ಮತಕ್ಕಾಗಿ ಕೋಳಿ ಹಂಚಿಕೆ, ಬಾಡೂಟ: ಪ್ರಕರಣ ದಾಖಲು
ಮೈಸೂರು: ಚುನಾವಣಾ ರಂಗು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಗ್ರಾಮೀಣ ಪ್ರದೇಶದಲ್ಲಿ ಅಭ್ಯರ್ಥಿಗಳು ಮತದಾರರನ್ನು ಸೆಳೆಯಲು ತಮಗೆ ತೋಚಿದ ತಂತ್ರಗಳನ್ನೆಲ್ಲ ಮಾಡುತ್ತಿದ್ದಾರೆ.
ಮತದಾರರಿಗೆ ಆಮಿಷವೊಡ್ಡಲು ಕೋಳಿ, ಹಣ ಹಂಚುವುದು, ಬಾಡೂಟ ಹಾಕುವುದು ಜೋರಾಗಿದೆ.
ಮಂಡ್ಯ: ರೈತಸಂಘದ ಕಾರ್ಯಕರ್ತನ ಮನೆಯಿಂದ ಅಕ್ರಮ ಮದ್ಯ ವಶ
ಈಗಾಗಲೇ ಈ ಸಂಬಂಧ ಚುನಾವಣಾಧಿಕಾರಿಗಳು ಹಲವು ಕಡೆ ಅಭ್ಯರ್ಥಿಗಳ ಆಟಾಟೋಪಕ್ಕೆ ಕಡಿವಾಣ ಹಾಕಿದ್ದು, ಮೊಕದ್ದಮೆ ದಾಖಲಿಸಿಕೊಂಡಿದ್ದಾರೆ. ಕೋಳಿಗಳನ್ನು ಹಂಚುವ ಮೂಲಕ ಮತದಾರರನ್ನು ಸೆಳೆಯಲು ಯತ್ನಿಸಿದ ಪ್ರಕರಣ ಮಂಡ್ಯ ಜಿಲ್ಲೆಯಲ್ಲಿ ನಾಗಮಂಗಲ ತಾಲೂಕಿನ ಗೌಡಹಳ್ಳಿ-ಕಾವಡಿ ಗ್ರಾಮದಲ್ಲಿ ಬೆಳಕಿಗೆ ಬಂದಿದೆ.
ಕಾಂಗ್ರೆಸ್ ಪಕ್ಷದ ಪರವಾಗಿ ಹಂಚಲು ತಂದಿದ್ದ ಸುಮಾರು 30ಕ್ಕೂ ಹೆಚ್ಚು ಕೋಳಿಗಳನ್ನು ಅಧಿಕಾರಿಗಳು ವಶಕ್ಕೆ ಪಡೆದಿದ್ದು, ಕೋಳಿಗಳ ಸರಬರಾಜು ಕುರಿತು ಆಟೋ ಚಾಲಕನಿಂದ ಮಾಹಿತಿ ಸಂಗ್ರಹಿಸಿದ್ದಾರೆ. ಈ ಬಗ್ಗೆ ನಾಗಮಂಗಲ ಗ್ರಾಮಾಂತರ ಠಾಣೆಯಲ್ಲಿ ದೂರು ದಾಖಲಿಸಲಾಗಿದೆ.
ಇನ್ನೊಂದೆಡೆ ಅನುಮತಿ ಪಡೆಯದೆ ಬಾಡೂಟ ಹಾಕಿದ ಸುಮಾರು 25 ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಚುನಾವಣಾ ಆಯೋಗ ಮೊಕದ್ದಮೆ ದಾಖಲು ಮಾಡಿರುವ ಘಟನೆ ಮೈಸೂರಿನ ಪಿರಿಯಾಪಟ್ಟಣ ತಾಲೂಕು ಬೆಟ್ಟದಪುರ ಹೋಬಳಿಯ ಗೊರಹಳ್ಳಿ ಗ್ರಾಮದಲ್ಲಿ ನಡೆದಿದೆ.