Get Updates
Get notified of breaking news, exclusive insights, and must-see stories!

Karnataka election 2023: ಚಾಮರಾಜಕ್ಕೆ ಜೆಡಿಎಸ್ ಅಭ್ಯರ್ಥಿ ಘೋಷಣೆ, ಭವಾನಿ ರೇವಣ್ಣ ಅಲ್ಲ ಮತ್ಯಾರು?, ಇಲ್ಲಿದೆ ಮಾಹಿತಿ

ಮೈಸೂರು, ಏಪ್ರಿಲ್‌, 17: ವಿಧಾನಸಭೆ ಚುನಾವಣೆ ಕಣ ದಿನದಿಂದ ದಿನಕ್ಕೆ ರಂಗೇರುತ್ತಲ್ಲಿದ್ದು, ಎಲ್ಲಾ ಪಕ್ಷಗಳಲ್ಲೂ ಹಲವು ಬದಲಾವಣೆಗಳು ಆಗುತ್ತಿವೆ.

ಹಾಗೆಯೇ ಬಹಳ ಕುತೂಹಲ ಮೂಡಿಸಿದ್ದ ಚಾಮರಾಜ ಕ್ಷೇತ್ರಕ್ಕೆ ಜೆಡಿಎಸ್ ಕೊನೆಗೂ ಅಭ್ಯರ್ಥಿ ಹೆಸರನ್ನು ಘೋಷಣೆ ಮಾಡಿದೆ. ಮತ್ತೊಂದೆಡೆ ಎಚ್.ಡಿ.ರೇವಣ್ಣ ಅವರ ಪತ್ನಿ ಭವಾನಿ ರೇವಣ್ಣ ಚಾಮರಾಜ ಕ್ಷೇತ್ರಕ್ಕೆ ಬರುತ್ತಾರೆಂಬ ನಿರೀಕ್ಷೆ ಹುಸಿಗೊಂಡಿದ್ದು, ಕ್ಷೇತ್ರಕ್ಕೆ ಜೆಡಿಎಸ್ ಅಭ್ಯರ್ಥಿಯಾಗಿ ಎಚ್. ಕೆ.ರಮೇಶ್ ಅವರನ್ನು ಕಣಕ್ಕಿಳಿಸಲು ನಿರ್ಧರಿಸಿದೆ. ಈ ಮೂಲಕ ಕುತೂಹಲಕ್ಕೆ ತೆರೆ ಎಳೆಯಲಾಗಿದೆ.

Karnataka election 2023: JDS candidate Announcement for Chamaraja Constituency

ಇನ್ನು ಎಚ್.ಡಿ.ಕೋಟೆಯ ಪಂಚರತ್ನ ಯಾತ್ರೆಯಲ್ಲಿ ಪಾಲ್ಗೊಂಡಿದ್ದ ಮಾಜಿ ಸಿಎಂ ಎಚ್‌.ಡಿ. ಕುಮಾರಸ್ವಾಮಿ ಅವರು ಜನತಾ ಪಕ್ಷದಲ್ಲಿ ಶಾಸಕರಾಗಿದ್ದ ಕೆಂಪೇಗೌಡರ ಪುತ್ರ ಎಚ್‌.ಕೆ.ರಮೇಶ್‌ಗೆ ಪಟ್ಟಣದ ತಾತ್ಕಾಲಿಕ ಹೆಲಿಪ್ಯಾಡ್‌ನಲ್ಲಿ ಬಿ ಫಾರಂ ನೀಡಿ ಕುತೂಹಲಕ್ಕೆ ತೆರೆ ಎಳೆದಿದ್ದಾರೆ.

ಹಾಸನ ಕ್ಷೇತ್ರದಲ್ಲಿ ಟಿಕೆಟ್ ವಂಚಿತರಾಗಿದ್ದ ಭವಾನಿ ರೇವಣ್ಣ ಅವರು ಚಾಮರಾಜ ಕ್ಷೇತ್ರದಿಂದ ಸ್ಪರ್ಧಿಸುತ್ತಾರೆ ಎನ್ನುವ ಊಹಾಪೋಹಕ್ಕೆ ಇದೀಗ ಎಚ್‌.ಡಿ.ಕುಮಾರಸ್ವಾಮಿ ಅವರು ತೆರೆ ಎಳೆದಿದ್ದಾರೆ. ಟಿಕೆಟ್ ಆಕಾಂಕ್ಷಿಗಳಾಗಿದ್ದ ಮಹಾನಗರ ಪಾಲಿಕೆ ಸದಸ್ಯರಾದ ಎಸ್‌.ಬಿ.ಎಂ. ಮಂಜು, ಕೆ.ವಿ.ಶ್ರೀಧರ್, ಅವ್ವ ಮಾದೇಶ್, ಪ್ರೇಮಾ ಶಂಕರೇಗೌಡ, ಶೋಭಾ ಮಹದೇವ್‌ ಸೇರಿದಂತೆ ಇನ್ನುಳಿದವರು ತೆರೆಮರೆಗೆ ತೆರೆಮರೆಗೆ ಸರಿದುಕೊಂಡಿದ್ದಾರೆ.

ವಾಸುಗೆ ಕಾಂಗ್ರೆಸ್‌ ಟಿಕೆಟ್‌ ಮಿಸ್‌

ಕಾಂಗ್ರೆಸ್ ಟಿಕೆಟ್ ಕೈ ತಪ್ಪಿದ ಹಿನ್ನೆಲೆಯಲ್ಲಿ ವಾಸು ಅವರು ಜೆಡಿಎಸ್ ಕೈ ಹಿಡಿಯಲಿದ್ದಾರೆ ಎನ್ನುವ ಮಾತುಗಳು ಕೇಳಿಬಂದಿದ್ದವು. ಆದರೆ, ವಾಸು ಅವರು ಸದ್ಯ ಯಾವುದೇ ನಿರ್ಧಾರವನ್ನು ಕೈಗೊಳ್ಳದಿದ್ಧರಿಂದ ಪಕ್ಷ ರಮೇಶ್‌ಗೆ ಬಿ ಫಾರಂ ನೀಡಿದೆ ಎನ್ನುವ ಕೂಗು ಎದ್ದಿದೆ.

Karnataka election 2023: JDS candidate Announcement for Chamaraja Constituency

ವರುಣಗೆ ಡಾ.ಭಾರತೀಶಂಕ‌ರ್

ಕಾಂಗ್ರೆಸ್‌ನಿಂದ ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ, ಬಿಜೆಪಿಯಿಂದ ಸಚಿವ ವಿ.ಸೋಮಣ್ಣ ಸ್ಪರ್ಧಿಸುತ್ತಿರುವ ವರುಣ ಕ್ಷೇತ್ರಕ್ಕೆ ಜೆಡಿಎಸ್ ಅಭ್ಯರ್ಥಿಯನ್ನು ಬದಲಾವಣೆ ಮಾಡಿದೆ. ಈ ಹಿಂದೆಯೂ ಸಹ ಇದೇ ಕ್ಷೇತ್ರದಲ್ಲಿ ಸ್ಪರ್ಧಿಸಿದ್ದ ಅಭಿಷೇಕ್ ಅವರಿಗೆ ಈ ಬಾರಿಯೂ ಟಿಕೆಟ್ ಘೋಷಣೆ ಮಾಡಲಾಗಿತ್ತು. ಆದರೆ ಅಭಿಷೇಕ್ ಮಾತ್ರ ಯಾವುದೇ ಪ್ರಚಾರ ಕಾರ್ಯದಲ್ಲಿ ತೊಡಗದೆ ತಟಸ್ಥರಾಗಿ ಇದ್ದರು.

ಈ ಬೆಳವಣಿಗೆಗಳನ್ನು ಗಮನಿಸಿದ ಜೆಡಿಎಸ್‌ ಇವರ ಬದಲಿಗೆ ಮತ್ತೊಬ್ಬ ಅಭ್ಯರ್ಥಿಯನ್ನು ಘೋಷಿಸಬೇಕು ಎಂಬ ಒತ್ತಡ ಕಾರ್ಯಕರ್ತರಿಂದ ಬಂದಿತ್ತು. ಅದರಂತೆಯೇ ತಿ.ನರಸೀಪುರ ಬಿಜೆಪಿ ಟಿಕೆಟ್ ವಂಚಿತ, ಮಾಜಿ ಶಾಸಕ ಡಾ.ಭಾರತೀ ಶಂಕರ್ ಅವರನ್ನು ಜೆಡಿಎಸ್‌ಗೆ ಸೇರ್ಪಡೆ ಮಾಡಿಕೊಂಡು ಅವರಿಗೆ ವರುಣ ಕ್ಷೇತ್ರದ ಜೆಡಿಎಸ್ ಟಿಕೆಟ್ ನೀಡಲಾಗಿದೆ. ನರಸಿಂಹರಾಜ ಹೊರತುಪಡಿಸಿ ಜಿಲ್ಲೆಯ ಎಲ್ಲಾ ಕ್ಷೇತ್ರಗಳಿಗೂ ಜೆಡಿಎಸ್ ತನ್ನ ಅಭ್ಯರ್ಥಿಯನ್ನು ಘೋಷಿಸಿದ್ದು, ಎನ್.ಆರ್.ನಲ್ಲಿ ಕುತೂಹಲ ಹುಟ್ಟುಹಾಕಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+