ಕೃಷ್ಣರಾಜ ಅಭ್ಯರ್ಥಿ ರಾಮದಾಸ್ ಪರ ಬ್ಯಾಟ್ ಬೀಸಿದ ವಿಜಯೇಂದ್ರ
ಮೈಸೂರು, ಮೇ 1 : ವರುಣ ವಿಧಾನಸಭಾ ಕ್ಷೇತ್ರದಲ್ಲಿ ಬಿ.ವೈ.ವಿಜಯೇಂದ್ರ ಅವರಿಗೆ ಟಿಕೆಟ್ ಕೈ ತಪ್ಪಲು ಮಾಜಿ ಸಚಿವ ಹಾಗೂ ಕೆ.ಆರ್. ಕ್ಷೇತ್ರದ ಅಭ್ಯರ್ಥಿ ಎಸ್.ಎ. ರಾಮದಾಸ್ ಕಾರಣ ಎಂಬ ಆರೋಪಗಳಿಗೆ ಖುದ್ದು ವಿಜಯೇಂದ್ರರವರೇ ಸ್ಪಷ್ಟನೆ ನೀಡಿ ವಿವಾದಕ್ಕೆ ತೆರೆ ಎಳೆದಿದ್ದಾರೆ.
ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ವಿಡಿಯೋ ಬಿಡುಗಡೆಗೊಳಿಸಿರುವ ವಿಜಯೇಂದ್ರ ಅವರು, ಸಮುದಾಯದವರು ಹಾಗೂ ಪ್ರತಿಯೊಬ್ಪರೂ ಕೃಷ್ಣರಾಜ ಕ್ಷೇತ್ರದ ಅಭ್ಯರ್ಥಿ ಎಸ್.ಎ. ರಾಮದಾಸ್ ಅವರನ್ನು ಬೆಂಬಲಿಸುವಂತೆ ಮನವಿ ಮಾಡಿದ್ದಾರೆ.
ಯಡಿಯೂರಪ್ಪನವರು ಮತ್ತೊಮ್ಮೆ ಮುಖ್ಯಮಂತ್ರಿಯಾಗಿ 5 ವರ್ಷ ಅವಧಿ ಪೂರೈಸಬೇಕು. ಅಷ್ಟೇ ಅಲ್ಲ ಬಿಜೆಪಿ ಅಭ್ಯರ್ಥಿಗಳು ಗೆಲ್ಲಬೇಕು. ಕೃಷ್ಣರಾಜ ಕ್ಷೇತ್ರದಲ್ಲಿ ರಾಮದಾಸ್ ಪರವಾದ ಅಲೆಯಿದ್ದು ಅಲ್ಲಿ ಬಿಜೆಪಿ ಗೆದ್ದೇ ಗೆಲ್ಲುವ ವಿಶ್ವಾಸವಿದೆ. ಈ ಮಧ್ಯೆ ಕೆಲ ಕಾಂಗ್ರೆಸ್ಸಿಗರು ಸಮುದಾಯದ ಹೆಸರು ಹೇಳಿಕೊಂಡು ಇನ್ನಿಲ್ಲದ ವದಂತಿ ಹಬ್ಬಿಸುತ್ತಿದ್ದಾರೆ. ಲಿಂಗಾಯತ- ವೀರಶೈವ ಎಂದು ವಿವಾದ ಸೃಷ್ಟಿಸಿದ ಕಾಂಗ್ರೆಸ್ನವರ ಮಾತುಗಳಿಗೆ ಸಮುದಾಯದ ಯಾರೊಬ್ಬರೂ ಕಿವಿಗೊಡಬಾರದು ಎಂದು ಮನವಿ ಮಾಡಿದ್ದಾರೆ.
ನೋಟಾ ಕುರಿತಂತೆ ಎಚ್ಚರಿಕೆಯ ನಿರ್ಧಾರ ಕೈಗೊಳ್ಳಲು ಸಲಹೆ :
ವರುಣಾ ಕ್ಷೇತ್ರದಲ್ಲಿ ನೋಟಾ ಪ್ರಯೋಗ ಅಭಿಯಾನದ ಹಿಂದೆ ಪಟ್ಟಭದ್ರ ಹಿತಾಸಕ್ತಿಗಳ ಕೈವಾಡವಿದ್ದು ಬಿಜೆಪಿ ಕಾರ್ಯಕರ್ತರು ಎಚ್ಚರಿಕೆಯಿಂದ ನಿರ್ಧಾರ ಕೈಗೊಳ್ಳಬೇಕೆಂದು ಬಿಜೆಪಿ ವರುಣ ಕ್ಷೇತ್ರದ ಸಂಭವನೀಯ ಅಭ್ಯರ್ಥಿಯಾಗಿದ್ದ ಬಿ.ವೈ. ವಿಜಯೇಂದ್ರ ಎಚ್ಚರಿಸಿದ್ದಾರೆ.
ಕೆಲವು ಶಕ್ತಿಗಳು ಯಡಿಯೂರಪ್ಪನವರು ಮುಖ್ಯಮಂತ್ರಿಯಾಗದಂತೆ ತಡೆಯಲು ಅಪಪ್ರಚಾರ ಮಾಡಿ, ಗೊಂದಲ ಸೃಷ್ಟಿಸಿ ತೊಂದರೆ ಕೊಡಲು ಪಿತೂರಿ ನಡೆಸುತ್ತಿವೆ. ಆದ್ದರಿಂದ ಯಾವುದೇ ಅಪಪ್ರಚಾರಗಳಿಗೆ ಪ್ರಚೋದನೆಗೊಳ್ಳಗಾಗಬಾರದು.

ಸೇವ್ ಬಿಜೆಪಿ ಅಭಿಯಾನ:
ವರುಣಾ ಕ್ಷೇತ್ರದ ನೊಂದ ಬಿಜೆಪಿ ಕಾರ್ಯಕರ್ತರ ಹೆಸರಿನಲ್ಲಿ 'ಬಿಜೆಪಿ ಉಳಿಸಿ' ಅಭಿಯಾನ ಆರಂಭವಾಗಿದ್ದು, ಪಕ್ಷದ ಕೆಲ ಮುಖಂಡರ ವಿರುದ್ಧ ಘೋಷಣೆಗಳಿರುವ ಕರಪತ್ರಗಳು ವೈರಲ್ ಆಗಿವೆ.
ಒಡೆದು ಆಳುವ ಅನಂತಕುಮಾರ್ ಮತ್ತು ಸಂತೋಷ್ ಅವರನ್ನು ವಜಾಗೊಳಿಸಿ ಎಂದು ಬರೆದಿರುವ ಕರಪತ್ರಗಳನ್ನು ಕನ್ನಡ ಹಾಗೂ ಇಂಗ್ಲಿಷ್ನಲ್ಲಿ ಮುದ್ರಿಸಲಾಗಿದೆ. ಕಾನೂನು ಗೌರವಿಸಿ, ಕಾನೂನು ಕೈಗೆತ್ತಿಕೊಳ್ಳುವುದು ಬೇಡ, ಹೋರಾಟ ಶಾಂತವಾಗಿರಲಿ. ಮೋದಿ, ಅಮಿತ್ ಶಾ ಅವರಿಗೆ ತಲುಪುವವರೆಗೆ ಪ್ರತಿಭಟನೆ ನಡೆಸಿ ಎಂಬ ಅಂಶಗಳು ಇದರಲ್ಲಿವೆ. ಕರಪತ್ರದ ಕೊನೆಯಲ್ಲಿ ವರುಣಾ ಕ್ಷೇತ್ರದ ನೊಂದ ಬಿಜೆಪಿ ಕಾರ್ಯಕರ್ತರು ಎಂದು ಬರೆಯಲಾಗಿದೆ.
ಕೇಂದ್ರ ಸಚಿವ ಅನಂತ್ ಕುಮಾರ್ ಮತ್ತು ಸಹ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿರುವ ಬಿ.ವೈ. ವಿಜಯೇಂದ್ರ ಅವರ ಕೆಲ ಬೆಂಬಲಿಗರು ಈ ಇಬ್ಬರನ್ನು ವಜಾಗೊಳಿಸುವಂತೆ ಆಗ್ರಹಿಸಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟರ್ ಅಭಿಯಾನ ನಡೆಸಿದ್ದಾರೆ..
ಜಾಥಾ ನಡೆಸುತ್ತಿದ್ದವರ ಬಂಧನ :
ವರುಣಾ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ನೋಟಾಕ್ಕೆ ಮತ ಚಲಾಯಿಸುವಂತೆ ಮತದಾರರನ್ನು ಸೆಳೆಯಲು ಬೈಕ್ ಜಾಥಾ ನಡೆಸುತ್ತಿದ್ದ ಇಬ್ಬರ ವಿರುದ್ಧ ಚುನಾವಣಾಧಿಕಾರಿ ನೀಡಿದ ದೂರನ್ನಾಧರಿಸಿ ಬಿಳಿಗೆರೆ ಪೊಲೀಸ್ ಠಾಣೆಯಲ್ಲಿ ಮೊಕದ್ದಮೆ ದಾಖಲಿಸಿಕೊಳ್ಳಲಾಗಿದೆ.
ವರುಣಾ ವಿಧಾನಸಭಾ ಕ್ಷೇತ್ರದಲ್ಲಿ ಬಿಜೆಪಿ ಪಕ್ಷ ದಿಂದ ಬಿ.ವೈ.ವಿಜಯೇಂದ್ರ ಅವರಿಗೆ ಟಿಕೆಟ್ ಕೈತಪ್ಪಿದ್ದರಿಂದ ಅನುಮತಿ ಪಡೆಯದೆ ಬೈಕ್ ಜಾಥಾ ಮೂಲಕ ನೋಟಾ ಅಭಿಯಾನ ನಡೆಸಲಾಗುತ್ತಿದೆ ಎಂಬ ಮಾಹಿತಿ ಮೇರೆಗೆ ಸೆಕ್ಟರ್ ಅಧಿಕಾರಿಗಳ ತಂಡ ಗುಂಪಿನಲ್ಲಿ ತೆರಳುತ್ತಿದ್ದ ಇಬ್ಬರನ್ನು ಪೊಲೀಸರ ನೆರವಿನೊಂದಿಗೆ ವಶಕ್ಕೆ ಪಡೆದು ನಂತರ ಬಿಳಿಗೆರೆ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ.
-
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Gold Price Today: ಆಭರಣ ಪ್ರಿಯರಿಗೆ ಬಿಗ್ ರಿಲೀಫ್: ಬೆಂಗಳೂರಿನಲ್ಲಿ ಚಿನ್ನದ ಬೆಲೆ ದಿಢೀರ್ ಇಳಿಕೆ; ಇಂದಿನ ದರ ಇಲ್ಲಿದೆ -
Horoscope March 9; ಈ ರಾಶಿಯವರ ಅದೃಷ್ಟವೇ ಬದಲಾಗುತ್ತೆ: 12 ರಾಶಿ ಭವಿಷ್ಯ ತಿಳಿಯಿರಿ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
Sensex crash: ಷೇರು ಮಾರುಕಟ್ಟೆಯಲ್ಲಿ ಭಾರಿ ಸಂಚಲನ; ಸೆನ್ಸೆಕ್ಸ್ 2100 ಅಂಕ ಕುಸಿತ -
E-Bus: ಕರ್ನಾಟಕದ ಹೊಸ ಯೋಜನೆಯಡಿ ಗ್ರಾಮೀಣ ಭಾಗಗಳಲ್ಲೂ ಓಡಾಡಲಿವೆ 1950 ಎಲೆಕ್ಟ್ರಿಕ್ ಬಸ್ಗಳು -
Prediction on Donald Trump: ಟ್ರಂಪ್ ಗೆಲುವು, ಇರಾನ್ ಯುದ್ಧ ಭವಿಷ್ಯ: 3 ಭವಿಷ್ಯವಾಣಿಯಲ್ಲಿ 2 ನಿಜ, ಮತ್ತೊಂದೇನು -
ಕರ್ನಾಟಕದಲ್ಲಿ 40 ಡಿಗ್ರಿ ಸೆಲ್ಸಿಯಸ್ ದಾಟಿದೆ ಉಷ್ಣಾಂಶ: ಈಗಿನ್ನೂ ಮಾರ್ಚ್, ಮೇ ಕಥೆ ಹೇಗೆ? ಬಿಸಿಗಾಳಿಗೆ ಬಸವಳಿದ ಜನ -
Sanju Samson: ಟಿ20 ವಿಶ್ವಕಪ್ ಗೆಲುವಿನ ಬಳಿಕ ಕ್ರಿಕೆಟ್ ದೇವರ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಸಂಜು ಸ್ಯಾಮ್ಸನ್












Click it and Unblock the Notifications