ಕೆಂಪಯ್ಯ ವಿರುದ್ಧ ಈಗ ಸುಳ್ಳು ಜಾತಿ ಪ್ರಮಾಣ ಪತ್ರ ಆರೋಪ
ಮೈಸೂರು, ಮೇ 06 : ಗೃಹ ಸಚಿವರ ಸಲಗೆಹಾರ ಕೆಂಪಯ್ಯ ಮತ್ತೆ ಸುದ್ದಿ ಮಾಡಿದ್ದಾರೆ. ಸರ್ಕಾರಿ ನೌಕರಿ ಪಡೆಯಲು ಸುಳ್ಳು ಜಾತಿ ಪ್ರಮಾಣ ಪತ್ರವನ್ನು ಅವರು ಸಲ್ಲಿಸಿದ್ದಾರೆ ಎಂದು ಕಾಂಗ್ರೆಸ್ ಮುಖಂಡರು ಆರೋಪ ಮಾಡಿದ್ದು, ಕುತೂಹಲಕ್ಕೆ ಕಾರಣವಾಗಿದೆ.
ಮೈಸೂರಿನಲ್ಲಿ ಶುಕ್ರವಾರ ಪತ್ರಿಕಾಗೋಷ್ಠಿ ನಡೆಸಿದ ಪಕ್ಷದ ಪರಿಶಿಷ್ಟ ಪಂಗಡ ವಿಭಾಗದ ಮಾಜಿ ಉಪಾಧ್ಯಕ್ಷ ಎಸ್.ಎಚ್.ಸುಭಾಷ್ ಅವರು, ಕೆಂಪಯ್ಯ ವಿರುದ್ಧ ಆರೋಪಗಳನ್ನು ಮಾಡಿದರು. 'ಸುಳ್ಳು ಜಾತಿ ಪ್ರಮಾಣ ಪತ್ರ ನೀಡಿ ಅವರು ಸರ್ಕಾರಿ ನೌಕರಿಗೆ ಸೇರಿದ್ದರು' ಎಂದು ದೂರಿದರು. [ಐಟಿ ಅಧಿಕಾರಿಗಳಿಂದ ಕೆಂಪಯ್ಯ ವಿಚಾರಣೆ]

'ಕೆಂಪಯ್ಯ ಅವರು ಕುರುಬ ಜಾತಿಗೆ ಸೇರಿದವರು. ಆದರೆ, ಅವರು ಸರ್ಕಾರಿ ಕೆಲಸಕ್ಕೆ ಸೇರುವಾಗ ಜೇನು ಕುರುಬ ಎಂದು ಪ್ರಮಾಣ ಪತ್ರ ಮಾಡಿಸಿಕೊಂಡು ಪರಿಶಿಷ್ಟ ಪಂಗಡದ ಮೀಸಲಾತಿ ಅಡಿ ಕೆಲಸ ಪಡೆದಿದ್ದಾರೆ. ಕೆಂಪಯ್ಯ ಅವರ ವಿರುದ್ಧ ಕಾನೂನು ಹೋರಾಟ ನಡೆಸುತ್ತೇನೆ' ಎಂದು ಹೇಳಿದರು. [ಬೆಂಗಳೂರಿಗರು ಜಾತ್ಯತೀತರಾಗುವುದು ಇನ್ನೂ ಬಹುದೂರ!]
'ಹಿಂದೆ ರಾಜ್ಯ ಪೊಲೀಸ್ ಮಹಾನಿರ್ದೇಶಕರಾಗಿದ್ದ ಸಿ.ದಿನಕರ್ ಅವರು ಕೆಂಪಯ್ಯ ಅವರ ಸುಳ್ಳು ಜಾತಿ ಪ್ರಮಾಣ ಪತ್ರದ ಬಗ್ಗೆ 2008ರಲ್ಲಿ ಸಮಾಜ ಕಲ್ಯಾಣ ಇಲಾಖೆಯ ನಿರ್ದೇಶಕರಿಗೆ ವರದಿ ನೀಡಿದ್ದರು. ಆದರೆ, ಆ ವರದಿ ಬಗ್ಗೆ ಯಾವ ಕ್ರಮಗಳನ್ನು ಕೈಗೊಂಡಿಲ್ಲ' ಎಂದು ಸುಭಾಷ್ ತಿಳಿಸಿದರು. [ಕರ್ನಾಟಕ ಜಾತಿಗಣತಿ ವರದಿ: ಮುಸ್ಲಿಮರು ನಂ. 2?]
ಎಸಿಬಿಗೂ ದೂರು : ಕೆಂಪಯ್ಯ ಅವರು ಸುಳ್ಳು ಜಾತಿ ಪ್ರಮಾಣ ಪತ್ರ ಸಲ್ಲಿಸಿದ್ದಾರೆ ಎಂದು ಭ್ರಷ್ಟಾಚಾರ ನಿಗ್ರಹದಳಕ್ಕೂ ದೂರು ಸಲ್ಲಿಸಲಾಗಿದೆ. ದಿನೇಶ್ ಕಲ್ಲಹಳ್ಳಿ ಅವರು ಈ ಕುರಿತು ಕಳೆದ ವಾರ ದೂರು ನೀಡಿದ್ದಾರೆ. ಕೆಂಪಯ್ಯ ಅವರು ಕುರುಬ ಸಮುದಾಯಕ್ಕೆ ಸೇರಿದವರು. ಆದರೆ, ತಮ್ಮದು ಕಾಡು ಕುರುಬ ಎಂದು ಸುಳ್ಳು ದಾಖಲೆ ನೀಡಿ ನೌಕರಿ ಪಡೆದಿದ್ದರು ಎಂದು ದೂರಿನಲ್ಲಿ ತಿಳಿಸಿದ್ದಾರೆ.
ಕನಕಪುರ ಪ್ರೌಢಶಾಲೆಯ ದಾಖಲೆ ಪುಸ್ತಕದಲ್ಲಿ ಕೆಂಪಯ್ಯ ಅವರು 1965-66ರಲ್ಲಿ ಕುರುಬ ಜಾತಿ ಎಂದು ನಮೂದಿಸಿದ್ದರು. ನಂತರ ಕಾಡು ಕುರುಬ ಜಾತಿ ಎಂದು ಹೇಳಿಕೊಂಡರು ಎಂದು ದಿನೇಶ್ ಕಲ್ಲಹಳ್ಳಿ ಆರೋಪಿಸಿದ್ದಾರೆ. ಈಗ ಸುಭಾಷ್ ಅವರು ಕೆಂಪಯ್ಯ ಅವರ ವಿರುದ್ಧ ಕಾನೂನು ಹೋರಾಟ ಮಾಡುವುದಾಗಿ ಹೇಳಿದ್ದಾರೆ.
-
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
Mysuru-Nanjangud special train: ನಂಜನಗೂಡು ದೊಡ್ಡ ಜಾತ್ರೆಗೆ ಮೈಸೂರಿನಿಂದ ವಿಶೇಷ ರೈಲು ಸೇವೆ: ಸಚಿವ ವಿ.ಸೋಮಣ್ಣ ಮಾಹಿತಿ -
ಹಿಂದುಳಿದ, ದುರ್ಬಲ ವರ್ಗದ ಮಕ್ಕಳಿಗೆ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶೇ. 25 ರಷ್ಟು ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ -
ಮಾರ್ಚ್ 23ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Bengaluru: 50 ವಾರ್ಡ್ಗಳಲ್ಲಿ ಕಸ ವಿಲೇವಾರಿ ಸ್ಥಗಿತ; ವೇತನ ವಿಳಂಬಕ್ಕೆ ಮುನಿದು ಸಾಮೂಹಿಕ ರಜೆ ಹಾಕಿದ ಕಾರ್ಮಿಕರು -
ಮಾರ್ಚ್ 24ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
Train Delay: ರೈಲು ಪ್ರಯಾಣಿಕರೇ ಎಚ್ಚರ! ನಾಳೆ ಬೆಂಗಳೂರು-ಚೆನ್ನೈ ನಡುವಿನ ಸಂಚಾರದಲ್ಲಿ ಭಾರಿ ವ್ಯತ್ಯಯ -
Bengaluru: ಬಿಡಿಎಗೆ 50ರ ಸಂಭ್ರಮ; ಹೊಸ ಲೋಗೋ, ಟ್ಯಾಗ್ಲೈನ್ ವಿನ್ಯಾಸ ಮಾಡಿ 1 ಲಕ್ಷ ರೂ. ಬಹುಮಾನ ಗೆಲ್ಲಿ -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
LPG: ಗೃಹಬಳಕೆ ಸಿಲಿಂಡರ್ ಬಳಕೆದಾರರಿಗೆ ಬಿಗ್ ಅಪ್ಡೇಟ್: ಎಲ್ಪಿಜಿ ಅಭಾವ ನೀಗಿಸಲು ಕೇಂದ್ರದಿಂದ ಹೊಸ ಪ್ಲಾನ್ -
Rain: ಮುಂದಿನ 3 ಗಂಟೆಗಳಲ್ಲಿ ಕರ್ನಾಟಕದ 13 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ: ಹವಾಮಾನ ಇಲಾಖೆ










Click it and Unblock the Notifications