ಮೈಸೂರಿನಲ್ಲಿ ಮತದಾನ ಮಾಡಿದ ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್
ಮೈಸೂರು, ಮೇ, 10: ರಾಜ್ಯ ವಿಧಾನಸಭೆ ಚುನಾವಣೆಯ ಮತದಾನ ನಡೆಯತ್ತಿದ್ದು, ಈಗಾಗಲೇ ಹಲವು ರಾಜಕೀಯ ನಾಯಕ, ಸಿನಿಮಾ ನಟ, ನಟರು ಮತದಾನ ಮಾಡಿದ್ದಾರೆ. ಹಾಗೆಯೆ ರಾಜವಂಶಸ್ಥೆ ಪ್ರಮೋದಾ ದೇವಿ ಒಡೆಯರ್ ಅವರು ಮತದಾನ ಮಾಡಿದರು.
ಮತಗಟ್ಟೆಗೆ ಆಗಮಿಸಿದ ಪ್ರಮೋದಾ ದೇವಿ ಅವರು ದಾಖಲೆ ಮರೆತು ಬಂದಿದ್ದರು. ಮತಗಟ್ಟೆಗೆ ಆಗಮಿಸಿದ ವೇಳೆ ಮೂಲ ದಾಖಲೆ ತರುವಂತೆ ಮತಗಟ್ಟೆ ಅಧಿಕಾರಿಗಳು ಮನವಿ ಮಾಡಿದ್ದರಿಂದ ಮತ್ತೆ ಬಂದು ವೋಟ್ ಮಾಡುವುದಾಗಿ ತಿಳಿಸಿ ಹಿಂದಿರುಗಿದರು. ಬಳಿಕ ಮೂಲ ದಾಖಲೆ ತರುವಂತೆ ಆಪ್ತರಿಗೆ ಸೂಚಿಸಿದ ಒಡೆಯರ್ ಅವರು, ಮತಗಟ್ಟೆ ಹೊರ ಭಾಗ ಕಾರಿನಲ್ಲಿ ಕುಳಿತಿದ್ದರು. ನಂತರ ಮೂಲಕ ದಾಖಲೆ ಪಡೆದು ಮತಗಟ್ಟೆಗೆ ತೆರಳಿ ಮತ ಚಲಾಯಿಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಪ್ರಮೋದಾ ದೇವಿ ಒಡೆಯರ್ ಅವರು, ಮೊದಲೆಲ್ಲಾ ಪಾರ್ಟಿಯಿಂದ ಚೀಟಿ ಕೊಡುತ್ತಿದ್ದರು. ಈ ಬಾರಿ ಆಫೀಸ್ನಿಂದ ಚೀಟಿ ಕೊಟ್ಟಿದ್ದಾರೆ. ಅದರಲ್ಲಿ ಎಲ್ಲಾ ಮಾಹಿತಿ ಇದೆ. ಅದರ ಭರವಸೆ ಮೇಲೆ ಬೇರೆ ಚೀಟಿ ಬೇಕಿಲ್ಲ ಅಂತಾ ಬಂದಿದ್ದೆ. ಆದರೆ ಅದು ಸಾಲಲ್ಲ, ಬೇರೆ ದಾಖಲೆ ಬೇಕು ಅಂತಾ ಅಲ್ಲಿನ ಅಧಿಕಾರಿಗಳು ಹೇಳಿದರು. ಹಾಗಾಗಿ ಮತದಾನ ನಿಧಾನ ಆಯಿತು ಎಂದು ಹೇಳಿದರು.
ಯುವಕರು ಮತದಾನದ ಮೂಲಕ ತಮ್ಮ ಭಾವನೆ ವ್ಯಕ್ತಪಡಿಸಬೇಕು. ಅಲ್ಲದೆ ನಮ್ಮ ಧ್ವನಿ ಕೇಳಲ್ಲ ಅಂದರೆ ಏನೂ ಮಾಡುವುದಕ್ಕೆ ಆಗುವುದಿಲ್ಲ. ಅವಕಾಶ ಸಿಕ್ಕಾಗ ನಿಮ್ಮ ಭಾವನೆ ವ್ಯಕ್ತಪಡಿಸಿ. ನಿಮ್ಮ ನಿರಾಸಕ್ತಿ ಏನೇ ಇದ್ದರೂ ಅದನ್ನು ಇಲ್ಲಿ ವ್ಯಕ್ತಪಡಿಸಿ. ನಾನೂ ಕೂಡ ಅದೇ ಉದ್ದೇಶದಿಂದ ಮತದಾನ ಮಾಡಿದ್ದೇನೆ ಎಂದು ಹೇಳಿದರು.
ಮೊಬೈಲ್ಗೆ ನಿರ್ಬಂಧ
ಅಲ್ಲದೆ ಮತಗಟ್ಟೆಯಲ್ಲಿ ಮತ ಚಲಾಯಿಸಲು ಸಾಕಷ್ಟು ಮಂದಿ ಮತದಾರರು ಗುರುತಿನ ಚೀಟಿ ಸೇರಿದಂತೆ ಹಲವು ದಾಖಲೆಗಳ ಕಾಪಿಯನ್ನು ಮೊಬೈಲ್ನಲ್ಲಿ ಸೇವ್ ಮಾಡಿಕೊಂಡಿದ್ದರು. ಅಲ್ಲದೆ ಪರಿಶೀಲನೆ ವೇಳೆ ಇದನ್ನೇ ತೋರಿಸಲು ಇಟ್ಟು ಕೊಂಡಿದ್ದರು. ಈ ವೇಳೆ ಪೊಲೀಸರು ಮತಗಟ್ಟೆಯೊಳಗೆ ಮೊಬೈಲ್ಗೆ ಅವಕಾಶವಿಲ್ಲ ಎಂದು ನಿರ್ಬಂಧ ವಿಧಿಸಿದ್ದು, ಇದರಿಂದ ಮತದಾರರು ಪರದಾಡುವಂತಾಯಿತು.
ನಂತರ ಮತದಾರರು ಮೊಬೈಲ್ ಅನ್ನು ಹೊರಗೆ ಇಟ್ಟು ಮತದಾನಕ್ಕೆ ತೆರಳಿದರು.
ಮತಗಟ್ಟೆಯಲ್ಲಿ ಮತದಾನಕ್ಕೆ ಬರುವ ಸಾರ್ವಜನಿಕರಿಗೆ ಅಗತ್ಯ ಮಾಹಿತಿ ನೀಡಲು ಜಿಲ್ಲಾಡಳಿತ ಶಾಲಾ ವಿದ್ಯಾರ್ಥಿಗಳನ್ನು ನಿಯೋಜನೆ ಮಾಡಿತ್ತು. ಆದ್ದರಿಂದ ಪ್ರತಿ ಮತಗಟ್ಟೆಯಲ್ಲಿಯೂ ವಿದ್ಯಾರ್ಥಿಗಳು ಕೇಂದ್ರಕ್ಕೆ ಬರುವ ಸಾರ್ವಜನಿಕರಿಗೆ ಮತದಾನದ ಕ್ರಮ ಸಂಖ್ಯೆಯೊಂದಿಗೆ ಯಾವ ಬೂತ್ಗೆ ತೆರಳಿ ಮತದಾನ ಮಾಡಬೇಕು ಎಂಬುದರ ಬಗ್ಗೆ ಮಾಹಿತಿ ನೀಡುತ್ತಿದ್ದರು.
-
Weekly Horoscope March 9–15: ಮಾರ್ಚ್ ವಾರಭವಿಷ್ಯ – 12 ರಾಶಿಗಳ ಸುಖ-ದುಃಖ, ಹಣಕಾಸು ಮತ್ತು ಆರೋಗ್ಯ ಫಲ -
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Gold Rate Today: ಸತತ ಆರನೇ ದಿನವೂ ಚಿನ್ನದ ಬೆಲೆಯಲ್ಲಿ ಇಳಿಕೆ: ಬೆಂಗಳೂರಿನಲ್ಲಿ ಇಂದಿನ ದರಗಳು ಹೀಗಿವೆ












Click it and Unblock the Notifications