ಮೈಸೂರಿನಲ್ಲಿ ನಡೆಯುತ್ತಾ ಮಾಯಾವತಿ ಮ್ಯಾಜಿಕ್?
ಮೈಸೂರು, ಏಪ್ರಿಲ್ 26: ಕರ್ನಾಟಕ ವಿಧಾನಸಭೆ ಚುನಾವಣೆಯ ಹಿನ್ನೆಲೆಯಲ್ಲಿ ಪ್ರಚಾರಕ್ಕಾಗಿ ಮೈಸೂರಿಗೆ ಆಗಮಿಸಿರುವ ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ, ಬಿಎಸ್ ಪಿ ನಾಯಕಿ ಮಾಯಾವತಿ ಮ್ಯಾಜಿಕ್ ಮಾಡುತ್ತಾರಾ? ಬಿಎಸ್ ಪಿ(ಬಹುಜನ ಸಮಾಜವಾದಿ ಪಕ್ಷ) ಈಗಾಗಲೇ ಕರ್ನಾಟಕದಲ್ಲಿ ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಂಡಿದೆ.
ಕರ್ನಾಟಕದಲ್ಲಿ ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಂಡಿರುವ ಮಾಯಾವತಿ ನಿರ್ಧಾರ ಕಾಂಗ್ರೆಸ್ ಗೆ ರುಚಿಸದು ಎಂಬುದು ಗೊತ್ತಿದ್ದರೂ ಇವಕ್ಕೆಲ್ಲ ಕ್ಯಾರೇ ಎನ್ನದ ಮಾಯಾವತಿ ಜೆಡಿಎಸ್ ಜೊತೆ ಕೈಜೋಡಿಸಿ, ಪ್ರಚಾರಕ್ಕೂ ಆಗಮಿಸಿದ್ದಾರೆ.
ನಿನ್ನೆ(ಏ.25) ಮೈಸೂರಿನಲ್ಲಿ ನಡೆದ ಬೃಹತ್ ಸಮಾವೇಶಕ್ಕೆ ನಿರೀಕ್ಷಿಸಿದಷ್ಟು ಜನರು ಆಗಮಿಸದಿದ್ದುದು ಉಭಯ ಪಕ್ಷದ ನಾಯಕರಿಗೂ ಇರಿಸುಮುರಿಸುಂಟು ಮಾಡಿತ್ತು!

ಮಾಯಾವತಿ ಕುರಿತು ಹಬ್ಬಿದ ವದಂತಿ
ಸಭೆಗೆ ಮಾಯಾವತಿ ಸಮಯಕ್ಕೆ ಸರಿಯಾಗಿ ಆಗಮಿಸದಿದ್ದುದು ಸಹ ಹಲವು ಊಹಾಪೋಹಗಳಿಗೆ ಹಾದಿಮಾಡಿಕೊಟ್ಟಿತ್ತು. ನಿರೀಕ್ಷಿಸಿದಷ್ಟು ಜನ ಸೇರಿಲ್ಲ ಎಂದು ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಮತ್ತು ಮಾಜಿ ಮುಖ್ಯಮಂತ್ರಿ, ಜೆಡಿಎಸ್ ರಾಜ್ಯಾಧ್ಯಕ್ಷ ಕುಮಾರಸ್ವಾಮಿ ಇಬ್ಬರೂ ತಲೆಕೆಡಿಸಿಕೊಳ್ಳುತ್ತಿದ್ದರೆ, ಇತ್ತ ಇಬ್ಬರು ನಾಯಕರ ಭಾಷಣ ಮುಗಿಯುವವರೆಗೂ ಮಾಯಾವತಿ ಸಭೆಗೆ ಆಗಮಿಸದಿದ್ದುದು ಮತ್ತಷ್ಟು ಅನುಮಾನ ಹುಟ್ಟುಹಾಕಿತ್ತು. ಬಹುಶಃ ಮಾಯಾವತಿ ಕೈಕೊಡುತ್ತಾರೆ ಎಂದುಕೊಂದಿದ್ದರೆ ಕೆಲವು ಅನಿವಾರ್ಯ ಕಾರಣಗಳಿಂದಾಗಿ ಮಾಯಾವತಿ ಸಭೆಗೆ ತಡವಾಗಿ ಆಗಮಿಸಿದರು.

ಮಾಯಾವತಿಗೆ ಮುನಿಸು?
"ರಾಜ್ಯದಲ್ಲಿ ಬಿಜೆಪಿ ಜೊತೆ ಜೆಡಿಎಸ್ ಮೈತ್ರಿ ಮಾಡಿಕೊಳ್ಳುತ್ತದೆ ಎಂಬೆಲ್ಲ ಸುದ್ದಿ ಹಬ್ಬಿದ್ದು ಮಾಯಾವತಿ ಅವರಿಗೂ ನೋವನ್ನುಂಟುಮಾಡಿದೆ. ಆದ್ದರಿಂದ ಅವರು ಜೆಡಿಎಸ್ ಜೊತೆ ಮುನಿಸಿಕೊಂಡಿದ್ದಾರೆ. ಅದಕ್ಕೆಂದೇ ಅವರು ಸಭೆಗೆ ಆಗಮಿಸುತ್ತಿಲ್ಲ" ಎಂದು ಜನರ ನಡುವಲ್ಲಿ ಗುಸುಗುಸು ಎದ್ದಿತ್ತು. ಆದರೆ ಈ ಎಲ್ಲಾ ಊಹಾಪೋಹಗಳಿಗೂ ಮಾಯಾವತಿ ಆಗಮನ ತೆರೆ ಎಳೆದಿತ್ತು.

ಬಿಜೆಪಿ ಕಾಂಗ್ರೆಸ್ ಮೇಲೆ ಟೀಕೆಯ ಸುರಿಮಳೆ
ಭಾಷಣ ಆರಂಬಿಸಿದ ಮಾಯಾವತಿ ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷಗಳ ಮೇಲೆ ಟೀಕೆಯ ಮಳೆ ಸುರಿಸಿದರು. "ಬಿಜೆಪಿ ಕಾಂಗ್ರೆಸ್ಸಿಗರು ಯಾವತ್ತಿದ್ದರೂ ದಲಿತ ವಿರೋಧಿಗಳು, ಅವರು ದಲಿತರ ಹಿತಾಸಕ್ತಿಯನ್ನು ಕಾಪಾಡಲು ಎಂದಿಗೂ ಬದ್ಧರಾಗಿಲ್ಲ. ಆದ್ದರಿಂದ ಜೆಡಿಎಸ್- ಬಿಎಸ್ಪಿಗೆ ಮತ ಹಾಕಿ" ಎಂದು ಜನರಲ್ಲಿ ಮನವಿ ಮಾಡಿಕೊಂಡರು. ಮೈಸೂರಿನ ಮಹಾರಾಜಾ ಕಾಲೇಜು ಮೈದಾನದಲ್ಲಿ ನಿನ್ನೆ ಅಪರಾಹ್ನ 4 ಗಂಟೆಗೆ ಸಮಾವೇಶ ನಡೆಯಿತು. ಸಮಾವೇಶದ ನಂತರ ಮೈಸೂರಿನ ಖಾಸಗಿ ಹೊಟೇಲ್ ವೊಂದರಲ್ಲಿ ಜೆಡಿಎಸ್ ರಾಷ್ಟ್ರಾಧ್ಯಕ್ಷ ದೇವೇಗೌಡ ಮತ್ತು ಮಾಯಾವತಿ ಚರ್ಚೆ ನಡೆಸಿದರು.

ಬಿಎಸ್ಪಿಯಿಂದ 20 ಅಭ್ಯರ್ಥಿಗಳು
2008 ಮತ್ತು 2013ರ ವಿಧಾನಸಭೆ ಚುನಾವಣೆಯ ಸಮಯದಲ್ಲೂ ಮೈಸೂರಿಗೆ ಆಗಮಿಸಿದ್ದ ಮಾಯಾವತಿ ಇದೀಗ ಮೂರನೇ ಬಾರಿ ಮೈಸೂರಿಗೆ ಆಗಮಿಸಿದ್ದಾರೆ. ಮೇ 12 ರಂದು ನಡೆಯಲಿರುವ ಕರ್ನಾಟಕ ವಿಧಾನಸಭೆ ಚುನಾವಣೆಯ ಫಲಿತಾಂಶ ಮೇ 15 ರಂದು ಹೊರಬೀಳಲಿದೆ. ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಂಡಿರುವ ಬಿಎಸ್ ಪಿ ತನ್ನ 20 ಅಭ್ಯರ್ಥಿಗಳನ್ನು ಕರ್ನಾಟಕದಲ್ಲಿ ಕಣಕ್ಕಿಳಿಸಿದೆ.
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Shivam Dube: ಶಿವಂ ದುಬೆ ಸಾಧನೆಗೆ ಮನಸಾರೆ ಮೆಚ್ಚುಗೆ ಸೂಚಿಸಿದ ಪತ್ನಿ ಅಂಜುಮ್ ಖಾನ್: ಇನ್ಸ್ಟಾ ಪೋಸ್ಟರ್ ಭಾರೀ ವೈರಲ್ -
Fact Check: ಟಿ20 ವಿಶ್ವಕಪ್ ಫೈನಲ್ ಪಂದ್ಯಕ್ಕೂ ಮುನ್ನ ರಾಷ್ಟ್ರಗೀತೆ ವೇಳೆ ಕಣ್ಣೀರಿಟ್ಟ ಕಿವೀಸ್ ಆಟಗಾರ ಇಶ್ ಸೋಧಿ -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ












Click it and Unblock the Notifications