ಸಾಹಿತ್ಯ ಸಮ್ಮೇಳನಾಧ್ಯಕ್ಷರ ಮೆರವಣಿಗೆಗೆ ಸಜ್ಜಾಗುತ್ತಿದೆ ಮಲ್ಲಿಗೆ ಸಾರೋಟು!
ಮೈಸೂರು, ನವೆಂಬರ್ 8: 83ನೇ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಉಳಿದಿರುವುದು 15 ದಿನಗಳು ಮಾತ್ರ. ಇತ್ತ ಮೆರವಣಿಗೆ ಸಮಿತಿಯಿಂದ ಸಮ್ಮೇಳನದ ಅಧ್ಯಕ್ಷರನ್ನು ಮಲ್ಲಿಗೆ ಹೂವಿನಿಂದ ಅಲಂಕರಿಸಿದ ರಥದಲ್ಲಿ ಕರೆತರಲು ಯೋಜಿಸಲಾಗಿದೆ.
ಸಮ್ಮೇಳನದ ಪ್ರಮುಖ ಆಕರ್ಷಣೆಯಾಗಿರುವ ಅಧ್ಯಕ್ಷರ ಮೆರವಣಿಗೆ ನ.24ರಂದು ಬೆ.9 ಗಂಟೆಗೆ ನಡೆಯಲಿದೆ. ಸಮ್ಮೇಳನದ ಸರ್ವಾಧ್ಯಕ್ಷರಾಗಿರುವ ಡಾ.ಚಂದ್ರಶೇಖರ ಪಾಟೀಲ ಅವರನ್ನು ಮೈಸೂರು ಮಲ್ಲಿಗೆಯಿಂದ ಅಲಂಕೃತಗೊಂಡ ಜೀಪಿನ ಮಂಟಪದಲ್ಲಿ ಸಮ್ಮೇಳನ ನಡೆಯುವ ವೇದಿಕೆಗೆ ಕರೆದೊಯ್ಯಲಾಗುವುದು. ಈ ಸಂದರ್ಭ 30 ಜಿಲ್ಲೆಯ ಕನ್ನಡ ಸಾಹಿತ್ಯ ಪರಿಷತ್ನ ಅಧ್ಯಕ್ಷರು ಕುದುರೆ ಸಾರೋಟಿನಲ್ಲಿ ಸಮ್ಮೇಳನದ ಅಧ್ಯಕ್ಷರ ಜೊತೆಗೆ ಮೆರವಣಿಗೆಯಲ್ಲಿ ಸಾಗಲಿದ್ದಾರೆ.

600 ಕಲಾವಿದರು ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದು, 300 ಸ್ಥಳೀಯ ಕಲಾವಿದರಿಗೆ ಹಾಗೂ 300 ಹೊರ ಜಿಲ್ಲೆಯ ಕಲಾವಿದರಿಗೆ ಅವಕಾಶ ನೀಡಲಾಗುವುದು. ಶಾಲಾ ಕಾಲೇಜುಗಳ ಮುಖ್ಯಸ್ಥರೊಂದಿಗೆ ಚರ್ಚಿಸಿ 5000 ವಿದ್ಯಾರ್ಥಿಗಳು ಸಾಂಪ್ರದಾಯಿಕ ಉಡುಪಿನಲ್ಲಿ ಮೆರವಣಿಗೆಯಲ್ಲಿ ಭಾಗವಹಿಸುವಂತೆ ಮನವಿ ಮಾಡಲಾಗುವುದು. ಇದಲ್ಲದೇ 200 ಮಹಿಳೆಯರು ಕಳಸ ಹೊತ್ತು ಮೆರವಣಿಗೆಯಲ್ಲಿ ಸಾಗಲಿದ್ದಾರೆ. ಸಿಂಗಾರಗೊಂಡ ಎತ್ತಿನಗಾಡಿ, ಅಟೋ ರಿಕ್ಷಾಗಳು, ಕುದುರೆ ಸಾರೋಟು, ಪೊಲೀಸ್ ಬ್ಯಾಂಡ್ ತಂಡಗಳು ಭಾಗವಹಿಸಲಿದೆ.
ಸಮ್ಮೇಳನಾಧ್ಯಕ್ಷರ ಮೆರವಣಿಗೆ ನ.24ರಂದು ಬೆಳಗ್ಗೆ 9 ಗಂಟೆಗೆ ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದಿಂದ ಆರಂಭವಾಗಲಿದೆ. ಮೆರವಣಿಗೆಯನ್ನು ಜಿಪಂ ಅಧ್ಯಕ್ಷೆ ನಯಿಮಾ ಸುಲ್ತಾನ ಅವರು ಉದ್ಘಾಟಿಸಲಿದ್ದಾರೆ. ಮೆರವಣಿಗೆಯಲ್ಲಿ ಕಾಲೇಜು ವಿದ್ಯಾರ್ಥಿಗಳು, ಟ್ಯಾಬ್ಲೋಗಳು, ಕಲಾತಂಡಗಳು ಪಾಲ್ಗೊಳ್ಳಲಿವೆ.
ಕೋಟೆ ಆಂಜನೇಯ ಸ್ವಾಮಿ ದೇವಸ್ಥಾನದಿಂದ ಆರಂಭಗೊಳ್ಳುವ ಮೆರವಣಿಗೆ ಅಶೋಕ ರಸ್ತೆ, ಇರ್ವಿನ್ ರಸ್ತೆ, ಸಯ್ಯಾಜಿ ರಾವ್ ರಸ್ತೆ, ಕೆ ಆರ್ ವೃತ್ತ, ಸಂಸ್ಕೃತ ಪಾಠ ಶಾಲೆ ವೃತ್ತ, ಚಾಮರಾಜ ಜೋಡಿ ರಸ್ತೆ, ರಾಮಸ್ವಾಮಿ ವೃತ್ತದ ಮೂಲಕವಾಗಿ ಸಮ್ಮೇಳನ ನಡೆಯುವ ಮಹಾರಾಜ ಕಾಲೇಜು ಮೈದಾನವನ್ನು ತಲುಪಲಿದೆ. ಒಟ್ಟಾರೆ 9 ಗಂಟೆಗೆ ಆರಂಭವಾಗುವ ಮೆರವಣಿಗೆ 11 ಗಂಟೆಯ ಹೊತ್ತಿಗೆ ಸಮ್ಮೇಳನ ನಡೆಯುವ ಸಭಾಂಗಣವನ್ನು ತಲುಪಲಿದೆ. ಒಟ್ಟಾರೆ ಎರಡು ಗಂಟೆಗಳ ಕಾಲ ಅಧ್ಯಕ್ಷರ ಮೆರವಣಿಗೆ ನಡೆಯಲಿದೆ.
ಅಂದು ಸಂಜೆ 6 ರಿಂದ 9 ರವರೆಗೆ 6 ವೇದಿಕೆಗಳಲ್ಲಿ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದೆ. ಮುಖ್ಯ ವೇದಿಕೆಯಲ್ಲಿ 12 ಕಾರ್ಯಕ್ರಮ ಹಾಗೂ ಇನ್ನುಳಿದ ವೇದಿಕೆಗಳಲ್ಲಿ 75 ಕಾರ್ಯಕ್ರಮಗಳನ್ನು ಆಯೋಜಿಸಲಾಗುವುದು. ಕನ್ನಡ ನಾಡು, ನುಡಿ, ಕಲೆ, ಸಂಸ್ಕೃತಿ ಕುರಿತಂತೆ ಕಾರ್ಯಕ್ರಮಗಳನ್ನು ಆಯೋಜಿಸಲಾಗುವುದು. ರಾಜ್ಯ, ರಾಷ್ಟ್ರ ಹಾಗೂ ಅಂತಾರಾಷ್ಟ್ರೀಯ ಮಟ್ಟದಲ್ಲಿ ಖ್ಯಾತಿ ಹೊಂದಿರುವ ಕನ್ನಡ ಕಲಾವಿದರಿಗೆ ಆದ್ಯತೆ ನೀಡಲಾಗುವುದು.
-
Love Mocktail 3: ಲವ್ ಮಾಕ್ಟೇಲ್ 3 ಸಿನಿಮಾ ಕದ್ದ ಕಥೆ: ಮಾರಿ ಗೋಲ್ಡ್ ನಿರ್ದೇಶಕ ರಾಘವೇಂದ್ರ ನಾಯ್ಕ್ ಗಂಭೀರ ಆರೋಪ -
ಲವ್ ಮಾಕ್ಟೇಲ್ 3 ವಿವಾದ: ನನ್ನ ಕಥೆಯ ದ್ವಿತೀಯಾರ್ಧ ನಕಲು: ಸಿನಿಮಾ ಬರಹಗಾರರೇ ಎಚ್ಚರ ಎಂದ ನಿರ್ದೇಶಕ ರಾಘವೇಂದ್ರ -
ಕಾಂತಾರ ವಿವಾದ: ಮೈಸೂರು ಚಾಮುಂಡಿ ಬೆಟ್ಟಕ್ಕೆ ಬರ್ತೀನಿ, ಕ್ಷಮೆಯೂ ಕೇಳ್ತೀನಿ ಎಂದ ನಟ ರಣವೀರ್ ಸಿಂಗ್ -
Train Delay: ರೈಲು ಪ್ರಯಾಣಿಕರೇ ಎಚ್ಚರ! ನಾಳೆ ಬೆಂಗಳೂರು-ಚೆನ್ನೈ ನಡುವಿನ ಸಂಚಾರದಲ್ಲಿ ಭಾರಿ ವ್ಯತ್ಯಯ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು












Click it and Unblock the Notifications