ಬಿಎಸ್ವೈಗೆ ತಲೆ ಕೆಟ್ಟಿದೆ, ಕಾಂಗ್ರೆಸ್ಗೆ 120 ಸ್ಥಾನ : ಸಿದ್ದರಾಮಯ್ಯ
ಮೈಸೂರು, ಮೇ 12 : 'ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ 120ಕ್ಕೂ ಅಧಿಕ ಸ್ಥಾನಗಳಲ್ಲಿ ಜಯಗಳಿಸಲಿದೆ' ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ವಿಶ್ವಾಸ ವ್ಯಕ್ತಪಡಿಸಿದರು.
ಶನಿವಾರ ಮೈಸೂರಿನಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಸಿದ್ದರಾಮಯ್ಯ ಅವರು, 'ಯಡಿಯೂರಪ್ಪ ಅವರಿಗೆ ತಲೆ ಕೆಟ್ಟಿದೆ. ನಾನು ವಿಶ್ವಾಸದಿಂದ ಇದ್ದೇನೆ, ಕಾಂಗ್ರೆಸ್ 120ಕ್ಕೂ ಅಧಿಕ ಸ್ಥಾನಗಳಲ್ಲಿ ಜಯಗಳಿಸಲಿದೆ' ಎಂದು ಹೇಳಿದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಾಗಲಕೋಟೆ ಜಿಲ್ಲೆಯ ಬಾದಾಮಿ ಮತ್ತು ಮೈಸೂರಿನ ಚಾಮುಂಡೇಶ್ವರಿ ಕ್ಷೇತ್ರದಿಂದ ಚುನಾವಣೆಗೆ ಸ್ಪರ್ಧಿಸಿದ್ದಾರೆ. ಆದರೆ, ಎರಡೂ ಕಡೆ ಅವರು ಮತದಾನ ಮಾಡುತ್ತಿಲ್ಲ.

ಮುಖ್ಯಮಂತ್ರಿ ಸಿದ್ದರಾಮಯ್ಯ ಇದೇ ಮೊದಲ ಬಾರಿಗೆ ತಮ್ಮ ವೋಟನ್ನು ತಮಗೇ ಹಾಕಿಕೊಳ್ಳದ ಪರಿಸ್ಥಿತಿ ಎದುರಾಗಿದೆ. ಸಿದ್ದರಾಮಯ್ಯ ಅವರ ಹೆಸರು ಮತದಾರರ ಪಟ್ಟಿಯಲ್ಲಿ ಅವರ ಸ್ವಗ್ರಾಮವಾದ ಸಿದ್ದರಾಮನಹುಂಡಿಯ ಮತಗಟ್ಟೆಯಲ್ಲಿದೆ.
#WATCH: As voting in #Karnataka continues, CM Siddaramaiah says, 'Yeddyurappa is mentally disturbed. Congress will get more than 120 seats. I am very confident.' #KarnatakaElections2018 pic.twitter.com/yE6isfZcYq
— ANI (@ANI) May 12, 2018
ಸಿದ್ದರಾಮನ ಹುಂಡಿ ವರುಣಾ ಕ್ಷೇತ್ರದ ವ್ಯಾಪ್ತಿಯಲ್ಲಿದೆ. ಈ ಹಿಂದೆ ತಾವು ವರುಣಾದಲ್ಲಿ ಸ್ಫರ್ಧಿಸುತ್ತಿದ್ದ ಸಿದ್ದರಾಮಯ್ಯ ಮತಚಲಾವಣೆ ಮಾಡುತ್ತಿದ್ದರು. ಆದರೆ, ಈ ಬಾರಿ ಅವರು ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಸ್ಪರ್ಧಿಸುತ್ತಿದ್ದಾರೆ.












Click it and Unblock the Notifications