ಫಲಿತಾಂಶದ ದಿನ ದೇವರ ಮೊರೆ ಹೋದ ಜಿಟಿ ದೇವೇಗೌಡ
ಮೈಸೂರು, ಮೇ 15: ಇಡೀ ರಾಜ್ಯದ ಕುತೂಹಲ ಕೆರಳಿಸಿರುವ ಮೈಸೂರಿನ ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದಲ್ಲಿ ಜಿಟಿ ದೇವೇಗೌಡ ಗೆಲ್ಲುತ್ತಾರಾ? ಜೆಡಿಎಸ್ ಅಭ್ಯರ್ಥಿಯಾಗಿರುವ ಅವರು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಸಮರ್ಥವಾಗಿ ಎದುರಿಸುತ್ತಾರಾ ಎಂಬುದು ಇಂದು ತಿಳಿಯಲಿದೆ.
ಗೆಲ್ಲಲೇಬೇಕೆಂಬ ಪಣತೊಟ್ಟಿರುವ ಜಿಟಿ ದೇವೇಗೌಡರು ಇಂದು ಬೆಳಿಗ್ಗೆ ಮತ ಎಣಿಕೆ ಆರಂಭವಾಗುವ ಮುನ್ನವೇ ಚಾಮುಂಡಿ ದೇವಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ.
ಇಂದು ಬೆಳಿಗ್ಗೆ ಕುಟುಂಬಸ್ಥರೊಂದಿಗೆ ಬೆಟ್ಟಕ್ಕೆ ತೆರಳಿ ಪೂಜೆ ಸಲ್ಲಿಸಿದ ನಂತರ ಗ್ರಾಮದ ಈಶ್ವರ ದೇವಾಲಯಕ್ಕೂ ಭೇಟಿ ನೀಡಿ ಪೂಜೆ ಸಲ್ಲಿಸಿದರು.

ಮೇ 12 ರಂದು ನಡೆದ ಕರ್ನಾಟಕ ವಿಧಾನಸಭಾ ಚುನಾವಣೆಯ ಫಲಿತಾಂಶ ಇಂದು(ಮೇ 15) ಹೊರಬೀಳಲಿದ್ದು 222 ಕ್ಷೇತ್ರಗಳ ಹಣೆಬರಹ ನಿರ್ಧಾರವಾಗಲಿದೆ.












Click it and Unblock the Notifications