ಮೈಸೂರು : ಹಳೆ ಹುಲಿಯನ್ನು ಬೇಟೆಯಾಡಿದ ಸಿಂಹ!
ಮೈಸೂರು, ಮೇ 16 : ಮೈಸೂರಿನಲ್ಲಿ ಅನುಭವಿ ಹಳೆ ಹುಲಿ ಮತ್ತು ಬಿಸಿರಕ್ತದ ಯುವ ಸಿಂಹದ ನಡುವಿನ ಭೀಕರ ಕಾಳಗದಲ್ಲಿ ಅಂತಿಮವಾಗಿ ಅನುಭವ ಇಲ್ಲದಿದ್ದ ಸಿಂಹಕ್ಕೇ ಜಯ ಸಿಕ್ಕಿದೆ.
ಮೈಸೂರು-ಕೊಡಗು ಲೋಕಸಭೆ ಕ್ಷೇತ್ರದಲ್ಲಿ ಭಾರತೀಯ ಜನತಾ ಪಕ್ಷದ ಅಭ್ಯರ್ಥಿ ಪ್ರತಾಪ್ ಸಿಂಹ ಅವರು ಕಾಂಗ್ರೆಸ್ ನ ಹಳೆ ಹುಲಿ, 2009ರಲ್ಲಿ ಗೆದ್ದಿದ್ದ ಅಡಗೂರು ವಿಶ್ವನಾಥ್ ಅವರನ್ನು 9 ಸಾವಿರ ಮತಗಳ ಅಂತರದಿಂದ ಸೋಲಿಸಿ, ಮೊದಲ ಬಾರಿಗೆ ಸಂಸತ್ತು ಪ್ರವೇಶಿಸಿದ್ದಾರೆ.
ಮೈಸೂರಿನಲ್ಲಿ ಕೂಡ ನರೇಂದ್ರ ಮೋದಿ ಅಲೆ ಪರಿಣಾಮ ಬೀರಿರುವುದು ಈ ಫಲಿತಾಂಶದಿಂದ ತಿಳಿದುಬಂದಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ತವರು ಜಿಲ್ಲೆಯಲ್ಲಿಯೇ ಕಾಂಗ್ರೆಸ್ ಪರಾಭವಗೊಂಡಿರುವುದು ಕಾಂಗ್ರೆಸ್ಸಿಗೆ ಮಾತ್ರವಲ್ಲ, ಪ್ರತಾಪ್ ಸಿಂಹ ಒಬ್ಬ ಅಪ್ರಬುದ್ಧ ರಾಜಕಾರಣಿ ಎಂದಿದ್ದ ಸಿದ್ದರಾಮಯ್ಯನವರಿಗೆ ತಲೆಎತ್ತಲಾರದಂತಾಗಿದೆ.
ರಾಜ್ಯದಲ್ಲಿ ಹೆಚ್ಚಿನ ಸ್ಥಾನ ಗೆಲ್ಲದಿದ್ದದೆ ಕುರ್ಚಿ ಅಲುಗಾಡುವುದು ಖಂಡಿತ ಎಂದು ತಿಳಿದಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ, ಅವರ ತವರೂರಲ್ಲಿ ಗೆಲ್ಲಬೇಕಿತ್ತು. ಅವರು ವಿಶ್ವನಾಥ್ ಪರ ಸಾಕಷ್ಟು ಪ್ರಚಾರವನ್ನೂ ನಡೆಸಿದ್ದರು. ಆದರೆ, ಸ್ಥಳೀಯ ನಾಯಕ ವಿಜಯಶಂಕರ್ ಬದಲಿಗೆ ಟಿಕೆಟ್ ಗಿಟ್ಟಿಸುವಲ್ಲಿ ಯಶಸ್ವಿಯಾಗಿದ್ದ ಪ್ರತಾಪ್ ಮುಂದೆ ವಿಶ್ವನಾಥ್ ಅವರ ಪ್ರತಾಪ ನಡೆಯಲಿಲ್ಲ.
ಎಲ್ಲಕ್ಕಿಂತ ಹೆಚ್ಚಾಗಿ ಸ್ವತಃ ನರೇಂದ್ರ ಮೋದಿ ಅವರೇ ಮೈಸೂರಿಗೆ ಆಗಮಿಸಿ ಪ್ರತಾಪ್ ಸಿಂಹ ಅವರಿಗೆ ಬೆನ್ನುತಟ್ಟಿ, ಅವರನ್ನು ಗೆಲ್ಲಿಸಿಕೊಡಬೇಕು ಎಂದು ಮೈಸೂರಿನಲ್ಲಿ ನಡೆದ ಬಹಿರಂಗ ಸಭೆ ಮತದಾರರನ್ನು ಕೋರಿದ್ದರು. ಮೋದಿ ಅಲೆಯಲ್ಲಿ ಮತದಾರರು ಕೊಚ್ಚಿಹೋಗಿರುವುದಂತೂ ಖಂಡಿತ. ಅಂದ ಹಾಗೆ, ಇಡೀ ಕರ್ನಾಟಕದಲ್ಲಿ ಶೇ.57ರಷ್ಟು ಜನರು ಮೋದಿಗಾಗಿ ಮತ ಮಾಡಿದ್ದಾರೆ.

| ಮೈಸೂರು-ಕೊಡಗು | ಪಡೆದ ಸ್ಥಾನ | ಪಕ್ಷ | ಪಡೆದ ಮತಗಳು |
| ಪ್ರತಾಪ್ ಸಿಂಹ | 1 | ಬಿಜೆಪಿ | 503,908 |
| ಅಡಗೂರು ವಿಶ್ವನಾಥ್ | 2 | ಕಾಂಗ್ರೆಸ್ | 472,300 |
| ಚಂದ್ರಶೇಖರಯ್ಯ | 3 | ಜೆಡಿಎಸ್ | 138,587 |
| ಸಿ ಮೋಹನ್ ಕುಮಾರ್ | 4 | ಬಹುಜನ ಸಮಾಜ ಪಕ್ಷ | 13,637 |
-
March 20 Horoscope: ಆರೋಗ್ಯ ಮತ್ತು ಹಣಕಾಸು ವಿಷಯದಲ್ಲಿ ಈ ರಾಶಿಗೆ ಲಾಭ -
Karnataka Rain: ಬೆಂಗಳೂರು ಸೇರಿ 18 ಜಿಲ್ಲೆಗಳಲ್ಲಿ ನಾಳೆವರೆಗೆ ಗುಡುಗು ಸಹಿತ ಮಳೆ ಸಾಧ್ಯತೆ -
40,000 ಹೋಟೆಲ್ ಮಾಲೀಕರಿಗೆ ಭರ್ಜರಿ ಸುದ್ದಿ, ಎಲ್ಪಿಜಿ ಸಿಲಿಂಡರ್ ನಿಯಮ ಬದಲಾವಣೆ... LPG Cylinder Supply -
ಕೇವಲ 2 ನಿಮಿಷದಲ್ಲಿ ಉದ್ಯೋಗ ಅರ್ಜಿ ರಿಜೆಕ್ಟ್: 'ಎಐ' ನೇಮಕಾತಿ ಬಗ್ಗೆ ಭಾರತೀಯ ಮೂಲದ ವಿದ್ಯಾರ್ಥಿನಿ ಬೇಸರ -
Gold Rate Today: ಬೆಂಗಳೂರಿನಲ್ಲಿ ಚಿನ್ನದ ದರ ಮತ್ತೆ ಏರಿಕೆ: 15,000 ರೂಪಾಯಿ ಗಡಿ ದಾಟಿದ 24 ಕ್ಯಾರೆಟ್ ಚಿನ್ನ -
Summer Camp: ಶೃಂಗೇರಿ ಶಾರದಾ ಪೀಠದಿಂದ ವಟುಗಳಿಗಾಗಿ 15 ದಿನಗಳ ಉಚಿತ 'ಸಂಸ್ಕಾರ' ಬೇಸಿಗೆ ಶಿಬಿರ -
Rishab Shetty: ಅಧ್ಯಾಯ ಎರಡು ಇಲ್ಲಿಂದ ಶುರು; ಸ್ಯಾಂಡಲ್ವುಡ್ನಲ್ಲಿ ಸಂಚಲನ ಮೂಡಿಸಿದ ರಿಷಬ್ ಶೆಟ್ಟಿ ಪೋಸ್ಟ್ -
ಹೊಸತೊಡಕು: ಮಧ್ಯರಾತ್ರಿಯಿಂದಲೇ ಮಾಂಸ ಖರೀದಿ ಭರಾಟೆ, ಎಷ್ಟಿದೆ ಇಂದಿನ ಚಿಕನ್-ಮಟನ್ ದರ? -
World Happiness Report 2026: ಫಿನ್ಲೆಂಡ್ ಜಗತ್ತಿನ ಅತ್ಯಂತ ಸಂತೋಷದಾಯಕ ದೇಶ: ನಮ್ಮ ಭಾರತಕ್ಕೆ ಸಿಕ್ಕ ಸ್ಥಾನವೆಷ್ಟು? -
ಈ ಸಂವತ್ಸರಕ್ಕೇಕೆ ಈ ಹೆಸರು? ‘ಪರಾಭವ’ ಅಂದ್ರೆ ‘ಸೋಲು’ ಎಂಬ ಅರ್ಥವಲ್ಲವೇ? -
Rashmika Mandanna: ಮನೆಮಗಳಾಗಿ ಇಲ್ಲಿಗೆ ಬಂದೆ, ಈಗ ಸೊಸೆಯಾಗಿ ನಿಂತಿದ್ದೇನೆ: ರಶ್ಮಿಕಾ ಮಂದಣ್ಣ ಭಾವುಕ -
ಕೇಂದ್ರೀಯ ವಿದ್ಯಾಲಯ 1ನೇ ತರಗತಿ ಪ್ರವೇಶಾತಿ 2026: ಇಂದಿನಿಂದಲೇ ಅರ್ಜಿ ಸಲ್ಲಿಕೆ ಶುರು, ಪೋಷಕರೇ ಈಗಲೇ ಗಮನಿಸಿ












Click it and Unblock the Notifications