ನಂಜನಗೂಡಿನಿಂದ ಕಾಂಗ್ರೆಸ್ ಅಭ್ಯರ್ಥಿ ಇವರು, ನಿರೀಕ್ಷೆ ಸುಳ್ಳಾಗಿಲ್ಲ!
ನಂಜನಗೂಡು, ಮಾರ್ಚ್ 25: ಕರ್ನಾಟಕ ವಿಧಾನಸಭೆ ಚುನಾವಣೆಗೆ ಕಾಂಗ್ರೆಸ್ನ 124 ಅಭ್ಯರ್ಥಿಗಳ ಮೊದಲ ಪಟ್ಟಿ ಬಿಡುಗಡೆಯಾಗಿದೆ. ಇಲ್ಲಿ ನಿರೀಕ್ಷೆಯಂತೆ ಕೆಪಿಸಿಸಿ ಕಾರ್ಯಾಧ್ಯಕ್ಷರಾಗಿದ್ದ ದಿವಂಗತ ಧ್ರುವನಾರಯಣ್ ಅವರ ಮಗ ದರ್ಶನ್ ಅವರಿಗೆ ನಂಜನಗೂಡು ಮೀಸಲು ವಿಧಾನಸಭಾ ಕ್ಷೇತ್ರದಿಂದ ಟಿಕೆಟ್ ನೀಡಲಾಗಿದೆ.
ಅಕಾಲ ಮರಣ ಹೊಂದಿದ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಕಾರ್ಯಾಧ್ಯಕ್ಷ ಆರ್ ಧ್ರುವನಾರಾಯಣ ಅವರ ಸಾವು ಮೈಸೂರು, ಚಾಮರಾಜನಗರದ ಕಾಂಗ್ರೆಸ್ ಕಾರ್ಯಕರ್ತರಿಗೆ ಬಹುದೊಡ್ಡ ಆಘಾತ ನೀಡಿತ್ತು. ನಂಜನಗೂಡು ವಿಧಾನಸಭಾ ಕ್ಷೇತ್ರದ ಟಿಕೆಟ್ ಆಕಾಂಕ್ಷಿಯಾಗಿದ್ದ ಆರ್ ಧ್ರುವನಾರಾಯಣ ಅವರ ನಿಧನದಿಂದ ಈಗ ಕ್ಷೇತ್ರದಲ್ಲಿ ಅವರ ಪುತ್ರ ದರ್ಶನಗೆ ಕಾಂಗ್ರೆಸ್ ಟಿಕೆಟ್ ಘೋಷಣೆ ಮಾಡಬೇಕು ಎಂಬ ಆಗ್ರಹಗಳು ಹೆಚ್ಚಾಗಿದ್ದವು.

ನಂಜನಗೂಡು ಟಿಕೆಟ್ ಆಕಾಂಕ್ಷಿಯಾಗಿದ್ದ ಕೆಪಿಸಿಸಿ ಕಾರ್ಯಾಧ್ಯಕ್ಷರೂ ಆಗಿದ್ದ ಆರ್ ಧ್ರುವನಾರಾಯಣ ಅವರು ನಂಜನಗೂಡು ವಿಧಾನಸಭಾ ಕ್ಷೇತ್ರದಿಂದ ಪ್ರಚಾರ ಆರಂಭಿಸಿದ್ದರು. ನಿರ್ಣಯ ತೆಗೆದುಕೊಳ್ಳುವ ಸ್ಥಾನದಲ್ಲಿದ್ದ ಅವರಿಗೆ ಹೈಕಮಾಂಡ್ ಟಿಕೆಟ್ ಇಲ್ಲ ಎಂದು ಹೇಳುವ ಸಾಧ್ಯತೆಯೂ ಇರಲಿಲ್ಲ. ಆದರೆ ಅವರ ಅಕಾಲಿಕ ಮರಣದಿಂದ ನಂಜನಗೂಡು ಟಿಕೆಟ್ ಮಾಜಿ ಲೋಕೋಪಯೋಗಿ ಸಚಿವ ಎಚ್ಸಿ ಮಹದೇವಪ್ಪ ಅವರಿಗೆ ಸಿಗುತ್ತದೆ ಎಂದು ಹೇಳಲಾಗಿತ್ತು.']
ಆದರೆ ಆರ್ ಧ್ರುವನಾರಾಯಣ್ ನಿಧನದಿಂದ ಕಾರ್ಯಕರ್ತರು ಅವರ ಮಗ ದರ್ಶನ್ಗೆ ಟಿಕೆಟ್ ನೀಡಬೇಕು ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುಣ ಖರ್ಗೆ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ಸಿದ್ದರಾಮಯ್ಯ ಅವರ ಮುಂದೆ ದುಂಬಾಲು ಬಿದ್ದಿದ್ದರು. ಧ್ರುವನಾರಾಯಣ್ ಮಗ ದರ್ಶನ್ಗೆ ಟಿಕೆಟ್ ಕೊಡಲೇಬೇಕು. ಇಲ್ಲದಿದ್ದರೆ ಚಾಮರಾಜನಗರ ಹಾಗೂ ಮೈಸೂರು ಜಿಲ್ಲೆ ಎರಡಲ್ಲೂ ಕಾಂಗ್ರೆಸ್ ಸೋಲಿಸುವುದಾಗಿ ಸ್ವತಃ ಕಾಂಗ್ರೆಸ್ ಕಾರ್ಯಕರ್ತರೇ ಆಕ್ರೋಶವನ್ನು ವ್ಯಕ್ತಪಡಿಸಿದ್ದರು.

ಹೀಗಾಗಿ ಕಾರ್ಯಕರ್ತರ ಒತ್ತಾಯಕ್ಕೆ ಮಣಿದು ಧ್ರುವನಾರಾಯಣ್ ಅವರ ಮಗ ದರ್ಶನ್ಗೆ ಟಿಕೆಟ್ ನೀಡಲಾಗಿದೆ. ನಂಜನಗೂಡು ಮೀಸಲು ವಿಧಾನಸಭಾ ಕ್ಷೇತ್ರದಿಂದ ಮಾಜಿ ಸಚಿವ ಎಚ್ಸಿ ಮಹಾದೇವಪ್ಪ ಕೂಡ ಟಿಕೆಟ್ ಆಕಾಂಕ್ಷಿಯಾಗಿದ್ದರು. ಕೊನೆಗೆ ಅವರನ್ನು ಹೈಕಮಾಂಡ್ ಸಂಭಾಳಿಸಿ ಕಾರ್ಯಕರ್ತರ ಒತ್ತಾಸೆಯಂತೆ ಈಗ ದರ್ಶನ್ ಧ್ರುವನಾರಾಯಣ್ಗೆ ಟಿಕೆಟ್ ನೀಡಲಾಗಿದೆ. ಕಳೆದ ವಿಧಾನಸಭೆ ಚುನಾವಣೆಯಲ್ಲಿ ಹಾಲಿ ಶಾಸಕರಾಗಿರುವ ಹರ್ಷವರ್ಧನ್ ಅವರು ಬಿಜೆಪಿಯಿಂದ ಇಲ್ಲಿ ಜಯಗಳಿಸಿದ್ದರು. ಅವರು ಮಾಜಿ ಕಂದಾಯ ಸಚಿವ ವಿ ಶ್ರೀನಿವಾಸ್ಪ್ರಸಾದ್ ಅವರ ಅಳಿಯ ಕೂಡ.
ಈಗ ದರ್ಶನ್ ಕಣಕ್ಕಿಳಿಯುತ್ತಿರುವುದರಿಂದ ಹರ್ಷವರ್ಧನ್ ಗೆಲ್ಲುವುದು ಅಷ್ಟು ಸುಲಭವಾಗೇನೂ ಇಲ್ಲ. ಕಾರಣ ಇಲ್ಲಿ ದರ್ಶನ್ ಅನುಕಂಪದ ಆಧಾರದ ಮೇಲೆ ಗೆಲ್ಲಲುಬಹುದು. ಸದ್ಯ ಎಚ್ಸಿ ಮಹಾದೇವಪ್ಪ ಅವರಿಗೆ ಟಿ ನರಸೀಪುರದಿಂದ ಟಿಕೆಟ್ ನೀಡಲಾಗಿದೆ. ಅವರು ತಮ್ಮ ಸ್ವಂತ ಕ್ಷೇತ್ರವಾದ ಟಿ ನರಸೀಪುರ ವಿಧಾನಸಭಾ ಕ್ಷೇತ್ರವನ್ನು ತಮ್ಮ ಪುತ್ರ ಸುನೀಲ್ ಬೋಸ್ಗೆ ಬಿಟ್ಟುಕೊಟ್ಟು ತಾವು ನಂಜನಗೂಡು ವಿಧಾನಸಭಾ ಕ್ಷೇತ್ರದಿಂದ ಟಿಕೆಟ್ ಬಯಸಿದ್ದರು. ಈಗ ಧ್ರುವನಾರಾಯಣ ಅವರ ನಿಧನದಿಂದ ಅವರ ಮಗ ದರ್ಶನ್ಗೆ ಟಿಕೆಟ್ ನೀಡಲಾಗಿದೆ.
ಆರ್. ಧ್ರುವನಾರಾಯಣ ಅವರ ನಿಧನದಿಂದ ಮುಂದಿನ ಅಭ್ಯರ್ಥಿಯಾಗಿ ಅವರ ಪುತ್ರನೇ ನಂಜನಗೂಡು ವಿಧಾನಸಭಾ ಕ್ಷೇತ್ರದಲ್ಲಿ ಅಭ್ಯರ್ಥಿಯಾಗಿ ನಿಲ್ಲಬೇಕು ಎಂದು ಕಾರ್ಯಕರ್ತರು ಆಪಾರ ಒತ್ತಡ ತಂದಿದ್ದಾರೆ. ಹೀಗಾಗಿ ದರ್ಶನ್ಗೆ ಟಿಕೆಟ್ ನಿಖರವಾಗಿ ಸಿಗುತ್ತದೆ ಎಂದು ಹೇಳಲಾಗಿದೆ. ಆರ್. ಧ್ರುವನಾರಾಯಣ್ ಅವರ ನಿಧನ ಸಂದರ್ಭದಲ್ಲಿ ಸ್ಥಳಕ್ಕೆ ಹೋಗಿದ್ದ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ, ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್, ಮಾಜಿ ಉಪ ಮುಖ್ಯಮಂತ್ರಿ ಜಿ. ಪರಮೇಶ್ವರ್, ಮಾಜಿ ಸಿಎಂ ಸಿದ್ದರಾಮಯ್ಯ ಅವರಿಗೆ ಧ್ರುವನಾರಾಯಣ ಅವರ ಮೈಸೂರಿನ ವಿಜಯನಗರದ ನಿವಾಸ ಹಾಗೂ ಅವರ ಸ್ವಗ್ರಾಮ ಹೆಗ್ಗವಾಡಿಯಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಬಹಿರಂಗವಾಗಿ ಧ್ರುವನಾರಾಯಣ ಅವರ ಪುತ್ರ ದರ್ಶನ್ಗೆ ಟಿಕೆಟ್ ನೀಡಬೇಕು ಎಂದು ಕೂಗಿ ಹಾಕಿ ಆಗ್ರಹಪಡಿಸುತ್ತಲೇ ಇದ್ದರು.
-
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
KSRTC: ಸಾರಿಗೆ ಲೋಕಕ್ಕೆ 'ಪಲ್ಲಕ್ಕಿ' ಮೆರುಗು: ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ 115 ಹೊಸ ಬಸ್ಗಳ ಲೋಕಾರ್ಪಣೆ -
ಬೆಂಗಳೂರಲ್ಲಿ ಗ್ಯಾಸ್ ಏಜೆನ್ಸಿಗಳ ಭರ್ಜರಿ ದಂಧೆ: ಸಿಲಿಂಡರ್ ಸಿಗದೇ ಗ್ರಾಹಕರು ಕಂಗಾಲು; ಕಾಳಸಂತೆಯಲ್ಲಿ ₹3,000ಕ್ಕೆ ಮಾರಾಟ -
LPG Gas: ಎಲ್ಪಿಜಿ ನಿಯಮಗಳಲ್ಲಿ ಭಾರೀ ಬದಲಾವಣೆ; ಗ್ರಾಹಕರು ದೂರು ನೀಡಲು ಸಹಾಯವಾಣಿ ಸಂಖ್ಯೆಗಳ ಬಿಡುಗಡೆ -
Gold Rate March 13: ಸತತ 3ನೇ ದಿನವೂ ಚಿನ್ನ - ಬೆಳ್ಳಿ ಬೆಲೆ ಭರ್ಜರಿ ಕುಸಿತ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
Resort: ಕರ್ನಾಟಕದಲ್ಲಿ ಶುರುವಾಯ್ತು ರೆಸಾರ್ಟ್ ರಾಜಕೀಯ: ‘ಅವರು ನಮ್ಮ ಅತಿಥಿಗಳು’ ಎಂದ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ -
Horoscope March 13: ಈ ರಾಶಿಯವರ ಬದುಕಲ್ಲಿ ಸಕಾರಾತ್ಮಕ ಬೆಳವಣಿಗೆ, ಅಧಿಕ ಲಾಭ; ದಿನ ಭವಿಷ್ಯ












Click it and Unblock the Notifications