Shiva Rajkumar: ವರುಣ ಕಣದಲ್ಲಿ ಸಿದ್ದರಾಮಯ್ಯ ಪರ ನಟ ಶಿವರಾಜ್ಕುಮಾರ್ ಅಬ್ಬರದ ಪ್ರಚಾರ
ಮೈಸೂರು, ಮೇ, 04: ವಿಧಾನಸಭೆ ಚುನವಣೆ ಹಿನ್ನೆಲೆ ಈಗಾಗಲೇ ಎಲ್ಲಾ ಕಡೆ ರಾಜಕೀಯ ನಾಯಕರು ಅಬ್ಬರದ ಪ್ರಚಾರ ಮಾಡುತ್ತಿದ್ದಾರೆ. ಅದೇ ರೀತಿ ವರುಣಾ ಕ್ಷೇತ್ರದಲ್ಲಿ ಮಾಜಿ ಸಿಎಂ ಸಿದ್ದರಾಮಯ್ಯನವರ ಪರ ನಟ ಶಿವರಾಜ್ಕುಮಾರ್ ಅಬ್ಬರರ ಪ್ರಚಾರಕ್ಕಿಳಿದಿದ್ದಾರೆ.

ಹೈವೋಲ್ಟೇಟ್ ಕ್ಷೇತ್ರವಾದ ವರುಣಾದಲ್ಲಿ ಒಂದೆಡೆ ವಿಪಕ್ಷ ನಾಯಕ ಸಿದ್ದರಾಮಯ್ಯ ಪ್ರಚಾರ ಮಾಡಿದರೆ, ಮತ್ತೊಂದೆಡೆ ಬಿಜೆಪಿ ಅಭ್ಯರ್ಥಿ ವಿ. ಸೋಮಣ್ಣ ಅಬ್ಬರದ ಪ್ರಚಾರ ಮಾಡುತ್ತಿದ್ದಾರೆ. ಈಗಾಗಲೇ ಹಲವೆಡೆ ಬಿಜೆಪಿ ನಾಯಕರ ಪರ ಸ್ಯಾಂಡಲ್ವುಡ್ ಬಳಗವೇ ಪ್ರಚಾರಕ್ಕಿಳಿದಿದೆ. ಅದೇ ರೀತಿಯಲ್ಲಿ ಇಂದು ವರುಣದಲ್ಲಿ ನಟ ಶಿವರಾಜ್ಕುಮಾರ್ ಸಿದ್ದರಾಮಯ್ಯ ಜೊತೆ ನಿಂತು ಪರ ರೋಡ್ ನಡೆಸಿದ್ದಾರೆ.
ಪ್ರಚಾರದಲ್ಲಿ ತೊಡಗಿದ ಸ್ಯಾಂಡಲ್ವುಡ್ ಬಳಗ
ಇನ್ನು ರಾಜ್ಯ ಚಿಕ್ಕಬಳ್ಳಾಪುರ ಕ್ಷೇತ್ರದಾದ್ಯಂತ ಚುನಾವಣಾ ಪ್ರಚಾರದ ಕಾವು ಏರತೊಡಗಿದೆ. ಎಲ್ಲ ಪಕ್ಷಗಳ ಅಭ್ಯರ್ಥಿಗಳು ಕಾಲಿಗೆ ಚಕ್ರ ಕಟ್ಟಿಕೊಂಡವರಂತೆ ಕ್ಷೇತ್ರದಾದ್ಯಂತ ಓಡಾಡಿ ಪ್ರಚಾರ ನಡೆಸುತ್ತಿದ್ದಾರೆ. ಮತ್ತೊಂದೆಡೆ ಚಿಕ್ಕಬಳ್ಳಾಪುರ ರಣಕಣದಲ್ಲಿ ಚಿತ್ರರಂಗದ ತಾರೆಯರ ಆಗಮನದಿಂದ ಬಿಜೆಪಿ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರಲ್ಲಿ ಚುನಾವಣಾ ಹುಮ್ಮಸ್ಸು ಹೆಚ್ಚಾಗಿದೆ.
ಜಿಲ್ಲೆಯ 5 ವಿಧಾನಸಭಾ ಕ್ಷೇತ್ರಗಳಲ್ಲಿ ಹೆಚ್ಚು ಸದ್ದು ಮಾಡುತ್ತಿರುವ ಕ್ಷೇತ್ರ ಚಿಕ್ಕಬಳ್ಳಾಪುರ. ಕಾರಣ ಡಾ.ಕೆ.ಸುಧಾಕರ್ ಪ್ರತಿನಿಧಿಸುತ್ತಿರುವ ಕ್ಷೇತ್ರ ಆಗಿರುವುದರಿಂದ ಚಿಕ್ಕಬಳ್ಳಾಪುರ ವಿಧಾನಸಭಾ ಕ್ಷೇತ್ರದಲ್ಲಿ ಈಗಾಗಲೇ ಚಿತ್ರರಂಗದ ಕಿರುತೆರೆ ಹಾಗೂ ಸಿನಿಮಾ ನಟ, ನಟಿಯರು ಪ್ರಚಾರದಲ್ಲಿ ಕಾರ್ಯನಿರತರಾಗಿದ್ದಾರೆ.
ಅದರಲ್ಲೂ ಪ್ರಮುಖವಾಗಿ ಬಿಗ್ ಬಾಸ್ ಖ್ಯಾತಿಯ ದಿವ್ಯಾ ಉರುಡುಗ, ನಟಿ ಹರ್ಷಿಕಾ ಪೂಣಚ್ಚ, ನಟ ರಘು ಮುಖರ್ಜಿ ಹೀಗೆ ನಟ-ನಟಿಯರು ಮನೆ ಮನೆ ಪ್ರಚಾರ ನಡೆಸುತ್ತಿದ್ದಾರೆ. ಪ್ರತಿ ಚುನಾವಣೆಯಂತೆ ಈ ಬಾರಿಯೂ ಚಿತ್ರರಂಗದ ಕಲಾವಿದರ ದಂಡೇ ಮತ ಪ್ರಚಾರದಲ್ಲಿ ತೊಡಗಿದೆ. ಇನ್ನೂ ಕೆಲವೇ ದಿನಗಳಲ್ಲಿ ಜಿಲ್ಲಾದ್ಯಂತ ಸ್ಟಾರ್ ಪ್ರಚಾರಕರ ಅಬ್ಬರವೂ ಜೋರಾಗಲಿದೆ.
ಪ್ರತಿ ನಿತ್ಯ ಬೆಳ್ಳಂಬೆಳಗ್ಗೆ 8 ಗಂಟೆಯಿಂದಲೇ ಕಿರುತೆರೆ ಮತ್ತು ಚಲನಚಿತ್ರ ತಾರೆಯರಾದ ದಿಗಂತ್, ಅನು ಪ್ರಭಾಕರ್, ರಘು ಮುಖರ್ಜಿ, ನಟಿ ಹರ್ಷಿಕಾ ಪೂಣಚ್ಚ, ದಿವ್ಯ ಉರುಡುಗ ಹೀಗೆ ಹಲವು ಕಲಾವಿದರು ಕ್ಷೇತ್ರದಲ್ಲಿ ಬಿಡುವಿಲ್ಲದ ಪ್ರಚಾರ ನಡೆಸುತ್ತಿದ್ದಾರೆ. ಮುಂದಿನ ದಿನಗಳಲ್ಲಿ ಇನ್ನಷ್ಟು ಕಲಾವಿದರು ಪ್ರಚಾರದಲ್ಲಿ ತೊಡಗಿಕೊಳ್ಳುವ ಸಾಧ್ಯತೆಯಿದೆ ಎನ್ನುವ ಮಾತುಗಳು ಕೇಳಿಬರುತ್ತಿವೆ.
ಅಭಿವೃದ್ಧಿ ಕಾರ್ಯಗಳ ಬಗ್ಗೆ ಮನವರಿಕೆ ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಪರ ಕ್ಷೇತ್ರದ ವಿವಿಧಡೆ ಮನೆ ಮನೆಗೆ ತೆರಳಿ ಪ್ರಚಾರ ಮಾಡಿದರೆ, ಮತ್ತೊಂದೆಡೆ ಕ್ಷೇತ್ರದ ನಾನಾ ಗ್ರಾಮಗಳಲ್ಲಿ ಕಿರುತೆರೆ ಮತ್ತು ಚಲನಚಿತ್ರ ತಾರೆಯರು ಮನೆ ಮನೆಗೆ ತೆರಳಿ ಪ್ರಚಾರ ಮಾಡುತ್ತಿದ್ದಾರೆ.












Click it and Unblock the Notifications