ಮೈಸೂರಿನಲ್ಲಿ ಗೃಹ ಮಂಡಳಿ ಲೇಔಟ್, 20 ಸಾವಿರ ಸೈಟು ಹಂಚಿಕೆ
ಮೈಸೂರು, ಏಪ್ರಿಲ್ 14: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ನಿವೇಶನ ಕೊಳ್ಳುವ ಆಲೋಚನೆ ಹೊಂದಿರುವ ಜನರಿಗೆ ಸಿಹಿಸುದ್ದಿಯೊಂದಿದೆ. ಕರ್ನಾಟಕ ಗೃಹ ಮಂಡಳಿ ನಗರದಲ್ಲಿ ಬಡಾವಣೆಯೊಂದನ್ನು ನಿರ್ಮಾಣ ಮಾಡಲಿದ್ದು, ಸುಮಾರು 20 ಸಾವಿರ ಸೈಟುಗಳನ್ನು ಹಂಚಿಕೆ ಮಾಡಲು ಮುಂದಾಗಿದೆ. ಸುಮಾರು 2,500 ಎಕರೆ ಪ್ರದೇಶದಲ್ಲಿ ಅಗತ್ಯ ಮೂಲ ಸೌಕರ್ಯಗಳ ಜೊತೆಗೆ ಬಡಾವಣೆ ನಿರ್ಮಾಣ ಮಾಡಲಾಗುತ್ತದೆ.
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಸೈಟುಗಳ ಕುರಿತು ರಾಜ್ಯ ರಾಜಕೀಯದಲ್ಲಿ ಭಾರೀ ಚರ್ಚೆಗಳು ನಡೆಯುತ್ತಿವೆ. ಇಂತಹ ಹೊತ್ತಿನಲ್ಲಿಯೇ ಮೈಸೂರು ನಗರದ ಹೊರ ವಲಯದಲ್ಲಿ ಕರ್ನಾಟಕ ಗೃಹ ಮಂಡಳಿ ಬಡಾವಣೆ ನಿರ್ಮಾಣ ಮಾಡಿ, ಸೈಟುಗಳನ್ನು ಜನರಿಗೆ ಹಂಚಿಕೆ ಮಾಡಲು ಮುಂದಾಗಿದೆ.

ಸುಮಾರು 2,500 ಎಕರೆ ಪ್ರದೇಶದಲ್ಲಿ ಹೊಸ ಬಡಾವಣೆ ನಿರ್ಮಾಣಕ್ಕೆ ಕರ್ನಾಟಕ ಗೃಹ ಮಂಡಳಿ (ಕೆಎಚ್ಬಿ) ಯೋಜನೆ ಸಿದ್ಧಗೊಳಿಸಿದೆ. ಈ ಕುರಿತು ಕರ್ನಾಟಕ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಕೆ ಮಾಡಿದೆ. ಸಚಿವ ಸಂಪುಟ ಸಭೆಯಲ್ಲಿ ಇದಕ್ಕೆ ಅನುಮೋದನೆ ನೀಡಿದರೆ ಮುಂದಿನ ಕೆಲಸಗಳನ್ನು ಕೆಎಚ್ಬಿ ಕೈಗೊಳ್ಳಲಿದೆ.
20 ಸಾವಿರ ಸೈಟುಗಳ ಹಂಚಿಕೆ: ಸರ್ಕಾರದಿಂದ ಅನುಮೋದನೆ ಸಿಕ್ಕ ಕೂಡಲೇ ರೈತರಿಂದ ನೇರವಾಗಿ ಜಮೀನು ಖರೀದಿ ಮಾಡಿ, ಬಡಾವಣೆ ನಿರ್ಮಾಣ ಮಾಡಲು ಪ್ರಕ್ರಿಯೆಯನ್ನು ಕೆಎಚ್ಬಿ ಆರಂಭಿಸಲಿದೆ. ಬಡಾವಣೆಗೆ ಭೂಮಿ ನೀಡಿದ ರೈತರಿಗೆ ಸಹ ಸೈಟುಗಳನ್ನು ನೀಡಿ, ಜನರಿಗೆ 20 ಸಾವಿರ ನಿವೇಶನ ಹಂಚಿಕೆ ಮಾಡುವ ಗುರಿಯನ್ನು ಕೆಎಚ್ಬಿ ಹೊಂದಿದೆ.
ಈಗಾಗಲೇ ಕೆಎಚ್ಬಿ ನಗರದಲ್ಲಿ ಹೂಟಗಳ್ಳಿ, ಇಲವಾಲ ಮತ್ತು ಕೆಂಚಲಗೂಡಿನಲ್ಲಿ ಬಡಾವಣೆಗಳನ್ನು ನಿರ್ಮಾಣ ಮಾಡಿ ಮನೆಗಳನ್ನು ಸಹ ನಿರ್ಮಾಣ ಮಾಡಿ ಹಂಚಿಕೆ ಮಾಡಿದೆ. ಈಗ ಮುಡಾ ಸೈಟುಗಳ ಬೆಲೆಗಳು ಗಗನಕ್ಕೆ ಏರಿದೆ. ಆದ್ದರಿಂದ ಕೆಎಚ್ಬಿ ನಗರದಲ್ಲಿ ಮತ್ತೊಂದು ಬಡಾವಣೆ ನಿರ್ಮಾಣ ಮಾಡಲು ತಯಾರಿ ನಡೆಸಿದೆ.
ನಗರದ ಹೊರ ವಲಯದಲ್ಲಿ ರೈತರಿಂದ ಶೇ 50:50ರ ಅನುಪಾತದಲ್ಲಿ ಜಮೀನು ಖರೀದಿ ಮಾಡಲಾಗುತ್ತದೆ. ಒಂದೇ ಕಡೆ ಜಮೀನು ಸಿಕ್ಕಿದರೆ ದೊಡ್ಡ ಬಡಾವಣೆ, ಇಲ್ಲವಾದಲ್ಲಿ ನಾಲ್ಕು ಅಥವ 5 ಕಡೆ ಜಮೀನು ಪಡೆದು ಬಡಾವಣೆ ನಿರ್ಮಾಣ ಮಾಡುವುದು ಕೆಎಚ್ಬಿಯ ಆಲೋಚನೆಯಾಗಿದೆ.
2009-10ರಲ್ಲಿ ಕೆಎಚ್ಬಿ ನಗರದಲ್ಲಿ ನಿವೇಶನ ಆಕಾಂಕ್ಷಿಗಳಿಂದ ಸೈಟು ಬೇಡಿಕೆಯ ಸಮೀಕ್ಷೆ ನಡೆಸಿತ್ತು. ಆಗ 3 ಸಾವಿರಕ್ಕೂ ಅಧಿಕ ಅರ್ಜಿಗಳನ್ನು ಸ್ವೀಕಾರ ಮಾಡಲಾಗಿತ್ತು. ಆದರೆ ಆಗ ಮುಡಾ ಬಡಾವಣೆ ನಿರ್ಮಾಣ ಮಾಡುವ ಯೋಜನೆ ಕೈಗೊಂಡ ಕಾರಣ ಕೆಎಚ್ಬಿ ತನ್ನ ಆಲೋಚನೆಯನ್ನು ಕೈ ಬಿಟ್ಟಿತ್ತು.
ಮೈಸೂರಿನಲ್ಲಿ ಇತ್ತೀಚೆಗೆ ಕೆಎಚ್ಬಿ ಮಾನಂದವಾಡಿ ರಸ್ತೆಯ ಕೆಂಚಲಗೂಡು ಬಳಿ ಬಡಾವಣೆ ನಿರ್ಮಾಣ ಮಾಡಿ, ಸೈಟುಗಳನ್ನು ಹಂಚಿಕೆ ಮಾಡಿದೆ. ಈ ಮಾದರಿಯಲ್ಲಿ ನಗರದ ಹೊರ ವಲಯದಲ್ಲಿ ಬಡಾವಣೆ ನಿರ್ಮಾಣ ಮಾಡಿ ಸೈಟುಗಳನ್ನು ಹಂಚಿಕೆ ಮಾಡುವುದು ಕೆಎಚ್ಬಿಯ ಆಲೋಚನೆಯಾಗಿದೆ.
ಮೈಸೂರು ನಗರದ ಮಾತ್ರವಲ್ಲ ತಾಲೂಕು ಕೇಂದ್ರಗಳಲ್ಲಿಯೂ ಬಡಾವಣೆ ನಿರ್ಮಾಣ ಮಾಡಲು ಕೆಎಚ್ಬಿ ಯೋಜನೆ ರೂಪಿಸುತ್ತಿದೆ. ಈಗಾಗಲೇ ನಂಜನಗೂಡಿನಲ್ಲಿ ಬಡಾವಣೆ ನಿರ್ಮಾಣ ಮಾಡಿ ಸೈಟುಗಳನ್ನು ಹಂಚಿಕೆ ಮಾಡಿದೆ. ಇದೇ ಮಾದರಿಯಲ್ಲಿ ರೈತರಿಂದ ಶೇ 60:40ರ ಅನುಪಾತದಲ್ಲಿ ಜಮೀನು ಖರೀದಿ ಮಾಡಿ, ತಾಲೂಕು ಕೇಂದ್ರಗಳಲ್ಲಿ ಬಡಾವಣೆ ನಿರ್ಮಿಸಲಾಗುತ್ತದೆ.
-
Shubman Gill: ಅರ್ಜುನ್ ತೆಂಡ್ಯೂಲ್ಕರ್ ಮದುವೆಗೆ ಬಾರದ ಶುಭ್ಮನ್ ಗಿಲ್: ಸಾರಾ ಜೊತೆಗೆ ಆಯ್ತಾ ಬ್ರೇಕ್ ಅಪ್? -ಹೀಗಿದೆ ಗಾಸಿಪ್ -
ರಿಚರ್ಡ್ ಕೆಟಲ್ಬರೋ ಔಟ್: ಟಿ20 ವಿಶ್ವಕಪ್ ಫೈನಲ್ಗೂ ಮುನ್ನ ಭಾರತೀಯ ಕ್ರಿಕೆಟ್ ಅಭಿಮಾನಿಗಳಿಗೆ ಸಂತಸದ ಸುದ್ದಿ -
Weekly Horoscope March 9–15: ಮಾರ್ಚ್ ವಾರಭವಿಷ್ಯ – 12 ರಾಶಿಗಳ ಸುಖ-ದುಃಖ, ಹಣಕಾಸು ಮತ್ತು ಆರೋಗ್ಯ ಫಲ -
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Vande Bharat Express: 20 ಬೋಗಿಗಳ 42ನೇ ವಂದೇ ಭಾರತ್ ರೈಲು ಸಂಚಾರ ಆರಂಭ, ಎಲ್ಲಿ? ವೇಳಾಪಟ್ಟಿ -
ಟಿ20 ವಿಶ್ವಕಪ್ 2026 ಫೈನಲ್ ಪಂದ್ಯ ಮಳೆಯಿಂದ ರದ್ದಾದ್ರೆ ಟ್ರೋಫಿ ಯಾರ ಮುಡಿಗೆ?; ಐಸಿಸಿ ನಿಯಮಗಳು ಹೀಗಿವೆ -
Gold Price: ಚಿನ್ನ ಬೆಲೆ ಭಾರಿ ಕುಸಿತ ಸಾಧ್ಯತೆ, ಆದರೆ ಇದೊಂದು ದೇಶದ ನಿರ್ಧಾರ ಮುಖ್ಯ -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers -
ಕರ್ನಾಟಕಕ್ಕೆ ಬಂದ್ರೆ ಅಮ್ಮನ ಮನೆಗೆ ಬಂದಂತೆ ಭಾಸವಾಗುತ್ತೆ: ಕನ್ನಡದಲ್ಲೇ ಭಾಷಣ ಮಾಡಿದ ನಟ ಜ್ಯೂನಿಯರ್ ಎನ್ಟಿಆರ್ -
Women's Day Wishes: ಹೆಣ್ಣು ಜಗದ ಕಣ್ಣು: ಮಹಿಳಾ ದಿನಕ್ಕೆ ನಿಮ್ಮ ಪ್ರೀತಿಪಾತ್ರರಿಗೆ ಶುಭ ಕೋರಲು ಇಲ್ಲಿವೆ ಸುಂದರ ಸಾಲುಗಳು -
MS Dhoni: ಕುಣಿದು ಕುಪ್ಪಳಿಸುತ್ತಿದ್ದ ಪತ್ನಿ ಸಾಕ್ಷಿ ಸಿಂಗ್ಗೆ ಸುಮ್ನೆ ಕೂತ್ಕೋ ಎಂದ ಎಂಎಸ್ ಧೋನಿ












Click it and Unblock the Notifications