ಮೈಸೂರು ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಹಾನಗಲ್ ಹಾಲಿ MLAಗೆ ಟಿಕೆಟ್ ನಿರಾಕರಣೆ, ಸಿಎಂ ಮನೆ ಮುಂದೆ ಪ್ರತಿಭಟನೆ

By ಯಶಸ್ವಿನಿ ಎಂ.ಕೆ
|
Google Oneindia Kannada News

ಮೈಸೂರು, ಏಪ್ರಿಲ್ 17: ಹಾವೇರಿ ಜಿಲ್ಲೆ ಹಾನಗಲ್ ತಾಲ್ಲೂಕು ಹಾಲಿ ಶಾಸಕ ಮನೋಹರ್ ತಹಶೀಲ್ದಾರ್ ಗೆ ಕಾಂಗ್ರೆಸ್ ಟಿಕೆಟ್ ನಿರಾಕರಿಸಿರುವುದರಿಂದ ಸಿಟ್ಟಿಗೆದ್ದಿರುವ ಅವರ ಬೆಂಬಲಿಗರು ಇಂದು ಮುಖ್ಯಮಂತ್ರಿಗಳ ಮನೆಯ ಮುಂದೆ ಪ್ರತಿಭಟನೆ ನಡೆಸಿದರು.

ಹಾಲಿ ಶಾಸಕರಿಗಿಲ್ಲ ಟಿಕೆಟ್, ಕೊಳ್ಳೇಗಾಲದ 'ಕೈ'ನಲ್ಲಿ ಭಿನ್ನಮತ ಶುರುಹಾಲಿ ಶಾಸಕರಿಗಿಲ್ಲ ಟಿಕೆಟ್, ಕೊಳ್ಳೇಗಾಲದ 'ಕೈ'ನಲ್ಲಿ ಭಿನ್ನಮತ ಶುರು

ನೂರಾರು ಸಂಖ್ಯೆಯಲ್ಲಿ ಮುಖ್ಯಮಂತ್ರಿಗಳ ನಿವಾಸದ ಮುಂದೆ ಜಮಾಯಿಸಿದ ಹಾನಗಲ್ ಶಾಸಕ ಮನೋಹರ್ ತಹಶೀಲ್ದಾರ್ ಅವರ ಅಭಿಮಾನಿಗಳು ಕಾಂಗ್ರೆಸ್ ವಿರುದ್ಧ ಮತ್ತು ಸಿದ್ದರಾಮಯ್ಯ ವಿರುದ್ಧವೇ ಘೋಷಣೆಗಳನ್ನು ಕೂಗಿದರು. ಹಾನಗಲ್ ಕ್ಷೇತ್ರಕ್ಕೆ ಶಾಸಕರ ಬದಲಿಗೆ ಶ್ರೀನಿವಾಸ್ ಮಾನೆ ಎಂಬುವರಿಗೆ ಕಾಂಗ್ರೆಸ್ ಟಿಕೆಟ್ ನೀಡಿದೆ.

ಅಭ್ಯರ್ಥಿಗಳ ಪಟ್ಟಿ : ಕಾಂಗ್ರೆಸ್ | ಬಿಜೆಪಿ | ಜೆಡಿಎಸ್

ಮನೆಯ ಮುಂದೆ ಪ್ರತಿಭಟನೆ ನಡೆಯುತ್ತಿದ್ದರೂ ಸಹ ಅವರನ್ನು ನಿರ್ಲಕ್ಷಿಸಿ ಪ್ರಚಾರಕ್ಕಾಗಿ ಸಿಎಂ ತೆರಳಿದರು. ಇದರಿಂದ ಮತ್ತಷ್ಟು ಬೇಸರಗೊಂಡ ಮನೋಹರ್ ತಹಶೀಲ್ದಾರ್ ಬೆಂಬಲಿಗರು ಸಿಎಂ ವಿರುದ್ಧ ಘೋಷಣೆಗಳನ್ನು ಕೂಗಿದರು.

Karnataka elections: protest in front of CM residence

ತಮಗೆ ನ್ಯಾಯ ಸಿಗುವ ವರೆಗೆ ಪ್ರತಿಭಟನೆ ನಡೆಸುತ್ತೇವೆ ಎಂದು ಎಚ್ಚರಿಕೆ ನೀಡಿರುವ ಮನೋಹರ್ ತಹಶೀಲ್ದಾರ್ ಬೆಂಬಲಿಗರು. ಸಿಎಂ ಪ್ರಚಾರ ನಡೆಸುವ ಸ್ಥಳದಲ್ಲೇ ಪ್ರತಿಭಟನೆ ನಡೆಸಲು ನಿರ್ಧಾರಿಸಿದ್ದಾರೆ.

English summary
Hangal MLA Manohar Thahashildar ticket rejected by congress so Manohar Thahashildar's followers did protest in front of Siddaramaiah's house in Mysuru today. Shridhar Mane gets the congress ticket from Hangal.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X