ವಿಜಯೇಂದ್ರ ಟಿಕೆಟ್ ಕೈ ತಪ್ಪುವ ಹಿಂದೆ ಆರ್ಎಸ್ಎಸ್ ಕೈವಾಡ?
ಯಡಿಯೂರಪ್ಪ ಅವರ ಪುತ್ರ ವಿಜಯೇಂದ್ರ ಅವರಿಗೆ ವರುಣಾದಿಂದ ಟಿಕೆಟ್ ಕೈತಪ್ಪಿದೆ ಅಷ್ಟೆ ಅಲ್ಲ ಯಡಿಯೂರಪ್ಪ ಅವರು ಬೇಡಿಕೆ ಇಟ್ಟಿದ್ದ ಮತ್ತೊಬ್ಬ ಅಭ್ಯರ್ಥಿ ಶೋಭಾ ಕರಂದ್ಲಾಜೆಗೂ ಟಿಕೆಟ್ ಕೈತಪ್ಪಿದೆ.
ವಿಜಯೇಂದ್ರ ಮತ್ತು ಶೋಭಾ ಕರಂದ್ಲಾಜೆ ಟಿಕೆಟ್ ಕೈತಪ್ಪುವ ಹಿಂದೆ ಆರ್ಎಸ್ಎಸ್ ಕೈವಾಡ ಇದೆ ಎನ್ನಲಾಗುತ್ತಿದೆ. ಆರ್ಎಸ್ಎಸ್ ಬಿಜೆಪಿ ಹೈಕಮಾಂಡ್ ಮೇಲೆ ಪ್ರಭಾವ ಹೇರಿ ವಿಜಯೇಂದ್ರ ಮತ್ತು ಶೋಭಾ ಅವರಿಗೆ ಟಿಕೆಟ್ ತಪ್ಪಿಸಿದ್ದಾರೆ ಎಂದು ತಿಳಿದುಬಂದಿದೆ.
ಅಭ್ಯರ್ಥಿಗಳ ಪಟ್ಟಿ : ಕಾಂಗ್ರೆಸ್ | ಬಿಜೆಪಿ | ಜೆಡಿಎಸ್
ಬಿಜೆಪಿಯು ತನ್ನ ಎದುರಾಳಿ ಕಾಂಗ್ರೆಸ್ ಅನ್ನು ಟೀಕಿಸಲು ಬಳಸುತ್ತಿರುವ ಪ್ರಮುಖ ಅಸ್ತ್ರ 'ಕುಟುಂಬ ರಾಜಕಾರಣದ್ದು' ಆದರೆ ಯಡಿಯೂರಪ್ಪ ಅವರ ವಿಜಯೇಂದ್ರ ಅವರಿಗೂ ಟಿಕೆಟ್ ನೀಡಿದರೆ ಅದು ಬಿಜೆಪಿಗೆ ಹಿನ್ನಡೆ ಆಗುತ್ತದೆ. ನೈತಿಕವಾಗಿ ಕಾಂಗ್ರೆಸ್ ಅನ್ನು ಎದುರಿಸಲು ಸಾಧ್ಯವಾಗುವುದಿಲ್ಲ ಎಂಬುದನ್ನು ಆರ್ಎಸ್ಎಸ್ ಬಿಜೆಪಿ ಹೈಕಮಾಂಡ್ಗೆ ಮನವರಿಕೆ ಮಾಡಿಕೊಟ್ಟಿದೆ.

ಆರ್ಎಸ್ಎಸ್ ಅಭಿಪ್ರಾಯ ಇದು
ಈಗಾಗಲೇ ಬಿಎಸ್ವೈ ಅವರ ಹಿರಿಯ ಪುತ್ರ ರಾಘವೇಂದ್ರ ಅವರು ಸಂಸದರಾಗಿ ಆಯ್ಕೆ ಆಗಿದ್ದಾರೆ. ಈಗ ಮತ್ತೊಬ್ಬ ಪುತ್ರನಿಗೂ ಟಿಕೆಟ್ ನೀಡಿದರೆ ಕುಟುಂಬ ರಾಜಕಾರಣದ ಕಳಂಕ ಅಂಟಲಿದೆ ಎಂಬುದು ಆರ್ಎಸ್ಎಸ್ ಅಭಿಪ್ರಾಯವಾಗಿದೆ.

ವರುಣಾದಲ್ಲಿ ಸೋಲಿನ ವಾಸನೆ
ಆರ್ಎಸ್ಎಸ್ ಬಿಜೆಪಿ ಹೈಕಮಾಂಡ್ಗೆ ಸಮೀಕ್ಷೆ ವರದಿಯೊಂದನ್ನು ನೀಡಿದ್ದು, ಸಮೀಕ್ಷೆ ಪ್ರಕಾರ ವರುಣಾ ಹಾಗೂ ಶೋಭಾ ಅವರು ಸ್ಪರ್ಧಿಸಲು ಇಚ್ಛಿಸಿದ್ದ ಯಶವಂತಪುರದಲ್ಲಿ ಬಿಜೆಪಿಗೆ ಸೋಲು ಕಾದಿದೆ ಎನ್ನಲಾಗಿದೆ. ಸಿದ್ದರಾಮಯ್ಯ ಅವರ ಪುತ್ರ ಯತೀಂದ್ರ ಅವರೇ ವರುಣಾದಲ್ಲಿ ಗೆಲ್ಲುವ ಸಾಧ್ಯತೆ ಇದೆ ಎಂದು ಆರ್ಎಸ್ಎಸ್ ಸಮೀಕ್ಷೆ ನೀಡಿದೆ.

ಶೋಭಾ ಟಿಕೆಟ್ ಹಿಂದೆಯೂ ಆರ್ಎಸ್ಎಸ್
ಶೋಭಾ ಕರಂದ್ಲಾಜೆಗೂ ಟಿಕೆಟ್ ತಪ್ಪಿಸುವ ಹಿಂದೆ ಆರ್ಎಸ್ಎಸ್ ಕಾರ್ಯ ನಿರ್ವಹಿಸಿದೆ. ಉತ್ತಮ ಅಭ್ಯರ್ಥಿಗಳನ್ನು ವಿಧಾನಸಭೆಗೆ ಆಯ್ಕೆ ಮಾಡಿದರೆ ಮುಂದಿನ ವರ್ಷವೇ ನಡೆಯಲಿರುವ ಲೋಕಸಭೆಗೆ ಅಭ್ಯರ್ಥಿಗಳ ಕೊರತೆ ಆಗದಂತೆ ನೋಡಿಕೊಳ್ಳುವ ಕಾರಣ ಈ ರೀತಿಯ ನಿರ್ಣಯ ತೆಗೆದುಕೊಳ್ಳಲಾಗಿದೆ ಎನ್ನಲಾಗಿದೆ.

ಯಡಿಯೂರಪ್ಪ ಹೀಗಂದರು
ವಿಜಯೇಂದ್ರಗೆ ಟಿಕೆಟ್ ತಪ್ಪುವ ಹಿಂದೆ ಹೈಕಮಾಂಡ್ ಕಾರಣ ಅಲ್ಲ ಎಂದು ಯಡಿಯೂರಪ್ಪ ಹೇಳಿದ್ದಾರೆ, ವಿಜಯೇಂದ್ರ ಸ್ಪರ್ಧೆಯಿಂದ ಹಿಂದೆ ಸರಿಯಬೇಕು ಎಂಬುದು ನನ್ನ ಮತ್ತು ನನ್ನ ಕುಟುಂಬದ ನಿರ್ಣಯ ಎಂಬುದು ಯಡಿಯೂರಪ್ಪ ಅವರ ಮಾತು.

ಅನಂತ್ಕುಮಾರ್ ಕೈವಾಡ?
ವಿಜಯೇಂದ್ರ ಹಾಗೂ ಶೋಭಾ ಅವರ ಟಿಕೆಟ್ ಕೈತಪ್ಪುವ ಹಿಂದೆ ಕೇಂದ್ರ ಸಚಿವ ಅನಂತ್ಕುಮಾರ್ ಹಾಗೂ ರಾಜ್ಯ ಬಿಜೆಪಿ ಸಂಘಟನಾ ಕಾರ್ಯದರ್ಶಿ ಸಂತೋಶ್ ಅವರ ಕೈವಾಡ ಇದೆ ಎನ್ನುವ ಊಹಾಪೋಹವೂ ಇದೆ.
-
Sachin Tendulkar: ಅಭಿಷೇಕ್ ಶರ್ಮಾಗೆ ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ವಿಶೇಷ ಸಂದೇಶ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
ಟೀಕೆಗಳು ಸಾಯುತ್ತವೆ, ಕೆಲಸಗಳು ಉಳಿಯುತ್ತವೆ ಎಂಬ ಮಾತಿನಂತೆ ನಡೆದುಕೊಂಡ ಯುವರಾಜ್ ಸಿಂಗ್ ಶಿಶ್ಯ ಅಭಿಷೇಕ್ ಶರ್ಮಾ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Property: ಬೆಂಗಳೂರಿನ 510 ಕೋಟಿ ಮೌಲ್ಯದ 14 ಎಕರೆ ಭೂಮಿ ವಶಕ್ಕೆ ಪಡೆದ ಜಿಬಿಎ, ಕಾರಣವೇನು -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು -
ಟಿ20 ವಿಶ್ವಕಪ್ 2026 ಭಾರತದ ಮುಡಿಗೆ: ಬಾಲ ಮುದುರಿಕೊಂಡ 'ಸೈಲೆಂಟ್' ಸ್ಯಾಂಟ್ನರ್












Click it and Unblock the Notifications