ಟಿಕೆಟ್ ಘೋಷಣೆಯಾಗದಿದ್ದರೂ ನಾಮಪತ್ರ ಸಲ್ಲಿಸಲಿರುವ ವಿಜಯೇಂದ್ರ

Recommended Video

      ಬಿ ಎಸ್ ಯಡಿಯೂರಪ್ಪನವರ ಮಗ ಬಿ ವೈ ವಿಜಯೇಂದ್ರ ಟಿಕೆಟ್ ಇಲ್ಲದೆ ಇಂದು ನಾಮಪತ್ರ ಸಲ್ಲಿಕೆ | Oneindia Kannada

      ಮೈಸೂರು, ಏಪ್ರಿಲ್ 23: ಬಿಜೆಪಿಯಿಂದ ಟಿಕೇಟ್ ಘೋಷಣೆಯಾಗದಿದ್ದರೂ ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಅವರ ಪುತ್ರ, ಬಿವೈ ವಿಜಯೇಂದ್ರ ಅವರು ಮೈಸೂರಿನ ವರುಣಾ ಕ್ಷೇತ್ರದಿಂದ ಇಂದು(ಏ.23) ನಾಮಪತ್ರ ಸಲ್ಲಿಸಲಿದ್ದಾರೆ.

      ಏ.20 ಶುಕ್ರವಾರದಂದು ಬಿಡುಗಡೆಯಾದ ಬಿಜೆಪಿ ಪಟ್ಟಿಯಲ್ಲಿ ವರುಣಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿಯಾಗಿ ವಿಜಯೇಂದ್ರ ಅವರ ಹೆಸರು ನಿರೀಕ್ಷಿಸಲಾಗಿತ್ತು. ಆದರೆ ವರುಣಾ, ಬಾದಾಮಿ, ಯಶವಂತಪುರ ಸೇರಿದಂತೆ 11 ಕ್ಷೇತ್ರಗಳಲ್ಲಿ ಬಿಜೆಪಿ ಅಭ್ಯರ್ಥಿಗಳನ್ನು ನಾಯಕರು ಘೋಷಿಸಿರಲಿಲ್ಲ.

      ಆದರೂ ಇಂದು ನಾಮಪತ್ರ ಸಲ್ಲಿಸಲಿರುವ ವಿಜಯೇಂದ್ರ ಅವರಿಗೆ ತಂದೆ, ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ, ಸಂಸದ ಶ್ರೀ ರಾಮುಲು, ಮಾಜಿ ಸಚಿವರುಗಳಾದ ವಿ.ಶ್ರೀನಿವಾಸ್ ಪ್ರಸಾದ್, ಗೋವಿಂದ ಕಾರಜೋಳ, ಶಿಕಾರಿಪುರದ ಶಾಸಕ ಬಿ.ವೈ. ರಾಘವೇಂದ್ರ, ನಿವೃತ್ತ ಪೋಲಿಸ್ ಅಧಿಕಾರಿ ಎಲ್. ರೇವಣ್ಣ ಸಿದ್ದಯ್ಯ, ಹಿಂದುಳಿದ ಮೋರ್ಚ ರಾಜ್ಯಾಧ್ಯಕ್ಷ ಬಿ.ಜೆ. ಪುಟ್ಟಸ್ವಾಮಿ ಸೇರಿದಂತೆ ಹಲವು ಮುಖಂಡರು ಸಾಥ್ ನೀಡಲಿದ್ದಾರೆ.

      Karnataka elections: BY Vijayendra to file his nomination from Varuna today

      ನಾಮಪತ್ರ ಸಲ್ಲಿಕೆಗೂ ಮುನ್ನ ವಿಜಯೇಂದ್ರ ಅವರು ನಂಜನಗೂಡಿನ ವಿದ್ಯಾವರ್ಧಕ ಕಾಲೇಜು ಮೈದಾನದಲ್ಲಿ ಬೃಹತ್ ಸಮಾವೇಶ ನಡೆಸಲಿದ್ದಾರೆ.

      ವರುಣಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪುತ್ರ ಡಾ.ಯತೀಂದ್ರ ಸಿದ್ದರಾಮಯ್ಯ ಅವರು ಸ್ಪರ್ಧಿಸುತ್ತಿದ್ದು, ಹಾಲಿ, ಮಾಜಿ ಮುಖ್ಯಮಂತ್ರಿಗಳ ಪುತ್ರರ ಕಾಳಗಕ್ಕಾಗಿ ಈ ಕ್ಷೇತ್ರ ಕುತೂಹಲ ಕೆರಳಿಸಿದೆ. ಮೇ. 12 ರಂದು ನಡೆಯಲಿರುವ ವಿಧಾನಸಭಾ ಚುನಾವಣೆಯ ಫಲಿತಾಂಶ ಮೇ 15 ರಂದು ಹೊರಬೀಳಲಿದ್ದು, ವರುಣಾಕ್ಕೆ ಅಧಿಪತಿ ಯಾರು ಎಂಬುದು ನಿರ್ಧಾರವಾಗಲಿದೆ.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+