ಆಸ್ತಿ ವಿವಾದ : ಕಾಂತರಾಜೇ ಅರಸ್ ಅರ್ಜಿ ಹೈಕೋರ್ಟ್ನಲ್ಲಿ ವಜಾ
ಮೈಸೂರು, ಏ.7 : ಮೈಸೂರು ಸಂಸ್ಥಾನದ ಆಸ್ತಿಯಲ್ಲಿ ಪಾಲು ನೀಡಬೇಕು ಎಂದು ಕಾಂತರಾಜೇ ಅರಸ್ ಸಲ್ಲಿಸಿದ್ದ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ವಜಾಗೊಳಿಸಿದೆ. ಕೆಳಹಂತದ ನ್ಯಾಯಾಲಯದಲ್ಲಿಯೇ ಈ ಅರ್ಜಿಯ ವಿಚಾರಣೆ ಮುಂದುವರೆಯಲಿದೆ.
ಬೆಂಗಳೂರಿನ ಮೇಯೋ ಹಾಲ್ ಸಿಟಿ ಸಿವಿಲ್ ನ್ಯಾಯಾಲಯದಲ್ಲಿ ದಿ.ಶ್ರೀಕಂಠದತ್ತ ನರಸಿಂಹರಾಜ ಒಡೆಯರ್ ಸೋದರಳಿಯ ಕಾಂತರಾಜೇ ಅರಸ್ ಪರವಾಗಿ ವಕೀಲ ಗೋವಿಂದರಾಜು ಅವರು ಫೆ.19ರಂದು ಅರ್ಜಿ ಸಲ್ಲಿಸಿದ್ದರು. ಫೆ.23ರಂದು ದತ್ತು ಸ್ವೀಕಾರ ಸಮಾರಂಭವಿತ್ತು ಅದಕ್ಕೂ ಮೊದಲೇ ಈ ಅರ್ಜಿ ಸಲ್ಲಿಕೆಯಾಗಿತ್ತು.

ಮೈಸೂರು ಸಂಸ್ಥಾನದ ಆಸ್ತಿಯಲ್ಲಿ ಪಾಲು ನೀಡಬೇಕು ಮತ್ತು ಈಗಿರುವ ಆಸ್ತಿಯನ್ನು ಮೂರನೇ ವ್ಯಕ್ತಿಗೆ ಹಸ್ತಾಂತರ ಮಾಡದಂತೆ ತಡೆ ನೀಡಬೇಕು ಎಂದು ಕಾಂತರಾಜೇ ಅರಸ್ ಅರ್ಜಿಯಲ್ಲಿ ಮನವಿ ಮಾಡಿದ್ದರು. ಆದರೆ, ಕೋರ್ಟ್ ಆಸ್ತಿ ಹಸ್ತಾಂತರಕ್ಕೆ ತಡೆಯಾಜ್ಞೆ ನೀಡಲು ನಿರಾಕರಿಸಿತ್ತು. [ಕಾಂತರಾಜೇ ಅರಸ್ ವಿರುದ್ಧ ಭೂ ದಾಖಲೆ ತಿದ್ದುಪಡಿ ಆರೋಪ]
ಹೈಕೋರ್ಟ್ಗೆ ಮೊರೆ : ಸಿಟಿ ಸಿವಿಲ್ ನ್ಯಾಯಾಲಯ ತಡೆ ನೀಡಲು ನಿರಾಕರಿಸಿರುವುದನ್ನು ಪ್ರಶ್ನಿಸಿ ಕಾಂತರಾಜೇ ಅರಸ್ ಪರ ವಕೀಲರು ಹೈಕೋರ್ಟ್ಗೆ ಮೇಲ್ಮನವಿ ಅರ್ಜಿ ಸಲ್ಲಿಸಿದ್ದರು. ಅರ್ಜಿಯ ವಿಚಾರಣೆಯಲ್ಲಿ ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ಕೋರ್ಟ್ ಸೂಚನೆ ನೀಡಿತ್ತು. [ಯದುವೀರ್ ಯದುವಂಶದ 27ನೇ ಅರಸ]
ಏ.6ರ ಸೋಮವಾರ ಕರ್ನಾಟಕ ಹೈಕೋರ್ಟ್ನಲ್ಲಿ ಪುನಃ ಅರ್ಜಿಯ ವಿಚಾರಣೆ ನಡೆಯಿತು. ಈ ಸಂದರ್ಭದಲ್ಲಿ ಅರ್ಜಿಯ ವಿಚಾರಣೆ ಕೆಳಹಂತದ ನ್ಯಾಯಾಲಯದಲ್ಲಿಯೇ ನಡೆಯಲಿ ಎಂದು ಹೈಕೋರ್ಟ್ ಹೇಳಿದ್ದು, ಕಾಂತರಾಜೇ ಅರಸ್ ಮೇಲ್ಮನವಿಯನ್ನು ತಿರಸ್ಕರಿಸಿದೆ.
ರಾಣಿ ಪ್ರಮೋದಾ ದೇವಿ ಅವರ ಪರವಾಗಿ ಹೈಕೋರ್ಟ್ನಲ್ಲಿ ನಳಿನಿ ಚಿದಂಬರಂ ವಾದ ಮಂಡಿಸಿದರು. ಹೈಕೋರ್ಟ್ ಅರ್ಜಿಯ ವಿಚಾರಣೆಗೆ ಕೆಳಹಂತದ ನ್ಯಾಯಾಲಯದಲ್ಲಿ ಅವಕಾಶ ನೀಡಿದ್ದು, ಮೇಯೋ ಹಾಲ್ ಸಿಟಿ ಸಿವಿಲ್ ನ್ಯಾಯಾಲಯದಲ್ಲಿ ಏ.10ರಂದು ಅರ್ಜಿಯ ವಿಚಾರಣೆ ನಡೆಯಲಿದೆ.
-
"ಬೆಂಗಳೂರು: 370 ಎಕ್ರೆ ಜಕ್ಕೂರು ವೈಮಾನಿಕ ಶಾಲೆ ಜಾಗದಲ್ಲಿ ಶಾಪಿಂಗ್ ಕಾಂಪ್ಲೆಕ್ಸ್ಗೆ ಪ್ಲ್ಯಾನ್'' -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Delay: ರೈಲು ಪ್ರಯಾಣಿಕರೇ ಎಚ್ಚರ! ನಾಳೆ ಬೆಂಗಳೂರು-ಚೆನ್ನೈ ನಡುವಿನ ಸಂಚಾರದಲ್ಲಿ ಭಾರಿ ವ್ಯತ್ಯಯ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ











Click it and Unblock the Notifications