ಕೆಎಸ್ ನಿಸಾರ್ ಅಹ್ಮದ್ ರಿಂದ ಈ ಬಾರಿ ದಸರಾ ಉದ್ಘಾಟನೆ
ಮೈಸೂರು, ಆಗಸ್ಟ್ 17: ಜಗತ್ಪ್ರಸಿದ್ಧ ಮೈಸೂರು ದಸರಾವನ್ನು ಈ ಬಾರಿ ನಿತ್ಯೋತ್ಸವ ಕವಿ ಡಾ.ಕೆ.ಎಸ್.ನಿಸಾರ್ ಅಹಮ್ಮದ್ ಅವರು ಉದ್ಘಾಟಿಸಲಿದ್ದಾರೆ. ಸೆಪ್ಟೆಂಬರ್ 21 ರಿಂದ 30ರ ತನಕ ನಡೆಯಲಿರುವ ದಸರಾ ಮಹೋತ್ಸವಕ್ಕೆ ಸೆಪ್ಟೆಂಬರ್ ಎರಡನೇ ವಾರದಲ್ಲಿ ನಿಸಾರ್ ಅಹಮದ್ ಅವರಿಗೆ ಆಹ್ವಾನ ನೀಡಲಾಗುವುದು ಎಂದು ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಚ್.ಸಿ.ಮಹಾದೇವಪ್ಪ ಹೇಳಿದರು.
ಅರಮನೆಗೆ ಬಂದ ದಸರಾ ಗಜಪಡೆಯನ್ನು ಸ್ವಾಗಸಿದ ಬಳಿಕ ಸಚಿವ ಡಾ.ಎಚ್.ಸಿ.ಮಹದೇವಪ್ಪ, ಈ ಬಾರಿ ದಸರಾ ಮಹೋತ್ಸವ ಉದ್ಘಾಟನೆಯನ್ನ ನಿತ್ಯೋತ್ಸವ ಕವಿ.ಕೆ.ಎಸ್.ನಿಸಾರ್ ಅಹಮದ್ ನೆರವೇರಿಸಲಿದ್ದಾರೆ. ಈಗಾಗಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದೂರವಾಣಿ ಮೂಲಕ ಮಾತನಾಡಿದ್ದಾರೆ. ಶೀಘ್ರದಲ್ಲೇ ಅವರಿಗೆ ಅಧಿಕೃತವಾಗಿ ಆಹ್ವಾನವನ್ನು ನೀಡಲಾಗುತ್ತದೆ ಎಂದು ಪ್ರಕಟಿಸಿದರು.
Comments
English summary
Kannada writer and famous poet Dr.K.S.Nissar Ahmad will inaugurate world famous Dasara, which will be taking place from September 21st to 30th this year, Mysuru district incharge H C Mahadevappa told to media in Mysuru on Aug 17th.