ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಮತಕ್ಕಾಗಿ ಕೋಳಿ ಹಂಚಿಕೆ, ಬಾಡೂಟ: ಪ್ರಕರಣ ದಾಖಲು

By ಬಿ.ಎಂ. ಲವಕುಮಾರ್
|
Google Oneindia Kannada News

ಮೈಸೂರು: ಚುನಾವಣಾ ರಂಗು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಗ್ರಾಮೀಣ ಪ್ರದೇಶದಲ್ಲಿ ಅಭ್ಯರ್ಥಿಗಳು ಮತದಾರರನ್ನು ಸೆಳೆಯಲು ತಮಗೆ ತೋಚಿದ ತಂತ್ರಗಳನ್ನೆಲ್ಲ ಮಾಡುತ್ತಿದ್ದಾರೆ.

ಮತದಾರರಿಗೆ ಆಮಿಷವೊಡ್ಡಲು ಕೋಳಿ, ಹಣ ಹಂಚುವುದು, ಬಾಡೂಟ ಹಾಕುವುದು ಜೋರಾಗಿದೆ.

ಮಂಡ್ಯ: ರೈತಸಂಘದ ಕಾರ್ಯಕರ್ತನ ಮನೆಯಿಂದ ಅಕ್ರಮ ಮದ್ಯ ವಶಮಂಡ್ಯ: ರೈತಸಂಘದ ಕಾರ್ಯಕರ್ತನ ಮನೆಯಿಂದ ಅಕ್ರಮ ಮದ್ಯ ವಶ

ಈಗಾಗಲೇ ಈ ಸಂಬಂಧ ಚುನಾವಣಾಧಿಕಾರಿಗಳು ಹಲವು ಕಡೆ ಅಭ್ಯರ್ಥಿಗಳ ಆಟಾಟೋಪಕ್ಕೆ ಕಡಿವಾಣ ಹಾಕಿದ್ದು, ಮೊಕದ್ದಮೆ ದಾಖಲಿಸಿಕೊಂಡಿದ್ದಾರೆ. ಕೋಳಿಗಳನ್ನು ಹಂಚುವ ಮೂಲಕ ಮತದಾರರನ್ನು ಸೆಳೆಯಲು ಯತ್ನಿಸಿದ ಪ್ರಕರಣ ಮಂಡ್ಯ ಜಿಲ್ಲೆಯಲ್ಲಿ ನಾಗಮಂಗಲ ತಾಲೂಕಿನ ಗೌಡಹಳ್ಳಿ-ಕಾವಡಿ ಗ್ರಾಮದಲ್ಲಿ ಬೆಳಕಿಗೆ ಬಂದಿದೆ.

karnataka elections case registered on gram panchayat president

ಕಾಂಗ್ರೆಸ್ ಪಕ್ಷದ ಪರವಾಗಿ ಹಂಚಲು ತಂದಿದ್ದ ಸುಮಾರು 30ಕ್ಕೂ ಹೆಚ್ಚು ಕೋಳಿಗಳನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದು, ಕೋಳಿಗಳ ಸರಬರಾಜು ಕುರಿತು ಆಟೋ ಚಾಲಕನಿಂದ ಮಾಹಿತಿ ಸಂಗ್ರಹಿಸಿದ್ದಾರೆ. ಈ ಬಗ್ಗೆ ನಾಗಮಂಗಲ ಗ್ರಾಮಾಂತರ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ.

karnataka elections case registered on gram panchayat president

ಇನ್ನೊಂದೆಡೆ ಅನುಮತಿ ಪಡೆಯದೆ ಬಾಡೂಟ ಹಾಕಿದ ಸುಮಾರು 25 ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಚುನಾವಣಾ ಆಯೋಗ ಮೊಕದ್ದಮೆ ದಾಖಲು ಮಾಡಿರುವ ಘಟನೆ ಮೈಸೂರಿನ ಪಿರಿಯಾಪಟ್ಟಣ ತಾಲೂಕು ಬೆಟ್ಟದಪುರ ಹೋಬಳಿಯ ಗೊರಹಳ್ಳಿ ಗ್ರಾಮದಲ್ಲಿ ನಡೆದಿದೆ.

English summary
A case has been registered on chapparadahalli gram panchayat of mandya district Latha Vasanthkumar for distributing hen and non-veg meals to lure voters
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X