ಜೂನ್ ಆರಂಭದಲ್ಲಿ ಮೈಸೂರಿನಲ್ಲಿ ಕನ್ನಡ ಸಾಹಿತ್ಯ ಸಮ್ಮೇಳನ?!
ಮೈಸೂರಿನಲ್ಲಿ ನಡೆಯಲಿರುವ 83ನೇ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಜೂನ್ ಮೊದಲನೆಯ ವಾರದಲ್ಲಿ ಆಯೋಜಿಸಲು ಕನ್ನಡ ಸಾಹಿತ್ಯ ಪರಿಷತ್ ಸಿದ್ಧತೆ ಮಾಡಿಕೊಳ್ಳುತ್ತಿದೆ.
ಮೈಸೂರು, ಮಾರ್ಚ್ 22 : ಉಪಚುನಾವಣೆಯ ಕಾವು ಒಂದೆಡೆಯಾದರೆ, ಕನ್ನಡ ಸಾಹಿತ್ಯ ಸಮ್ಮೇಳನದ ತಂಪು ಇನ್ನೊಂದೆಡೆ. ಹೌದು, ಸಾಂಸ್ಕೃತಿಕ ನಗರಿ ಮೈಸೂರು 83ನೆಯ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಭರದಿಂದ ಸಜ್ಜಾಗುತ್ತಿದೆ.
ಇದೇ ಜೂನ್ ಮೊದಲನೆಯ ವಾರದಲ್ಲಿ ಸಾಹಿತ್ಯ ಸಮ್ಮೇಳನವನ್ನು ಆಯೋಜಿಸಲು ಕನ್ನಡ ಸಾಹಿತ್ಯ ಪರಿಷತ್ ಸಿದ್ಧತೆ ಮಾಡಿಕೊಳ್ಳುತ್ತಿದೆ. ಕಸಾಪ ರಾಜ್ಯಾಧ್ಯಕ್ಷ ಡಾ.ಮನು ಬಳಿಗಾರ್ ಅವರು ಇತ್ತೀಚೆಗೆ ಮೈಸೂರಿಗೆ ಆಗಮಿಸಿದ್ದ ವೇಳೆ ಕನ್ನಡ ಸಾಹಿತ್ಯ ಸಮ್ಮೇಳನ ಸಂಬಂಧ ಜಿಲ್ಲಾ ಕಸಾಪ ಪದಾಧಿಕಾರಿಗಳೊಂದಿಗೆ ಸಭೆ ನಡೆಸಿ, ಸಲಹೆ ಸೂಚನೆಗಳನ್ನು ಪಡೆದ ನಂತರ ಜೂನ್ ಮೊದಲನೆಯ ವಾರದಲ್ಲಿ ನಡೆಸುವುದು ಸೂಕ್ತ ಎಂಬ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ.[ರಾಯಚೂರು ಕನ್ನಡ ಸಾಹಿತ್ಯ ಸಮ್ಮೇಳನ : ಬರಗೂರು ಭಾಷಣದ ಮುಖ್ಯಾಂಶಗಳು]
ಮುಖ್ಯಮಂತಿ ಸಿದ್ದರಾಮಯ್ಯ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ಅವರೊಂದಿಗೆ ಜೂನ್ ಮೊದಲ ವಾರದಲ್ಲಿ ಸಮ್ಮೇಳನ ನಡೆಸುವ ಬಗ್ಗೆ ಚರ್ಚೆ ಮಾಡುವ ಕುರಿತಾಗಿ ಇಂಗಿತ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ. ಜೂನ್ ಎರಡನೆಯ ವಾರದಲ್ಲಿ ಮಳೆಗಾಲ ಆರಂಭವಾಗಲಿರುವುದರಿಂದ ಹಾಗೂ ಶಾಲಾ/ ಕಾಲೇಜುಗಳು ಸಹ ಮೊದಲನೆಯ ವಾರವೇ ಪ್ರಾರಂಭವಾಗಲಿರುವುದರಿಂದ ಸಮ್ಮೇಳನಕ್ಕೆ ಆ ಸಮಯವೇ ಸೂಕ್ತ ಎಂದು ತೀರ್ಮಾನಿಸಲಾಗಿದೆ. ಕಳೆದ ಬಾರಿಯ ಸಾಹಿತ್ಯ ಸಮ್ಮೇಳನ ಡಿಸೆಂಬರ್ ತಿಂಗಳಿನಲ್ಲಿ ಸಾಹಿತಿ ಬರಗೂರು ರಾಮಚಂದ್ರಪ್ಪ ಅವರ ಅಧ್ಯಕ್ಷತೆಯಲ್ಲಿ ರಾಯಚೂರಿನಲ್ಲಿ ನಡೆದಿತ್ತು.[ರಾಯಚೂರಿನಲ್ಲಿ ಕನ್ನಡ ಹಬ್ಬ ಸಹೃದಯರಿಗೇನೇನಿದೆ?]

ವಸ್ತು ಪ್ರದರ್ಶನ ಆವರಣದಲ್ಲಿ ಸಮ್ಮೇಳನ ?
83 ನೆಯ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ದಸರಾ ವಸ್ತು ಪ್ರದರ್ಶನ, ಆವರಣ ಅಥವಾ ಮಹಾರಾಜ ಕಾಲೇಜಿನ ಗ್ರೌಂಡ್ ನಲ್ಲಿ ನಡೆಸಲು ತೀರ್ಮಾನಿಸಲಾಗಿದೆ. ಇನ್ನು ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಅರಮನೆ ಮುಂಭಾಗ ಹಾಗೂ ಪರ್ಯಾಯ ಗೋಷ್ಠಿಗಳನ್ನು ಜಗನ್ಮೋಹನ ಅರಮನೆ ಹಾಗೂ ಪುರಭವನ ವೇದಿಕೆಗಳಲ್ಲಿ ಆಯೋಜಿಸಲು ಮೊದಲ ಸುತ್ತಿನ ಮಾತುಕತೆ ನಡೆಸಲಾಗಿದೆ ಎನ್ನಲಾಗಿದೆ.
ಸ್ಥಳೀಯರಿಗೆ ಹೆಚ್ಚಿನ ಆದ್ಯತೆ
ಇನ್ನು ಸಾಹಿತ್ಯಾಸಕ್ತಿಯುಳ್ಳ ಯುವಕರನ್ನು ನೇಮಿಸಿ ಅವರನ್ನು ಸ್ವಯಂ ಸೇವಕರನ್ನಾಗಿಸುವತ್ತ ಹೆಚ್ಚು ಒತ್ತು ನೀಡಲಾಗುತ್ತಿದೆ. ಅಲ್ಲದೇ ಮೈಸೂರಿನ ಸುತ್ತಮುತ್ತಲ ಜಿಲ್ಲೆಗಳಾದ ಮಂಡ್ಯ, ಚಾಮರಾಜಗನಗರ, ಹಾಸನದಲ್ಲಿ ಅಕ್ಷರ ರಥ ಸಂಚರಿಸುವಂತೆ ಮಾಡಬೇಕೆಂದು ಸಹ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.[82ನೇ ಸಾಹಿತ್ಯ ಸಮ್ಮೇಳನ ಅಧ್ಯಕ್ಷರಾಗಿ ಬರಗೂರು ಆಯ್ಕೆ]
ಜಿಲ್ಲಾಧಿಕಾರಿಗಳಿಗೆ ಆಹ್ವಾನ:
ಇದೇ ವೇಳೆ 83ನೆಯ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಸಂಪೂರ್ಣ ಸಹಕಾರ ನೀಡಿ ಸಮ್ಮೇಳನದ ಯಶಸ್ಸಿಗೆ ಬೆಂಬಲವಾಗಿ ನಿಲ್ಲುವಂತೆ ಜಿಲ್ಲಾ ಕಸಪಾ ಅಧ್ಯಕ್ಷ ಡಾ.ವೈ.ಡಿ.ರಾಜಣ್ಣ ನೇತೃತ್ವದಲ್ಲಿ ಪದಾಧಿಕಾರಿಗಳು ಜಿಲ್ಲಾಧಿಕಾರಿ ಡಿ. ರಂದೀಪ್ರಿಗೆ ಸಾಂಪ್ರದಾಯಿಕವಾಗಿ ಗೌರವ ಸಮರ್ಪಿಸಿ ಮನವಿ ಮಾಡಿದರು. ಒಟ್ಟಾರೆ ಈ ಬಾರಿ ಅಕ್ಷರ ಜಾತ್ರೆಯ ಸೊಗಡು ಮೈಸೂರಿನಲ್ಲಿ ಹೇಗೆ ಕಳೆಗಟ್ಟಲಿದೆ ಎನ್ನುವುದನ್ನು ಕಾದುನೋಡಬೇಕಿದೆ.
-
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
Bengaluru Drone Survey: ಬೆಂಗಳೂರಿನಲ್ಲಿ ಆಸ್ತಿಗಳ ಡ್ರೋನ್ ಸರ್ವೇ: ಇದರ ಉದ್ದೇಶವೇನು, ವಿರೋಧವೇಕೆ ಇಲ್ಲಿದೆ ಮಾಹಿತಿ -
ಇರಾನ್ ಸಂಘರ್ಷ: ಭಾರತದ ಪ್ರಯತ್ನಕ್ಕೆ ಫಲ, ಕೊಲ್ಲಿ ಮಾರ್ಗವಾಗಿ ಭಾರತಕ್ಕೆ ಬಂದ ಮೊದಲ ತೈಲ ಟ್ಯಾಂಕರ್ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
ಭಾರತದ ಹಡಗುಗಳಿಗೆ ಭರ್ಜರಿ ಸುದ್ದಿ ನೀಡಿದ ಇರಾನ್, ಗ್ಯಾಸ್ ಸಮಸ್ಯೆ ಇತ್ಯರ್ಥ ಸಾಧ್ಯತೆ | Operation Roaring Lion -
Swamijis: ಬಹುತೇಕ ಕಾವಿಧಾರಿ ಸ್ವಾಮೀಜಿಗಳು ಅವಿವಾಹಿತರು, ಆದರೆ ಅವರೆಲ್ಲರೂ ಬ್ರಹ್ಮಚಾರಿಗಳಲ್ಲ: ರವಿಕೃಷ್ಣ ರೆಡ್ಡಿ -
ಬೆಂಗಳೂರಿನ ಪ್ರಮುಖ ವಿದ್ಯುತ್ ಸ್ಥಾವರ ಬಂದ್; ರಾಜ್ಯದಲ್ಲಿ ವಿದ್ಯುತ್ ಕಡಿತದ ಭೀತಿ! -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion -
LPG Gas: ಗೃಹ-ವಾಣಿಜ್ಯ ಸಿಲಿಂಡರ್ ಬುಕಿಂಗ್ ಮಿತಿ, ದಾಸ್ತಾನು ನಿಯಮಗಳೇನು? ಗ್ಯಾಸ್ ದರಪಟ್ಟಿ












Click it and Unblock the Notifications