ಆಸ್ತಿ ವಿವಾದ : ಕಾಂತರಾಜೇ ಅರಸ್ ಅರ್ಜಿ ಹೈಕೋರ್ಟ್ನಲ್ಲಿ ವಜಾ
ಮೈಸೂರು, ಏ.7 : ಮೈಸೂರು ಸಂಸ್ಥಾನದ ಆಸ್ತಿಯಲ್ಲಿ ಪಾಲು ನೀಡಬೇಕು ಎಂದು ಕಾಂತರಾಜೇ ಅರಸ್ ಸಲ್ಲಿಸಿದ್ದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ವಜಾಗೊಳಿಸಿದೆ. ಕೆಳಹಂತದ ನ್ಯಾಯಾಲಯದಲ್ಲಿಯೇ ಈ ಅರ್ಜಿಯ ವಿಚಾರಣೆ ಮುಂದುವರೆಯಲಿದೆ.
ಬೆಂಗಳೂರಿನ ಮೇಯೋ ಹಾಲ್ ಸಿಟಿ ಸಿವಿಲ್ ನ್ಯಾಯಾಲಯದಲ್ಲಿ ದಿ.ಶ್ರೀಕಂಠದತ್ತ ನರಸಿಂಹರಾಜ ಒಡೆಯರ್ ಸೋದರಳಿಯ ಕಾಂತರಾಜೇ ಅರಸ್ ಪರವಾಗಿ ವಕೀಲ ಗೋವಿಂದರಾಜು ಅವರು ಫೆ.19ರಂದು ಅರ್ಜಿ ಸಲ್ಲಿಸಿದ್ದರು. ಫೆ.23ರಂದು ದತ್ತು ಸ್ವೀಕಾರ ಸಮಾರಂಭವಿತ್ತು ಅದಕ್ಕೂ ಮೊದಲೇ ಈ ಅರ್ಜಿ ಸಲ್ಲಿಕೆಯಾಗಿತ್ತು.

ಮೈಸೂರು ಸಂಸ್ಥಾನದ ಆಸ್ತಿಯಲ್ಲಿ ಪಾಲು ನೀಡಬೇಕು ಮತ್ತು ಈಗಿರುವ ಆಸ್ತಿಯನ್ನು ಮೂರನೇ ವ್ಯಕ್ತಿಗೆ ಹಸ್ತಾಂತರ ಮಾಡದಂತೆ ತಡೆ ನೀಡಬೇಕು ಎಂದು ಕಾಂತರಾಜೇ ಅರಸ್ ಅರ್ಜಿಯಲ್ಲಿ ಮನವಿ ಮಾಡಿದ್ದರು. ಆದರೆ, ಕೋರ್ಟ್ ಆಸ್ತಿ ಹಸ್ತಾಂತರಕ್ಕೆ ತಡೆಯಾಜ್ಞೆ ನೀಡಲು ನಿರಾಕರಿಸಿತ್ತು. [ಕಾಂತರಾಜೇ ಅರಸ್ ವಿರುದ್ಧ ಭೂ ದಾಖಲೆ ತಿದ್ದುಪಡಿ ಆರೋಪ]
ಹೈಕೋರ್ಟ್ಗೆ ಮೊರೆ : ಸಿಟಿ ಸಿವಿಲ್ ನ್ಯಾಯಾಲಯ ತಡೆ ನೀಡಲು ನಿರಾಕರಿಸಿರುವುದನ್ನು ಪ್ರಶ್ನಿಸಿ ಕಾಂತರಾಜೇ ಅರಸ್ ಪರ ವಕೀಲರು ಹೈಕೋರ್ಟ್ಗೆ ಮೇಲ್ಮನವಿ ಅರ್ಜಿ ಸಲ್ಲಿಸಿದ್ದರು. ಅರ್ಜಿಯ ವಿಚಾರಣೆಯಲ್ಲಿ ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ಕೋರ್ಟ್ ಸೂಚನೆ ನೀಡಿತ್ತು. [ಯದುವೀರ್ ಯದುವಂಶದ 27ನೇ ಅರಸ]
ಏ.6ರ ಸೋಮವಾರ ಕರ್ನಾಟಕ ಹೈಕೋರ್ಟ್ನಲ್ಲಿ ಪುನಃ ಅರ್ಜಿಯ ವಿಚಾರಣೆ ನಡೆಯಿತು. ಈ ಸಂದರ್ಭದಲ್ಲಿ ಅರ್ಜಿಯ ವಿಚಾರಣೆ ಕೆಳಹಂತದ ನ್ಯಾಯಾಲಯದಲ್ಲಿಯೇ ನಡೆಯಲಿ ಎಂದು ಹೈಕೋರ್ಟ್ ಹೇಳಿದ್ದು, ಕಾಂತರಾಜೇ ಅರಸ್ ಮೇಲ್ಮನವಿಯನ್ನು ತಿರಸ್ಕರಿಸಿದೆ.
ರಾಣಿ ಪ್ರಮೋದಾ ದೇವಿ ಅವರ ಪರವಾಗಿ ಹೈಕೋರ್ಟ್ನಲ್ಲಿ ನಳಿನಿ ಚಿದಂಬರಂ ವಾದ ಮಂಡಿಸಿದರು. ಹೈಕೋರ್ಟ್ ಅರ್ಜಿಯ ವಿಚಾರಣೆಗೆ ಕೆಳಹಂತದ ನ್ಯಾಯಾಲಯದಲ್ಲಿ ಅವಕಾಶ ನೀಡಿದ್ದು, ಮೇಯೋ ಹಾಲ್ ಸಿಟಿ ಸಿವಿಲ್ ನ್ಯಾಯಾಲಯದಲ್ಲಿ ಏ.10ರಂದು ಅರ್ಜಿಯ ವಿಚಾರಣೆ ನಡೆಯಲಿದೆ.
-
Ram Gopal Varma: ದಾವೂದ್ ಇಬ್ರಾಹಿಂ ಇಲ್ಲದಿದ್ದರೆ ನಾನು ಬದುಕು ಕಟ್ಟಿಕೊಳ್ಳುತ್ತಿರಲಿಲ್ಲ: ನಿರ್ದೇಶಕ ರಾಮ್ ಗೋಪಾಲ್ ವರ್ಮಾ -
Dhurandhar 2 Pakistan: ಅರಬ್ ರಾಷ್ಟ್ರದ ಸಾಲ ತೀರಿಸಲು ದುರಂಧರ್ 2 ಬಿಡುಗಡೆಗೆ ಮುಂದಾಯ್ತಾ ಪಾಕಿಸ್ತಾನ, ಟ್ವಿಸ್ಟ್ -
Karnataka Train: ಕಲಬುರಗಿ - ಕಲ್ಯಾಣ ಕರ್ನಾಟಕದಲ್ಲಿ ರೈಲು ಪ್ರಯಾಣಿಕರ ನಿತ್ಯ ಪರದಾಟ: ಸಿದ್ದು ಮಠಪತಿ ಬರಹ -
Lata Mangeshkar & Asha Bhosle: ಆ ಒಂದು ಕಾರಣಕ್ಕೆ ತಂಗಿ ಆಶಾ ಬೋಸ್ಲೆ ಜೊತೆ ಮಾತು ಬಿಟ್ಟಿದ್ದ ಲತಾ ಮಂಗೇಶ್ಕರ್ -
ಸೌದಿ ಅರೇಬಿಯಾದಲ್ಲಿ ಪಾಕಿಸ್ತಾನಿ ಸೇನಾಪಡೆ ನಿಯೋಜನೆ: ಮಿತ್ರ ರಾಷ್ಟ್ರಕ್ಕೆ 13,000 ಸೈನಿಕರು, ಯುದ್ಧ ವಿಮಾನಗಳ ರವಾನೆ -
Asha Bhosle Kannada Songs: ಆಶಾ ಭೋಸ್ಲೆ ಹಾಡಿದ ಕನ್ನಡದ ಹಾಡುಗಳು: ಕರ್ನಾಟಕದ ಜನರ ಮನ ಗೆದ್ದ ಖ್ಯಾತ ಗಾಯಕಿ -
Weekly Horoscope: ನಾಲ್ಕು ರಾಶಿಯವರಿಗೆ ಅದೃಷ್ಟ ಹೊತ್ತು ತರುವ ವಾರ ಇದು: ಹೇಗಿದೆ ನೋಡಿ ನಿಮ್ಮ ವಾರ ಭವಿಷ್ಯ -
Bhagyalakshmi Serial: ಕೊನೆಗೂ ಭಾಗ್ಯಲಕ್ಷ್ಮೀ - ಆದಿ ಮದುವೆ, ಮೂರು ಕುಟುಂಬಗಳನ್ನು ಒಂದು ಮಾಡುವ ಟಾಸ್ಕ್ -
Karntaka Weather: ಹವಾಮಾನ ವೈಪರೀತ್ಯ! ರಾಜ್ಯದ ಒಳನಾಡು, ಕರಾವಳಿ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ -
Banana Price: ತಮಿಳುನಾಡು ಬಿಸಿಗಾಳಿ ಎಫೆಕ್ಟ್ಗೆ ಕುಸಿದ ಬಾಳೆಹಣ್ಣು ಧಾರಣೆ: ಬೆಂಗಳೂರಿನಲ್ಲಿ ಕೆ.ಜಿಗೆ 7 ರೂಪಾಯಿ -
PUC Revaluation: ಸ್ಕ್ಯಾನ್ ಪ್ರತಿ ಪಡೆದವರ ಉತ್ತರ ಪತ್ರಿಕೆ ಮರುಮೌಲ್ಯಮಾಪನ; ಶುಲ್ಕ, ಪ್ರಮುಖ ದಿನಾಂಕಗಳು -
Bengaluru Property: ಬೆಂಗಳೂರು ಮೆಟ್ರೋದ ಈ ಮಾರ್ಗಗಳಲ್ಲಿ ಭೂಮಿ, ಪ್ರಾಪರ್ಟಿ ಬೆಲೆ ಶೇ 20% ರಿಂದ ಶೇ 30% ಹೆಚ್ಚಳ












Click it and Unblock the Notifications