ಶ್ರೀಕಂಠದತ್ತ ಒಡೆಯರ್ ಉತ್ತರಾಧಿಕಾರಿ ಯಾರು?
ಮೈಸೂರು, ಡಿ. 11 : ಶ್ರೀಕಂಠದತ್ತ ನರಸಿಂಹರಾಜ ಒಡೆಯರ್ ಸಾವಿನ ಬಳಿಕ ಯದುವಂಶದ ಮುಂದಿನ ಉತ್ತರಾಧಿಕಾರಿ ಯಾರು? ಎಂಬ ಕುತೂಹಲಕಾರಿ ಪ್ರಶ್ನೆ ಉದ್ಭವವಾಗಿದೆ. ಯಾರಿಗೆ ಪಟ್ಟಾಭಿಷೇಕ ಮಾಡಬೇಕು ಎಂಬ ಕುರಿತು ಒಡೆಯರ್ ವಿಲ್ ಬರೆದಿಟ್ಟಿದ್ದಾರೆಯೇ? ಎಂಬ ಕುತೂಹಲಗಳಿಗೆ ಇನ್ನೂ ತೆರೆ ಬಿದ್ದಿಲ್ಲ. ಆದರೆ, ಒಡೆಯರ್ ಅಂತ್ಯಕ್ರಿಯೆ ಆಗುವ ಮೊದಲು ಉತ್ತಾರಾಧಿಕಾರಿ ಯಾರು ಎಂಬ ಪ್ರಶ್ನಗೆ ಉತ್ತರ ದೊರೆಯಲಿದೆ.
ಶ್ರೀಕಂಠದತ್ತ ಒಡೆಯರ್ ಮತ್ತು ಪ್ರಮೋದದೇವಿ ಅವರಿಗೆ ಮಕ್ಕಳಿರಲಿಲ್ಲ. ಆದ್ದರಿಂದ ಖಾಸಗಿ ಸಂಸ್ಥಾನಕ್ಕೆ ದತ್ತು ಪಡೆಯುವುದು ಅವರಿಗೆ ಅನಿವಾರ್ಯವಾಗಿತ್ತು. ಒಡೆಯರ್ ತಮ್ಮ ಹಿರಿಯ ಸೋದರಿಯರಾದ ಗಾಯತ್ರಿದೇವಿ ಇಲ್ಲವೇ ಮೀನಾಕ್ಷಿ ದೇವಿ ಅವರ ಪುತ್ರರ ಪೈಕಿ ಒಬ್ಬರನ್ನು ಉತ್ತರಾಧಿಕಾರಿಯಾಗಿ ನೇಮಿಸಲು ಸಿದ್ಧತೆ ನಡೆಸಿದ್ದರು ಎಂಬ ಮಾಹಿತಿ ಇತ್ತು. (ಶ್ರೀಕಂಠದತ್ತ ಒಡೆಯರ್ ವಿಧಿವಶ)

ಗಾಯತ್ರಿದೇವಿ ಅವರ ಪುತ್ರ ಕಾಂತರಾಜ ಅರಸ್ ಶ್ರೀಕಂಠದತ್ತ ನರಸಿಂಹರಾಜ ಒಡೆಯರ್ ಉತ್ತರಾಧಿಕಾರಿಯಾಗಿ ನೇಮಕಗೊಳ್ಳಲಿದ್ದಾರೆ ಎಂಬ ಸುದ್ದಿಗಳು ಹಬ್ಬಿವೆ. ಬುಧವಾರ ಶ್ರೀಕಂಠದತ್ತ ನರಸಿಂಹರಾಜ ಒಡೆಯರ್ ಅಂತ್ಯಕ್ರಿಯೆ ಆಗುವ ಮುನ್ನವೇ ಈ ಪ್ರಶ್ನೆಗೆ ಉತ್ತರ ದೊರಕಲಿದ್ದು, ಉತ್ತರಾಧಿಕಾರಿ ಯಾರು ಎಂಬ ಪ್ರಶ್ನೆ ಬಗೆಹರಿಯಲಿದೆ. (ಮಧುವನದಲ್ಲಿ ಒಡೆಯರ್ ಅಂತ್ಯಕ್ರಿಯೆಗೆ ಸಕಲ ಸಿದ್ಧತೆ)
ಶ್ರೀಕಂಠದತ್ತ ಒಡೆಯರ್ ಮೊದಲಿನಿಂದಲೂ ಗಾಯತ್ರಿದೇವಿ ಅವರ ಪುತ್ರ ಕಾಂತರಾಜೇ ಅರಸ್(36) ಬಗ್ಗೆ ವಿಶೇಷ ಪ್ರೀತಿ ಹೊಂದಿದ್ದರು. ಆದ್ದರಿಂದ ಅವರನ್ನು ಉತ್ತರಾಧಿಕಾರಿಯಾಗಿ ನೇಮಿಸುವ ಸಾಧ್ಯತೆ ಗಳಿವೆ. ಶ್ರೀಕಂಠದತ್ತ ಒಡೆಯರ್ ಈ ಕುರಿತು ವಿಲ್ ಬರೆದಿಟ್ಟಿದ್ದು, ಬುಧವಾರ ಅವರ ಅಂತ್ಯಕ್ರಿಯೆಗಿಮತ ಮೊದಲು ಅದನ್ನು ಬಹಿರಂಗಪಡಿಸಲಾಗುತ್ತದೆ ಎಂದು ತಿಳಿದು ಬಂದಿದೆ. (ಒಡೆಯರ್ ಅವರಿಗೆ ಚಿತ್ರ ನಮನ)
ಪ್ರಮೋದದೇವಿ ನಿರ್ಣಾಯಕ : ಶ್ರೀಕಂಠದತ್ತ ಒಡೆಯರ್ ಉತ್ತರಾಧಿಕಾರಿ ಬಗ್ಗೆ ವಿಲ್ ಬರೆದಿಟ್ಟಿದ್ದರೆ ಅದನ್ನು ಅಂತ್ಯ ಸಂಸ್ಕಾರದ ಮುನ್ನ ಬಹಿರಂಗಪಡಿಸಲಾಗುತ್ತದೆ. ಇಲ್ಲವಾದಲ್ಲಿ ಒಡೆಯರ್ ಪತ್ನಿ ಪ್ರಮೋದದೇವಿ ಉತ್ತಾಧಿಕಾರಿ ಆಯ್ಕೆಯ ಬಗ್ಗೆ ಅಂತಿಮ ನಿರ್ಧಾರ ತೆಗೆದುಕೊಳ್ಳಲಿದ್ದಾರೆ.ಕೆಲವು ಗಂಟೆಗಳಲ್ಲಿ ಈ ಉತ್ತರಾಧಿಕಾರಿ ಯಾರು? ಎಂಬ ಕುತೂಹಲಗಳಿಗೆ ತೆರೆಬೀಳಲಿದೆ.
-
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
Pratham: ನಟ ಪ್ರಥಮ್ ಬೆಂಗಳೂರು ತೊರೆಯಲು ದರ್ಶನ್ ಅಭಿಮಾನಿಗಳ ಗಲಾಟೆ ಕಾರಣವೇ? ಅಸಲಿ ಕಾರಣ ಬಿಚ್ಚಿಟ್ಟ ಒಳ್ಳೆ ಹುಡುಗ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
ದಾವಣಗೆರೆಯಲ್ಲಿ ಹೈಡ್ರಾಮಾ: ಪ್ರದೀಪ್ ಈಶ್ವರ್ ಪ್ರಚಾರದ ವೇಳೆ ಚಪ್ಪಲಿ, ಪೊರಕೆ ತೋರಿಸಿದ ಬಿಜೆಪಿ ಕಾರ್ಯಕರ್ತರು -
ಬೆಂಗಳೂರಿನ ಫುಟ್ಪಾತ್ಗಳ ದುರಸ್ತಿಗೆ ಶ್ರಮಿಸಿದ್ದ ಕೆನಡಾ ಪ್ರಜೆ ಈಗ ಮಿಜೋರಾಂಗೆ ಶಿಫ್ಟ್: 'ಬೆಂಗಳೂರಿಗೆ ವಿದಾಯ' ಎಂದ Vlogger -
Vijay Mallya: ವಿಜಯ್ ಮಲ್ಯ ಆರ್ಸಿಬಿಗೆ ಇಂಗ್ಲೀಷ್ ಪದಗಳಲ್ಲಿ ಕನ್ನಡದ ವಿಶೇಷ ಸಂದೇಶ: ಭಾರೀ ವೈರಲ್ -
ಸಕಲೇಶಪುರ: ಬೆಟ್ಟದ ಭೈರವೇಶ್ವರ ದೇವಸ್ಥಾನದಲ್ಲಿ ಪ್ರೀ-ವೆಡ್ಡಿಂಗ್ ಶೂಟ್ ವೇಳೆ ಸ್ಥಳೀಯರಿಂದ ಹಲ್ಲೆ -
ಐಪಿಎಲ್ 2026: ಆರ್ಸಿಬಿ-ಎಸ್ಆರ್ಎಚ್ ಪಂದ್ಯದ ಸಮಯ, ನೇರಪ್ರಸಾರ, ಸಂಪೂರ್ಣ ತಂಡಗಳ ವಿವರ ತಿಳಿಯಿರಿ -
March 28 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Viral ಆಯ್ತು ಅಕೌಂಟ್ಸ್ ಪ್ರಶ್ನೆಪತ್ರಿಕೆ: ಪರೀಕ್ಷೆಯಲ್ಲೂ ಮಿಂಚಿದ 'ಧುರಂಧರ್: ದಿ ರಿವೆಂಜ್' ಸಿನಿಮಾದ ಪಾತ್ರಗಳು -
ಹಿಂದಿ ರಾಜ್ಯಗಳಲ್ಲಿ ಕನ್ನಡವನ್ನ ಕಡ್ಡಾಯ ಮಾಡಿ: ವಿಜಯೇಂದ್ರಗೆ ನೇರ ಸವಾಲು ಹಾಕಿದ ಕರವೇ ನಾರಾಯಣಗೌಡ












Click it and Unblock the Notifications