ಚುನಾವಣೆ ಪೂರ್ವದಲ್ಲಿ ಪಾದಯಾತ್ರೆ, ಅಧಿಕಾರಕ್ಕೆ ಬಂದ ಮೇಲೆ ಕಥೆಯೇನು?: ಸಿಎಂಗೆ ರೈತರ ಪ್ರಶ್ನೆ
ಮೈಸೂರು, ಅಕ್ಟೋಬರ್ 22: ಮೇಕೆದಾಟು ಯೋಜನೆ ಜಾರಿಗೆ ಒತ್ತಾಯಿಸಿ ಕರ್ನಾಟಕ ರಾಜ್ಯ ಕಬ್ಬು ಬೆಳೆಗಾರ ಸಂಘದ ಪದಾಧಿಕಾರಿಗಳು ಇಂದು (ಅಕ್ಟೋಬರ್ 22) ಮಂಗಳವಾರ ಮೈಸೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ್ದಾರೆ. ಕರ್ನಾಟಕದಲ್ಲಿ ಚುನಾವಣೆ ಪೂರ್ವದಲ್ಲಿ ಕಾಂಗ್ರೆಸ್ ನಡೆಸಿದ ಮೇಕೆದಾಟು ಪಾದಯಾತ್ರೆಯ ಬಗ್ಗೆ ರೈತರು ಪ್ರಶ್ನಿಸಿದ್ದಾರೆ.
ತಾವು ಪಾದಯಾತ್ರೆ ಮಾಡಿ ಮೇಕೆದಾಟು ಯೋಜನೆ ಪ್ರಾರಂಭಕ್ಕೆ ಸಾಕಷ್ಟು ಒತ್ತಡವನ್ನು ಹಾಕಿದ್ದೀರಾ. ಆದರೆ ಅಧಿಕಾರಕ್ಕೆ ಬಂದು ಒಂದು ವರ್ಷ ಕಳೆಯಿತು. ಮೇಕೆದಾಟು ಯೋಜನೆ ಪ್ರಾರಂಭ ತಾಂತ್ರಿಕ ಸಮಸ್ಯೆ ಎಂಬಂತೆ ಉಳಿದಿದೆ ಎಂದು ಕರ್ನಾಟಕ ರಾಜ್ಯ ಕಬ್ಬು ಬೆಳೆಗಾರ ಸಂಘದ ರಾಜ್ಯ ಅಧ್ಯಕ್ಷ ಹಳ್ಳಿಕೆರೆಹುಂಡಿ ಭಾಗ್ಯರಾಜ್ ನೇತೃತ್ವದಲ್ಲಿ ರೈತರು ಹಕ್ಕು ಒತ್ತಾಯ ಪತ್ರವನ್ನು ಮುಖ್ಯಮಂತ್ರಿಗಳಿಗೆ ಸಲ್ಲಿಸಿದ್ದಾರೆ.

ರಾಜ್ಯದ ಎಲ್ಲಾ ಸಂಸತ್ ಸದಸ್ಯರನ್ನು ಒಟ್ಟುಗೂಡಿಸಿ. ಮೈಸೂರು ಬೆಂಗಳೂರು ಗ್ರಾಮಾಂತರ ಜಿಲ್ಲೆಗಳ ಕುಡಿಯುವ ನೀರು ಕೆರೆ ತುಂಬಿಸುವುದು. ಅಂತರ್ಜಲ ವೃದ್ಧಿಗಾಗಿ ಬರಗಾಲ ಸಂದರ್ಭದಲ್ಲಿ ರಾಜ್ಯದ ರೈತರ ಹಿತ ದೃಷ್ಟಿಯಿಂದ ಮೇಕೆದಾಟು ಯೋಜನೆ ಪ್ರಾರಂಭವಾಗುವುದು ಅತ್ಯವಶ್ಯಕವಾಗಿರುತ್ತದೆ ಎಂದು ರೈತರು ಆಗ್ರಹಿಸಿದ್ದಾರೆ.
ಹೀಗಾಗಿ ರಾಜ್ಯದ ಜನರ ಹಿತಾಸಕ್ತಿಯಂತೆ ಮೇಕೆದಾಟು ಜಲಾಶಯ ಯೋಜನೆಯ ಮೂಲ ಸ್ಥಳದಲ್ಲಿ ಕಾಮಗಾರಿಯನ್ನು ಪ್ರಾರಂಭ ಮಾಡಲು ಕ್ರಮ ಕೈಗೊಳ್ಳಬೇಕು. ಕೇಂದ್ರ ಸರ್ಕಾರದಿಂದ ಮತ್ತು ಪರಿಸರ ಇಲಾಖೆಯಿಂದ ಬೇಕಾದಂತಹ ಸಹಕಾರವನ್ನು ಪಡೆಯಲು ರಾಜ್ಯದ ರೈತ ಸಂಘಟನೆಗಳ ಒಕ್ಕೂಟದ ಮೂಲಕ ನಿಯೋಗವನ್ನು ಕರೆದುಕೊಂಡು ಹೋಗಿ ಕೇಂದ್ರ ಸರ್ಕಾರದ ಮನವರಿಕೆ ಮಾಡಬೇಕು ಎಂದು ರೈತರು ರಾಜ್ಯ ಸರ್ಕಾರಕ್ಕೆ ಒತ್ತಾಯಿಸಿದ್ದಾರೆ.
ರಾಜ್ಯದಲ್ಲಿ ಮೇಕೆದಾಟು ಯೋಜನೆಗೆ ಕ್ರಮ ಕೈಗೊಳ್ಳಲು ಹಕ್ಕು ಒತ್ತಾಯ ಪತ್ರವನ್ನು ಇಂದು ರೈತರ ನಿಯೋಗ ಮುಖ್ಯಮಂತ್ರಿಗಳಿಗೆ ಸಲ್ಲಿಸಿದೆ. ಇಂದಿನ ನಿಯೋಗದಲ್ಲಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮಲೆಯೂರು ಹರ್ಷ ಚಾಮರಾಜನಗರ ಜಿಲ್ಲಾಧ್ಯಕ್ಷ ಹಾಲಿನ ನಾಗರಾಜ್, ಗೌರವಾಧ್ಯಕ್ಷರಾದ ಶಿವರುದ್ರಪ್ಪ, ಮೈಸೂರು ಜಿಲ್ಲಾ ಖಜಾಂಚಿ ಹೊಸಪುರ ಮಾದಪ್ಪ, ಜಿಲ್ಲಾ ಉಪಾಧ್ಯಕ್ಷ ಮಲೆಯೂರು ಪ್ರವೀಣ್, ತಾಲೂಕು ಅಧ್ಯಕ್ಷ ಅಂಬಳೆ ಮಹದೇವಸ್ವಾಮಿ, ಚಾಮರಾಜನಗರ ತಾಲೂಕು ಅಧ್ಯಕ್ಷ ಅರಳಿಕಟ್ಟೆ ಕುಮಾರ್, ತಾಲೂಕು ಪ್ರಧಾನ ಕಾರ್ಯದರ್ಶಿ ವಳಗೆರೆ ಗಣೇಶ್ ಹಾಜರಿದ್ದರು.
-
ಕೃಷ್ಣಾ ಮೇಲ್ದಂಡೆ ಯೋಜನೆಗೆ 5,000 ಕೋಟಿ ರೂ. ಘೋಷಿಸಿದ ಸಿಎಂ ಸಿದ್ಧರಾಮಯ್ಯ -
ಹೊಸೂರು ವಿಮಾನ ನಿಲ್ದಾಣ: ಬೆಂಗಳೂರು ಸಮೀಪ 2,979 ಎಕರೆ ಭೂಮಿ ಸ್ವಾಧೀನ; ಕನ್ನಡದಲ್ಲೇ ಮಾತನಾಡಿದ ತಮಿಳುನಾಡು ಶಾಸಕ -
ಇರಾನ್ ಪರಮಾಣು ವಿಜ್ಞಾನಿ ಕಥೆ ಮುಗಿಸಿದ ಇಸ್ರೇಲ್, ಮತ್ತಷ್ಟು ತಿಕ್ಕಾಟ ಶುರು | Operation Roaring Lion -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Weekly Horoscope March 16-22: ಈ ಯುಗಾದಿಗೆ ಯಾವ ರಾಶಿಯವರಿಗೆ ಅದೃಷ್ಟದ ಬಾಗಿಲು ತೆರೆಯಲಿದೆ? ಇಲ್ಲಿದೆ ಈ ವಾರದ ನಿಮ್ಮ ರಾಶಿ ಫಲ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
PUC ವಿದ್ಯಾರ್ಥಿಗಳ ಗಮನಕ್ಕೆ: ದ್ವಿತೀಯ ಪಿಯುಸಿ ಫಲಿತಾಂಶ ಸುಧಾರಣೆಗೆ ಇನ್ಮುಂದೆ 2 ವರ್ಷ ಮಾತ್ರ ಅವಕಾಶ -
National Highway: ಕರ್ನಾಟಕದ ನಾಲ್ಕು ಪ್ರಮುಖ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಬಗ್ಗೆ ಮಹತ್ವದ ಮಾಹಿತಿ ಹಂಚಿಕೊಂಡ ನಿತಿನ್ ಗಡ್ಕರಿ












Click it and Unblock the Notifications