ಮೈಸೂರಿನಲ್ಲಿ ನಡೆಯುತ್ತಾ ಮಾಯಾವತಿ ಮ್ಯಾಜಿಕ್?
ಮೈಸೂರು, ಏಪ್ರಿಲ್ 26: ಕರ್ನಾಟಕ ವಿಧಾನಸಭೆ ಚುನಾವಣೆಯ ಹಿನ್ನೆಲೆಯಲ್ಲಿ ಪ್ರಚಾರಕ್ಕಾಗಿ ಮೈಸೂರಿಗೆ ಆಗಮಿಸಿರುವ ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ, ಬಿಎಸ್ ಪಿ ನಾಯಕಿ ಮಾಯಾವತಿ ಮ್ಯಾಜಿಕ್ ಮಾಡುತ್ತಾರಾ? ಬಿಎಸ್ ಪಿ(ಬಹುಜನ ಸಮಾಜವಾದಿ ಪಕ್ಷ) ಈಗಾಗಲೇ ಕರ್ನಾಟಕದಲ್ಲಿ ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಂಡಿದೆ.
ಕರ್ನಾಟಕದಲ್ಲಿ ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಂಡಿರುವ ಮಾಯಾವತಿ ನಿರ್ಧಾರ ಕಾಂಗ್ರೆಸ್ ಗೆ ರುಚಿಸದು ಎಂಬುದು ಗೊತ್ತಿದ್ದರೂ ಇವಕ್ಕೆಲ್ಲ ಕ್ಯಾರೇ ಎನ್ನದ ಮಾಯಾವತಿ ಜೆಡಿಎಸ್ ಜೊತೆ ಕೈಜೋಡಿಸಿ, ಪ್ರಚಾರಕ್ಕೂ ಆಗಮಿಸಿದ್ದಾರೆ.
ನಿನ್ನೆ(ಏ.25) ಮೈಸೂರಿನಲ್ಲಿ ನಡೆದ ಬೃಹತ್ ಸಮಾವೇಶಕ್ಕೆ ನಿರೀಕ್ಷಿಸಿದಷ್ಟು ಜನರು ಆಗಮಿಸದಿದ್ದುದು ಉಭಯ ಪಕ್ಷದ ನಾಯಕರಿಗೂ ಇರಿಸುಮುರಿಸುಂಟು ಮಾಡಿತ್ತು!

ಮಾಯಾವತಿ ಕುರಿತು ಹಬ್ಬಿದ ವದಂತಿ
ಸಭೆಗೆ ಮಾಯಾವತಿ ಸಮಯಕ್ಕೆ ಸರಿಯಾಗಿ ಆಗಮಿಸದಿದ್ದುದು ಸಹ ಹಲವು ಊಹಾಪೋಹಗಳಿಗೆ ಹಾದಿಮಾಡಿಕೊಟ್ಟಿತ್ತು. ನಿರೀಕ್ಷಿಸಿದಷ್ಟು ಜನ ಸೇರಿಲ್ಲ ಎಂದು ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ ಮತ್ತು ಮಾಜಿ ಮುಖ್ಯಮಂತ್ರಿ, ಜೆಡಿಎಸ್ ರಾಜ್ಯಾಧ್ಯಕ್ಷ ಕುಮಾರಸ್ವಾಮಿ ಇಬ್ಬರೂ ತಲೆಕೆಡಿಸಿಕೊಳ್ಳುತ್ತಿದ್ದರೆ, ಇತ್ತ ಇಬ್ಬರು ನಾಯಕರ ಭಾಷಣ ಮುಗಿಯುವವರೆಗೂ ಮಾಯಾವತಿ ಸಭೆಗೆ ಆಗಮಿಸದಿದ್ದುದು ಮತ್ತಷ್ಟು ಅನುಮಾನ ಹುಟ್ಟುಹಾಕಿತ್ತು. ಬಹುಶಃ ಮಾಯಾವತಿ ಕೈಕೊಡುತ್ತಾರೆ ಎಂದುಕೊಂದಿದ್ದರೆ ಕೆಲವು ಅನಿವಾರ್ಯ ಕಾರಣಗಳಿಂದಾಗಿ ಮಾಯಾವತಿ ಸಭೆಗೆ ತಡವಾಗಿ ಆಗಮಿಸಿದರು.

ಮಾಯಾವತಿಗೆ ಮುನಿಸು?
"ರಾಜ್ಯದಲ್ಲಿ ಬಿಜೆಪಿ ಜೊತೆ ಜೆಡಿಎಸ್ ಮೈತ್ರಿ ಮಾಡಿಕೊಳ್ಳುತ್ತದೆ ಎಂಬೆಲ್ಲ ಸುದ್ದಿ ಹಬ್ಬಿದ್ದು ಮಾಯಾವತಿ ಅವರಿಗೂ ನೋವನ್ನುಂಟುಮಾಡಿದೆ. ಆದ್ದರಿಂದ ಅವರು ಜೆಡಿಎಸ್ ಜೊತೆ ಮುನಿಸಿಕೊಂಡಿದ್ದಾರೆ. ಅದಕ್ಕೆಂದೇ ಅವರು ಸಭೆಗೆ ಆಗಮಿಸುತ್ತಿಲ್ಲ" ಎಂದು ಜನರ ನಡುವಲ್ಲಿ ಗುಸುಗುಸು ಎದ್ದಿತ್ತು. ಆದರೆ ಈ ಎಲ್ಲಾ ಊಹಾಪೋಹಗಳಿಗೂ ಮಾಯಾವತಿ ಆಗಮನ ತೆರೆ ಎಳೆದಿತ್ತು.

ಬಿಜೆಪಿ ಕಾಂಗ್ರೆಸ್ ಮೇಲೆ ಟೀಕೆಯ ಸುರಿಮಳೆ
ಭಾಷಣ ಆರಂಬಿಸಿದ ಮಾಯಾವತಿ ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷಗಳ ಮೇಲೆ ಟೀಕೆಯ ಮಳೆ ಸುರಿಸಿದರು. "ಬಿಜೆಪಿ ಕಾಂಗ್ರೆಸ್ಸಿಗರು ಯಾವತ್ತಿದ್ದರೂ ದಲಿತ ವಿರೋಧಿಗಳು, ಅವರು ದಲಿತರ ಹಿತಾಸಕ್ತಿಯನ್ನು ಕಾಪಾಡಲು ಎಂದಿಗೂ ಬದ್ಧರಾಗಿಲ್ಲ. ಆದ್ದರಿಂದ ಜೆಡಿಎಸ್- ಬಿಎಸ್ಪಿಗೆ ಮತ ಹಾಕಿ" ಎಂದು ಜನರಲ್ಲಿ ಮನವಿ ಮಾಡಿಕೊಂಡರು. ಮೈಸೂರಿನ ಮಹಾರಾಜಾ ಕಾಲೇಜು ಮೈದಾನದಲ್ಲಿ ನಿನ್ನೆ ಅಪರಾಹ್ನ 4 ಗಂಟೆಗೆ ಸಮಾವೇಶ ನಡೆಯಿತು. ಸಮಾವೇಶದ ನಂತರ ಮೈಸೂರಿನ ಖಾಸಗಿ ಹೊಟೇಲ್ ವೊಂದರಲ್ಲಿ ಜೆಡಿಎಸ್ ರಾಷ್ಟ್ರಾಧ್ಯಕ್ಷ ದೇವೇಗೌಡ ಮತ್ತು ಮಾಯಾವತಿ ಚರ್ಚೆ ನಡೆಸಿದರು.

ಬಿಎಸ್ಪಿಯಿಂದ 20 ಅಭ್ಯರ್ಥಿಗಳು
2008 ಮತ್ತು 2013ರ ವಿಧಾನಸಭೆ ಚುನಾವಣೆಯ ಸಮಯದಲ್ಲೂ ಮೈಸೂರಿಗೆ ಆಗಮಿಸಿದ್ದ ಮಾಯಾವತಿ ಇದೀಗ ಮೂರನೇ ಬಾರಿ ಮೈಸೂರಿಗೆ ಆಗಮಿಸಿದ್ದಾರೆ. ಮೇ 12 ರಂದು ನಡೆಯಲಿರುವ ಕರ್ನಾಟಕ ವಿಧಾನಸಭೆ ಚುನಾವಣೆಯ ಫಲಿತಾಂಶ ಮೇ 15 ರಂದು ಹೊರಬೀಳಲಿದೆ. ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಂಡಿರುವ ಬಿಎಸ್ ಪಿ ತನ್ನ 20 ಅಭ್ಯರ್ಥಿಗಳನ್ನು ಕರ್ನಾಟಕದಲ್ಲಿ ಕಣಕ್ಕಿಳಿಸಿದೆ.
-
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
ಬೆಂಗಳೂರು-ಅರಸೀಕೆರೆ ನಡುವೆ ನೂತನ ಮೆಮು ರೈಲು ಸೇವೆ: ಈಡೇರಿತು ಪ್ರಯಾಣಿಕರ ಬಹುದಿನದ ಬೇಡಿಕೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
IPL ಐಪಿಎಲ್ ಫ್ರೀ ಟಿಕೆಟ್ ವಿವಾದ: ವೆಂಕಟೇಶ್ ಪ್ರಸಾದ್ – ಸಿದ್ದರಾಮಯ್ಯ ಭೇಟಿ ಫೋಟೋಗೆ ತೇಜಸ್ವಿ ಸೂರ್ಯ ಕೆಂಡ -
Pratham: ನಟ ಪ್ರಥಮ್ ಬೆಂಗಳೂರು ತೊರೆಯಲು ದರ್ಶನ್ ಅಭಿಮಾನಿಗಳ ಗಲಾಟೆ ಕಾರಣವೇ? ಅಸಲಿ ಕಾರಣ ಬಿಚ್ಚಿಟ್ಟ ಒಳ್ಳೆ ಹುಡುಗ -
1ನೇ ತರಗತಿ ದಾಖಲಾತಿ: 6 ವರ್ಷ ತುಂಬಿರಬೇಕು ಎಂಬ ನಿಯಮವನ್ನು ಕೊಂಚ ಸಡಿಲಿಕೆ ಮಾಡಿದ ಸರ್ಕಾರ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು












Click it and Unblock the Notifications