ಕಾಂಗ್ರೆಸ್ ಗೆ ಮತ ಹಾಕುವಂತೆ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಧಮ್ಕಿ
ಮೈಸೂರು, ಮೇ 12 : ಕಾಂಗ್ರೆಸ್ ಪಕ್ಷಕ್ಕೆ ಮತ ಹಾಕುವಂತೆ ನಗರಪಾಲಿಕೆ ಸದಸ್ಯ ಪೌರಕಾರ್ಮಿಕರಿಗೆ ಧಮ್ಕಿ ಹಾಕಿರುವ ಘಟನೆ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ನಡೆದಿದೆ.
ಮೈಸೂರಿನಲ್ಲಿ ನಗರಪಾಲಿಕೆ ಸದಸ್ಯ ಜಗದೀಶರಿಂದ ಕಾಂಗ್ರೆಸ್ ಪಕ್ಷಕ್ಕೆ ಮತ ಹಾಕದಿದ್ದರೆ ಕೆಲಸದಿಂದ ತೆಗೆಸುತ್ತೇನೆ ಎಂದು ಧಮ್ಕಿ ಹಾಕಿದ್ದಾರೆ. ಈ ವೇಳೆ ಕಾಂಗ್ರೆಸ್ ಹಾಗೂ ಜೆಡಿಎಸ್ ಕಾರ್ಯಕರ್ತರ ನಡುವೆ ಮಾತಿನ ಚಕಮಕಿ ನಡೆದಿದೆ.
In Pics: ಮತದಾನ ಪರ್ವದಲ್ಲಿ ಮತದಾರ ಮಹಾಪ್ರಭು

ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದ ವಸಂತನಗರ ಮತಗಟ್ಟೆ ಸಂಖ್ಯೆ 152 ರಲ್ಲಿ ಘಟನೆ ನಡೆಯಿತು. ವಿಚಾರ ತಿಳಿದು ಸ್ಥಳಕ್ಕೆ ಆಗಮಿಸಿದ ಜೆಡಿಎಸ್ ಅಭ್ಯರ್ಥಿ, ಹಾಲಿ ಶಾಸಕ ಜಿಟಿ ದೇವೇಗೌಡ ಪುತ್ರ ಹರೀಶ್ ಗೌಡ ಜೆಡಿಎಸ್ ಕಾರ್ಯಕರ್ತರನ್ನು ಸಮಾಧಾನಪಡಿಸಿದರು. ಕ್ಷಣಕಾಲದಲ್ಲಿ ಕೆಲಕಾಲ ಬಿಗುವಿನ ವಾತಾವರಣ ಸೃಷ್ಟಿಯಾಯಿತು ಬಳಿಕ ಸ್ಥಳಕ್ಕೆ ಆಗಮಿಸಿದ ಕಾರ್ಯಕರ್ತರು ಕಾರ್ಯಕರ್ತರನ್ನು ಚದುರಿಸುವಲ್ಲಿ ಯಶಸ್ವಿಯಾದರು.












Click it and Unblock the Notifications