ವಿಜಯೇಂದ್ರಗೆ ವರುಣಾ ಟಿಕೆಟ್ ನಿರಾಕರಣೆ, ಕಾರ್ಯಕರ್ತರ ದಾಂಧಲೆ
Recommended Video

ಯಡಿಯೂರಪ್ಪ ಅವರ ಪುತ್ರ ವಿಜಯೇಂದ್ರ ಅವರಿಗೆ ವರುಣಾದಿಂದ ಟಿಕೆಟ್ ನಿರಾಕರಿಸಿದ ಹಿನ್ನೆಲೆಯಲ್ಲಿ ಕಾರ್ಯಕರ್ತರು ಅಸಮಾಧಾನಗೊಂಡಿದ್ದು, ಕಾರ್ಯಕ್ರಮದಲ್ಲಿ ಗಲಾಟೆ ಪ್ರಾರಂಭಿಸಿದ್ದಾರೆ.
ನಂಜನಗೂಡಿನಲ್ಲಿ ನಡೆದ ಬಿಜೆಪಿ ಕಾರ್ಯಕ್ರಮದಲ್ಲಿ ಯಡಿಯೂರಪ್ಪ ಅವರು 'ವಿಜಯೇಂದ್ರ ಅವರಿಗೆ ಟಿಕೆಟ್ ನೀಡುತ್ತಿಲ್ಲ, ಯಾರೇ ಬಿಜೆಪಿ ಅಭ್ಯರ್ಥಿಯಾದರೂ ಅವರನ್ನು ಗೆಲ್ಲಿಸಿ' ಎಂದು ಹೇಳಿದರು ಕೂಡಲೇ ಆಕ್ರೋಶಗೊಂಡ ಕಾರ್ಯಕರ್ತರು ವಿಜಯೇಂದ್ರ ಅವರಿಗೇ ಟಿಕೆಟ್ ನೀಡಲೇಬೆಂಕೆಂದು ಒತ್ತಾಯಿಸಿ ಘೋಷಣೆಗಳನ್ನು ಕೂಗಿದರು.
ಅಭ್ಯರ್ಥಿಗಳ ಪಟ್ಟಿ : ಕಾಂಗ್ರೆಸ್ | ಬಿಜೆಪಿ | ಜೆಡಿಎಸ್
ನಂತರ ವೇದಿಕೆ ಏರಿದ ಕಾರ್ಯಕರ್ತರು ವೇದಿಕೆ ಮೇಲಿದ್ದ ಕುರ್ಚಿ ಮೇಜುಗಳನ್ನು ಪುಡಿಗಟ್ಟಿದರು. ವಿಜಯೇಂದ್ರ ಅವರ ಕಾರಿಗೆ ಮುತ್ತಿಗೆ ಹಾಕಿದ ಕಾರ್ಯಕರ್ತರು ವಿಜಯೇಂದ್ರ ಅವರೇ ವರುಣಾದಲ್ಲಿ ಅಭ್ಯರ್ಥಿ ಆಗಬೇಕೆಂದು ಒತ್ತಾಯ ಮಾಡಿದರು.

ಕಾರ್ಯಕರ್ತರ ದಾಂದಲೆ ಹೆಚ್ಚಾದಂತೆ ಪೊಲೀಸರು ವಿಜಯೇಂದ್ರ ಅವರನ್ನು ಪೊಲೀಸ್ ಜೀವಪಿನಲ್ಲಿ ಕೂರಿಸಿಕೊಂಡು ಸ್ಥಳದಿಂದ ತೆರಳಲು ಪ್ರಯತ್ನಿಸಿದರಾದರೂ ಪೊಲೀಸರ ವಾಹನಕ್ಕೂ ಕಾರ್ಯಕರ್ತರು ಮುತ್ತಿಗೆ ಹಾಕಿದರು. ಕಾರ್ಯಕರ್ತರನ್ನು ಚದುರಿಸಲು ಪೊಲೀಸರು ಲಘು ಲಾಠಿ ಪ್ರಹಾರ ಸಹ ಮಾಡಿದರು.
ವರುಣಾದಿಂದ ಸಿಎಂ ಪುತ್ರ ಯತೀಂದ್ರ ಅವರ ವಿರುದ್ಧ ವಿಜಯೇಂದ್ರ ಅವರು ಕಣಕ್ಕಿಳಿಯುವುದು ಬಹುತೇಕ ಖಚಿತವಾಗಿತ್ತು, ವಿಜಯೇಂದ್ರ ಅವರು ವರುಣಾದಲ್ಲಿ ಮನೆ ಸಹ ಖರೀದಿಸಿ ಕೆಲವು ದಿನಗಳಿಂದ ಕ್ಷೇತ್ರದಲ್ಲಿ ಪ್ರಚಾರ ಸಹ ನಡೆಸಿದ್ದರು. ಇಂದು ವಿಜಯೇಂದ್ರ ಅವರು ನಾಮಪತ್ರ ಸಲ್ಲಿಸಲು ಸಹ ಸಜ್ಜಾಗಿದ್ದರು ಆದರೆ ಕೊನೆ ಕ್ಷಣದಲ್ಲಿ ಆದ ಅಭ್ಯರ್ಥಿ ಬದಲಾವಣೆ ಘೋಷಣೆಯಿಂದ ಕಾರ್ಯಕರ್ತರು ಕೆರಳಿದ್ದಾರೆ.

ವರುಣಾದಿಂದ ರೇವಣಸಿದ್ದಯ್ಯ ಅಥವಾ ಜಿ.ಪಂ ಸದ್ಯಸ ಸದಾನಂದ ಅವರಲ್ಲಿ ಒಬ್ಬರು ಕಣಕ್ಕಿಳಿಯುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಆದರೆ ಬಿಜೆಪಿ ಇದೀಗ ಬಿಡುಗಡೆ ಮಾಡಿರುವ ನಾಲ್ಕನೇ ಪಟ್ಟಿಯಲ್ಲಿ ವರುಣಾ, ಚಾಮುಂಡೇಶ್ವರಿ ಮತ್ತು ಬಾದಾಮಿಯ ಅಭ್ಯರ್ಥಿ ಇನ್ನೂ ಘೋಷಿಸದ ಕಾರಣ ಕುತೂಹಲ ಇನ್ನೂ ಹಾಗೇ ಉಳಿದಿದೆ.
-
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
Train Delay: ರೈಲು ಪ್ರಯಾಣಿಕರೇ ಎಚ್ಚರ! ನಾಳೆ ಬೆಂಗಳೂರು-ಚೆನ್ನೈ ನಡುವಿನ ಸಂಚಾರದಲ್ಲಿ ಭಾರಿ ವ್ಯತ್ಯಯ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು












Click it and Unblock the Notifications