ಮೈಸೂರು: ಸಾಹಿತ್ಯ ಸಮ್ಮೇಳನಕ್ಕೆ ಸಜ್ಜಾದ ಕನ್ನಡ ತೇರು
ಮೈಸೂರು, ನವೆಂಬರ್ 11 : ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ನಡೆಯಲಿರುವ 83ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನದ ಕಾರ್ಯಕ್ರಮಗಳು ಇಂದಿನಿಂದ ಅಧಿಕೃತವಾಗಿ ಆರಂಭಗೊಂಡಿದೆ. ಜಿಲ್ಲೆಯಾದ್ಯಂತ ಸಂಚರಿಸಲಿರುವ ಕನ್ನಡ ತೇರು ಹಾಗೂ ಕನ್ನಡ ಸಾಹಿತ್ಯ ಸಮ್ಮೇಳನದ ಪ್ರತಿನಿಧಿಗಳ ನೋಂದಣಿ ಕಚೇರಿಯನ್ನು ಉದ್ಘಾಟಿಸುವ ಮೂಲಕ ಸಚಿವ ಡಾ.ಹೆಚ್.ಸಿ.ಮಹದೇವಪ್ಪ ಚಾಲನೆ ನೀಡಿದರು.
ಇದೇ ವೇಳೆ ಮಾತನಾಡಿದ ಅವರು , ಮೈಸೂರಿನಲ್ಲಿ 83 ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಲಿದೆ. ಇದುವರೆಗೂ ರಾಜ್ಯದ ವಿವಿಧ ಜಿಲ್ಲೆಗಳಿಂದ 7575 ಪ್ರತಿನಿಧಿಗಳು ಹೆಸರು ನೋಂದಾಯಿಸಿಕೊಂಡಿದ್ದು, ಅದರಲ್ಲಿ ಪುರುಷರು 4982 ,ಹಾಗೂ ಮಹಿಳೆಯರು 1793 ಪ್ರತಿನಿಧಿಗಳು ನೋಂದಾಯಿಸಿಕೊಂಡಿದ್ದಾರೆ.

ರಾಜ್ಯದ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಘಟಕಗಳಲ್ಲಿ ಪ್ರತಿನಿಧಿಯಾಗಿ ನೋಂದಾಯಿಸಿಕೊಳ್ಳುವವರ ಅವಧಿ ನವೆಂಬರ್ 10 ರಂದು ಮುಕ್ತಾಯಗೊಂಡಿದೆ. ಸ್ಥಳೀಯರಿಗೆ ಹೆಚ್ಚಿನ ಅವಕಾಶ ಲ್ಪಿಸುವ ನಿಟ್ಟಿನಲ್ಲಿ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳ ಕಚೇರಿಯಲ್ಲಿ ಬೆಳಿಗ್ಗೆ 10 ರಿಂದ ಸಂಜೆ 6 ರವರಗೆ ಹೆಸರನ್ನು ನೋಂದಣಿ ಮಾಡಿಕೊಳ್ಳಬಹುದಾಗಿದೆ. ನೋಂದಣಿಯಾದವರಿಗೆ ಬ್ಯಾಗ್, ಪೆನ್ನು, ಪುಸ್ತಕ, ಆಹಾರ ಕೂಪನ್ ನೀಡಲಾಗುವುದು ಎಂದರು.

ಸಮ್ಮೇಳನದ ದಿನ ಒತ್ತಡ ಕಡಿಮೆ ಮಾಡಲು ಈ ಕಚೇರಿಯನ್ನು ಉದ್ಘಾಟಿಸಲಾಗಿದೆ. ಎಲ್ಲರು ಒಗ್ಗೂಡಿ ಕನ್ನಡ ಸಾಹಿತ್ಯ ಸಮ್ಮೇಳನದ ತೇರನ್ನು ಎಳೆಯೋಣ ಎಂದರು. ಇದಾದ ನಂತರ ಮಹಾರಾಜ ಕಾಲೇಜು ಮೈದಾನದಲ್ಲಿ ಜಿಲ್ಲೆಯಾದ್ಯಂತ ಸಂಚರಿಸುವ ಕನ್ನಡ ತೇರಿಗೆ ಚಾಲನೆ ನೀಡಿದರು. ಅಮ್ಮೇಳನದ ಕಾರ್ಯಕ್ರಮಕ್ಕೆ ಗುದ್ದಲಿ ಪೂಜೆ ನೆರವೇರಿಸಿದರು.
ಇದೇ ಸಂದರ್ಭ ಸಚಿವ ತನ್ವೀರ್ ಸೇಠ್,ಕ.ಸಾ.ಪ ಅಧ್ಯಕ್ಷ ವೈ.ಡಿ.ರಾಜಣ್ಣ, ಮೈಲಾಕ್ ಅಧ್ಯಕ್ಷ ವೆಂಕಟೇಶ್, ಮೃಗಾಲಯ ಪ್ರಾಧಿಕಾರದ ಅಧ್ಯಕ್ಷೆ ಮಲ್ಲಿಗೆ ವೀರೇಶ್,ಶಾಸಕ ವಾಸು,ಹಿಂದುಳಿದ ವರ್ಗಗಳ ಜಿಲ್ಲಾಧಿಕಾರಿ ಸೋಮಶೇಖರ್ ಹಾಜರಿದ್ದರು.
-
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video












Click it and Unblock the Notifications