ಕರ್ನಾಟಕ-ಮಹಾರಾಷ್ಟ್ರ ಗಡಿ ವಿಚಾರದ ತೀರ್ಪಿನ ನಂತರ ಚರ್ಚೆ: ಸಿಎಂ
ಮೈಸೂರು, ನ.28: ಕರ್ನಾಟಕ ಮಹಾರಾಷ್ಟ್ರ ಗಡಿ ವಿಚಾರದ ತೀರ್ಪು ನವೆಂಬರ್ 30 ರಂದು ಬರುತ್ತದೆ. ಆ ತೀರ್ಪಿನ ಸಾಧಕ ಬಾಧಕಗಳ ಬಗ್ಗೆ ಪೂರ್ವ ಚರ್ಚೆಯನ್ನು ನಡೆಸುತ್ತೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಸೋಮವಾರ ಸಂಜೆ ದೆಹಲಿಗೆ ತೆರಳುತ್ತಿದ್ದು, ಈ ವೇಳೆ ಗಡಿ ವಿವಾದದ ಬ್ಗಗೆ ಚರ್ಚೆ ನಡೆಸುತ್ತೇವೆ. ಅದರ ಜೊತೆಗೆ ಬೇರೆ ಬೇರೆ ವಿಚಾರಗಳು ಚರ್ಚೆಯಾಗುತ್ತವೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
ಮೈಸೂರು ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇಂದು ಸಂಜೆ ದೆಹಲಿ ಹೋಗುತ್ತಿದ್ದೇನೆ. ಗಡಿವಿಚಾರದ ಬಗ್ಗೆ ಚರ್ಚೆ ಹಾಗೂ ಕೇಂದ್ರ ಕೈಗಾರಿಕಾ ಸಚಿವರು, ಜಲಸಂಪನ್ಮೂಲ ಸಚಿವರನ್ನೂ ಸಹ ಭೇಟಿಯಾಗುವ ಉದ್ದೇಶವಿದ್ದು, ರಾಜ್ಯದ ಅಭಿವೃದ್ಧಿ ಯೋಜನೆಗಳ ಬಗ್ಗೆ ಚರ್ಚಿಸಲಾಗುವುದು ಎಂದಿದ್ದಾರೆ.

ಒಕ್ಕಲಿಗರ ಮೀಸಲಾತಿ ವಿಚಾರ ಬಗ್ಗೆ ಮಾತನಾಡಿದ ಅವರು, ಡೆಡ್ ಲೈನ್ ನೀಡಿರುವುದು ನನ್ನ ಗಮನಕ್ಕೆ ಬಂದಿಲ್ಲ. ಅವರ ಪತ್ರ ನನ್ನ ಕೈ ಸೇರಲಿ. ಮುಂದೆ ಏನೂ ಮಾಡಬೇಕೆಂದು ನಿರ್ಧಾರ ಮಾಡುತ್ತೇನೆ. ನನಗೆ ರಾಜಕೀಯ ಒತ್ತಡ ಇರುವುದು ಸತ್ಯ. ನಾನು ಎಲ್ಲಾ ಪಕ್ಷಗಳ ಹಿತ ಕಾಯಬೇಕಿದೆ. ಆ ಕಾರಣಕ್ಕೆ ನಾನು ಎಲ್ಲಾ ರೀತಿಯ ಆಲೋಚನೆ ಮಾಡಬೇಕಾಗುತ್ತದೆ ಎಂದು ಹೇಳಿದ್ದಾರೆ.
ಏಕರೂಪ ನಾಗರಿಕ ಸಂಹಿತೆ ಜಾರಿ ಬಗ್ಗೆ ಕೇಂದ್ರದಿಂದ ಯಾರೂ ನನ್ನೊಂದಿಗೆ ಸಮಾಲೋಚನೆ ಮಾಡಿಲ್ಲ. ಏಕರೂಪ ನಾಗರಿಕ ಸಂಹಿತೆ ಜಾರಿ ಮಾಡಬೇಕೆಂದು ನಮ್ಮ ಪಕ್ಷದ 30 ವರ್ಷಗಳ ನಿಲುವು. ಈ ಬಗ್ಗೆ ನಾನು ಸಹ ಎಲ್ಲಾ ರೀತಿಯ ಮಾಹಿತಿ ಕಲೆ ಹಾಕುತ್ತಿದ್ದೇನೆ. ಈ ಬಗ್ಗೆ ಮುಂದಿನ ದಿನಗಳಲ್ಲಿ ಸೂಕ್ತ ನಿರ್ಧಾರ ತೆಗೆದುಕೊಳ್ಳುತ್ತೇನೆ ಎಂದಿದ್ದಾರೆ.

ಇದೇ ವೇಳೆ ವೆಬ್ಸೈಟ್ ಮೂಲಕ ನಕಲಿ ಆಧಾರ್ ಕಾರ್ಡ್, ವೋಟರ್ ಐಡಿ ಪಡೆಯುತ್ತಿರುವ ಸಾಕಷ್ಟು ವೆಬ್ಸೈಟ್ ಬಗ್ಗೆ ಮಾಹಿತಿ ಬಂದಿದೆ. ಅವುಗಳ ಸಂಪೂರ್ಣ ಮಾಹಿತಿ ಕಲೆ ಹಾಕಲಾಗುತ್ತಿದೆ. ಈಗ ಮತದಾರ ಪಟ್ಟಿ ಪರಿಷ್ಕರಣೆ ತನಿಖೆ ಕೂಡ ನಡೆಯುತ್ತಿದೆ. ಅದರ ಜೊತೆಯಲ್ಲಿ ಎಲ್ಲವನ್ನೂ ಪರಿಶೀಲನೆ ಮಾಡಲಾಗುವುದು ಎಂದು ಮಾಹಿತಿ ನೀಡಿದ್ದಾರೆ.
-
ಮಂಗಳೂರಿಗೆ ಬರಲಿದೆ 26,000 ಟನ್ LPG ತೈಲ ಹೊತ್ತ 'ಶಿವಾಲಿಕ್' ಹಡಗು -
ವಲಸೆ ಕಾರ್ಮಿಕರಿಂದಾಗಿ ಉದ್ಯೋಗ ನಷ್ಟವಾಗುತ್ತಿರುವ ಬಗ್ಗೆ ಅಧಿಕೃತ ದೂರು ಸಲ್ಲಿಕೆಯಾಗಿಲ್ಲ: ಕಾರ್ಮಿಕ ಇಲಾಖೆ ಸ್ಪಷ್ಟನೆ -
Puneeth Rajkumar Birthday: ಇಂದು ನಟ ಪುನೀತ್ ರಾಜ್ಕುಮಾರ್ ಹುಟ್ಟುಹಬ್ಬ; ಅಭಿಮಾನಿಗಳಿಂದ ವಿಶೇಷ ನಮನ, ಶುಭಾಶಯಗಳ ಮಹಾಪೂರ -
Karnataka Weather: ಕರ್ನಾಟಕದ ಈ 9 ಜಿಲ್ಲೆಗಳಲ್ಲಿ ಮಾರ್ಚ್ 21ರವರೆಗೆ ಮಳೆ ಸಾಧ್ಯತೆ: ಹವಾಮಾನ ಇಲಾಖೆ -
SSLC ಪರೀಕ್ಷೆ 2026: ವೇಳಾಪಟ್ಟಿ, ಸಮಯ, ಡ್ರೆಸ್ಕೋಡ್ ಹಾಗೂ ಪ್ರಮುಖ ಮಾರ್ಗಸೂಚಿಗಳ ಮಾಹಿತಿ ಇಲ್ಲಿದೆ -
Horoscope March 16; ಈ ರಾಶಿಯವರಿಗೆ ಶುಭ ಸುದ್ದಿ ಬರಬಹುದು -
Bengaluru Rent: ಬೆಂಗಳೂರು ಬಾಡಿಗೆ ಮನೆ ಸಮಸ್ಯೆ: 10 ತಿಂಗಳ ಮುಂಗಡ ಹಣ,ಮಾಲೀಕರ ಕಿರಿಕಿರಿ; 2026ರ ಹೊಸ ಬಾಡಿಗೆ ನಿಯಮವೇನು -
ಪಿಯು ಮೌಲ್ಯಮಾಪನ ಬಹಿಷ್ಕಾರಕ್ಕೆ ಮುಂದಾದ ಉಪನ್ಯಾಸಕರು: ಫಲಿತಾಂಶ ವಿಳಂಬದ ಆತಂಕದಲ್ಲಿ ದ್ವಿತೀಯ ಪಿಯು ವಿದ್ಯಾರ್ಥಿಗಳು -
Anil Kumble: ನಟ ಶಾರುಖ್ ಖಾನ್ ಮಾಲೀಕತ್ವದ ಕೆಕೆಆರ್ ತಂಡ ದಾರಿತಪ್ಪಿದ ಬಗ್ಗೆ ಅನಿಲ್ ಕುಂಬ್ಳೆ ಮಹತ್ವದ ಮಾಹಿತಿ -
ಹೆಣ್ಣುಬಾಕ ಕಾಮಪೀಠಿ ವೈರಮುತ್ತು ರಾಮಸ್ವಾಮಿ ಜ್ಞಾನಪೀಠಕ್ಕೆ ಕಳಂಕ: ಲೇಖಕ ಅರುಣ್ ಜೋಳದಕೂಡ್ಲಿಗಿ -
Piped Gas: ಬೆಂಗಳೂರಿಗರಿಗೆ ತಲುಪದ ಪೈಪ್ಡ್ ಗ್ಯಾಸ್: ಮಹತ್ವಾಕಾಂಕ್ಷಿ ಯೋಜನೆಗೆ ವಿಘ್ನಗಳ ಸರಮಾಲೆ -
Gold Rate Today: ಬಂಗಾರ ಪ್ರಿಯರಿಗೆ ಸಿಹಿಸುದ್ದಿ: ಇಂದೂ ಇಳಿಕೆ ಕಂಡ ಚಿನ್ನದ ಬೆಲೆ, ಬೆಂಗಳೂರಿನಲ್ಲಿ ದರಗಳು ಹೀಗಿವೆ












Click it and Unblock the Notifications