, ಆಯ್ಕೆ ಮತ್ತು ಸಂವಿಧಾನ ಬದ್ಧ ಹಕ್ಕುಗಳ ರಕ್ಷಣೆಗಾಗಿ ಹೋರಾಟ ರೂಪಿಸಲು ರಾಜ್ಯಮಟ್ಟದ ಸಂಘಟನೆಯನ್ನು ಸ್ಥಾಪಿಸಿ ಹೋರಾಟ ನಡೆಸಲು ತೀರ್ಮಾನಿಸಿತು.
ತಮಿಳುನಾಡಿನಲ್ಲಿರುವಂತೆ ಅಂತರ್ಜಾತಿ, ಅಂತರ್ಧರ್ಮೀಯ ವಿವಾಹಿತರಿಗಾಗಿ ಪ್ರತ್ಯೇಕ ಕೋಶಗಳನ್ನು ಸ್ಥಾಪಿಸಲು ಸರ್ಕಾರವನ್ನು ಒತ್ತಾಯಿಸಲು ನಿರ್ಧರಿಸಲಾಗಿದೆ. ಸಭೆಯಲ್ಲಿ ವೈದಿಕಶಾಹಿ, ಮನುವಾದಿಗಳು ಹಂತಹಂತವಾಗಿ ಬದುಕುವ ಹಕ್ಕನ್ನು ಕಿತ್ತುಕೊಂಡು ವಂಚಿಸುತ್ತಿದ್ದಾರೆ ಎಂಬ ಆಕ್ರೋಶವೂ ವ್ಯಕ್ತವಾಯಿತು.
ಸಭೆಯಲ್ಲಿ ಪಿಯುಸಿಎಲ್ ಅಧ್ಯಕ್ಷ ಡಾ.ವಿ.ಲಕ್ಷ್ಮೀನಾರಾಯಣ, ಸಿಪಿಐಎಂ ಮುಖಂಡರಾದ ಲ.ಜಗನ್ನಾಥ್, ಜಯರಾಮ್, ಕೆ.ಬಸವರಾಜು, ಸಮತಾವೇದಿಕೆಯ ಇ.ರತಿರಾವ್. ಜನವಾದಿ ಸಂಘಟನೆಯ ಉಪಾಧ್ಯಕ್ಷೆ ನೀಲಾ, ಸಮುದಾಯ ಸಂಸ್ಥೆಯ ಜಿಲ್ಲಾ ಸಂಚಾಲಕ ವಜ್ರಮುನಿ ಸೇರಿದಂತೆ ಹಲವು ಪ್ರಗತಿಪರ ಚಿಂತಕರು ಸಭೆಯಲ್ಲಿದ್ದರು.
ಕನ್ನಡ ನಾಡಿನ ಬುದ್ಧಿಜೀವಿಗಳು, ಪ್ರಗತಿಪರರು ತಲೆತೂರಿಸುವುದರಿಂದ ಕರ್ನಾಟಕದಲ್ಲಿ ಸಾಮಾಜಿಕ ಕ್ರಾಂತಿ ತರಲು ಸಾಧ್ಯವೆ? ಅಥವಾ, ಹಿಂದೂ ಮುಸ್ಲಿಂ ಜೋಡಿಗಳು ಕೈಕೈ ಹಿಡಿದುಕೊಂಡು ಹೋದರೆ ಸಂಘರ್ಷವೇಳುತ್ತಿರುವಾಗ ಇಂಥ ಚಳವಳಿಯ ಅಗತ್ಯವಿದೆಯೆ? ನಿಮ್ಮ ವಸ್ತುನಿಷ್ಠ ಅಭಿಪ್ರಾಯ ಮಂಡಿಸಿ.
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Shivam Dube: ಶಿವಂ ದುಬೆ ಸಾಧನೆಗೆ ಮನಸಾರೆ ಮೆಚ್ಚುಗೆ ಸೂಚಿಸಿದ ಪತ್ನಿ ಅಂಜುಮ್ ಖಾನ್: ಇನ್ಸ್ಟಾ ಪೋಸ್ಟರ್ ಭಾರೀ ವೈರಲ್ -
Fact Check: ಟಿ20 ವಿಶ್ವಕಪ್ ಫೈನಲ್ ಪಂದ್ಯಕ್ಕೂ ಮುನ್ನ ರಾಷ್ಟ್ರಗೀತೆ ವೇಳೆ ಕಣ್ಣೀರಿಟ್ಟ ಕಿವೀಸ್ ಆಟಗಾರ ಇಶ್ ಸೋಧಿ -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ












Click it and Unblock the Notifications