ಮೈಸೂರು: ದಲಿತನಿಂದ ಚರಂಡಿ ಸ್ವಚ್ಛತೆ, ಭುಗಿಲೆದ್ದ ಜನರ ಕೋಪ
ಮೈಸೂರು,ಮಾರ್ಚ್,22: ಯಂತ್ರಗಳನ್ನು ಬಳಸದೆ, ಕೈಚೀಲಗಳನ್ನು ನೀಡದೆ ಬರಿಗೈಲಿ ದಲಿತ ವ್ಯಕ್ತಿಯಿಂದ ಚರಂಡಿ ಸ್ವಚ್ಛತಾ ಕಾರ್ಯ ಮಾಡಿಸಿರುವುದು ದಲಿತರ ಆಕ್ರೋಶಕ್ಕೆ ಕಾರಣವಾಗಿದ್ದು, ಸಿದ್ದಾಪುರ ಗ್ರಾಮ ಪಂಚಾಯಿತಿ ವಿರುದ್ಧ ಕರ್ನಾಟಕ ರಾಜ್ಯ ದಲಿತ ಹಿತರಕ್ಷಣಾ ಸಮಿತಿ ಪ್ರತಿಭಟನೆ ಕೈಗೊಂಡಿದ್ದಾರೆ.
ಕಂಚುಗಾರಕೊಪ್ಪಲು ಗ್ರಾಮದ ದಲಿತ ಸಮುದಾಯಕ್ಕೆ ಸೇರಿದ ತಿಮ್ಮಯ್ಯ ಅವರಿಂದ ಚರಂಡಿ, ಇನ್ನಿತರೆ ತ್ಯಾಜ್ಯ ವಸ್ತುಗಳನ್ನು ಬರಿಗೈನಲ್ಲಿ ತೆಗೆಸಿರುವುದು ಜನರ ಆಕ್ರೋಶಕ್ಕೆ ಕಾರಣವಾಗಿದೆ. ಕೆ.ಆರ್.ನಗರ ತಾಲೂಕಿನ ಸಿದ್ದಾಪುರ ಗ್ರಾಮ ಪಂಚಾಯಿತಿಯಲ್ಲಿ ಈ ಘಟನೆ ನಡೆದಿದೆ.[ದೇವೇಗೌಡರ ಹುಟ್ಟೂರು ಪಕ್ಕದಲ್ಲೇ ದಲಿತರಿಗೆ ಅಪಮಾನ!]

ಕಳೆದ ಏಳೆಂಟು ತಿಂಗಳ ಹಿಂದೆ ತಾಲೂಕಿನ ಚಂದಗಾಲು ಪಂಚಾಯಿತಿಯಲ್ಲಿ ಪಿಡಿಒ ಅವರು ಪಂಚಾಯಿತಿ ಶೌಚಾಲಯದಲ್ಲಿ ಮಲ ತೆಗೆಸುತ್ತಿದ್ದರೆಂಬ ವಿಷಯ ದೊಡ್ಡ ಸುದ್ದಿಯಾಗಿತ್ತು.
ಅದು ಜನರ ಮನಪಟಲದಿಂದ ಮರೆ ಮಾಚುವ ಸಿದ್ದಾಪುರ ಗ್ರಾ.ಪಂ. ವ್ಯಾಪ್ತಿಗೆ ಬರುವ ಚರಂಡಿಗಳನ್ನು ಬರಿಗೈಲಿ ಸ್ವಚ್ಛಗೊಳಿಸುವ ಕಾರ್ಯವನ್ನು ನಡೆಸುವುದು ಎಷ್ಟು ಸರಿ ಎಂಬುದು ಸಂಘಟನೆ ಕಾರ್ಯಕರ್ತರ ಪ್ರಶ್ನೆಯಾಗಿದೆ.[ಸದ್ಯದಲ್ಲೇ ಖಾಸಗಿ ಕಂಪೆನಿಗಳಲ್ಲೂ ರಿಸರ್ವೇಷನ್ ಕೋಟಾ?]

ತಿಮ್ಮಯ್ಯ ಅವರು ಪಂಚಾಯಿತಿ ನೌಕರನಲ್ಲ, ದಿನಗೂಲಿ ನೌಕರನೂ ಅಲ್ಲ. ಹೀಗಿರುವಾಗ ಗ್ರಾಪಂ ಪಿಡಿಒ ಅವರು ದಲಿತ ಸಮುದಾಯದ ವ್ಯಕ್ತಿಯಿಂದ ಬರಿ ಕೈಯಲ್ಲಿ ಈ ರೀತಿಯ ಕೆಲಸ ಮಾಡುವ ಔಚಿತ್ಯವೇನು? ಎಂದು ಪ್ರಶ್ನಿಸಿದ್ದಾರೆ. ಈ ಸಂಬಂಧ ಕ್ರಮಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.[ಬೈಲುಕುಪ್ಪೆ ಸಮೀಪದ ಕೊಪ್ಪದಲ್ಲಿ ಸ್ವಚ್ಛತೆಗಿಲ್ಲ ಕಿಮ್ಮತ್ತು]
ಈ ಸಂಬಂಧ ಜಿಲ್ಲಾ ಪಂಚಾಯಿತಿ ಮತ್ತು ತಾಲೂಕು ಪಂಚಾಯಿತಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಪರಿಶೀಲಿಸಿ ಸಂಬಂಧಪಟ್ಟ ಪಿಡಿಒ ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ.
-
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ












Click it and Unblock the Notifications