ಮೈಸೂರಿನಲ್ಲಿ ಗೃಹ ಮಂಡಳಿ ಲೇಔಟ್, 20 ಸಾವಿರ ಸೈಟು ಹಂಚಿಕೆ
ಮೈಸೂರು, ಏಪ್ರಿಲ್ 14: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ನಿವೇಶನ ಕೊಳ್ಳುವ ಆಲೋಚನೆ ಹೊಂದಿರುವ ಜನರಿಗೆ ಸಿಹಿಸುದ್ದಿಯೊಂದಿದೆ. ಕರ್ನಾಟಕ ಗೃಹ ಮಂಡಳಿ ನಗರದಲ್ಲಿ ಬಡಾವಣೆಯೊಂದನ್ನು ನಿರ್ಮಾಣ ಮಾಡಲಿದ್ದು, ಸುಮಾರು 20 ಸಾವಿರ ಸೈಟುಗಳನ್ನು ಹಂಚಿಕೆ ಮಾಡಲು ಮುಂದಾಗಿದೆ. ಸುಮಾರು 2,500 ಎಕರೆ ಪ್ರದೇಶದಲ್ಲಿ ಅಗತ್ಯ ಮೂಲ ಸೌಕರ್ಯಗಳ ಜೊತೆಗೆ ಬಡಾವಣೆ ನಿರ್ಮಾಣ ಮಾಡಲಾಗುತ್ತದೆ.
ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಸೈಟುಗಳ ಕುರಿತು ರಾಜ್ಯ ರಾಜಕೀಯದಲ್ಲಿ ಭಾರೀ ಚರ್ಚೆಗಳು ನಡೆಯುತ್ತಿವೆ. ಇಂತಹ ಹೊತ್ತಿನಲ್ಲಿಯೇ ಮೈಸೂರು ನಗರದ ಹೊರ ವಲಯದಲ್ಲಿ ಕರ್ನಾಟಕ ಗೃಹ ಮಂಡಳಿ ಬಡಾವಣೆ ನಿರ್ಮಾಣ ಮಾಡಿ, ಸೈಟುಗಳನ್ನು ಜನರಿಗೆ ಹಂಚಿಕೆ ಮಾಡಲು ಮುಂದಾಗಿದೆ.

ಸುಮಾರು 2,500 ಎಕರೆ ಪ್ರದೇಶದಲ್ಲಿ ಹೊಸ ಬಡಾವಣೆ ನಿರ್ಮಾಣಕ್ಕೆ ಕರ್ನಾಟಕ ಗೃಹ ಮಂಡಳಿ (ಕೆಎಚ್ಬಿ) ಯೋಜನೆ ಸಿದ್ಧಗೊಳಿಸಿದೆ. ಈ ಕುರಿತು ಕರ್ನಾಟಕ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಕೆ ಮಾಡಿದೆ. ಸಚಿವ ಸಂಪುಟ ಸಭೆಯಲ್ಲಿ ಇದಕ್ಕೆ ಅನುಮೋದನೆ ನೀಡಿದರೆ ಮುಂದಿನ ಕೆಲಸಗಳನ್ನು ಕೆಎಚ್ಬಿ ಕೈಗೊಳ್ಳಲಿದೆ.
20 ಸಾವಿರ ಸೈಟುಗಳ ಹಂಚಿಕೆ: ಸರ್ಕಾರದಿಂದ ಅನುಮೋದನೆ ಸಿಕ್ಕ ಕೂಡಲೇ ರೈತರಿಂದ ನೇರವಾಗಿ ಜಮೀನು ಖರೀದಿ ಮಾಡಿ, ಬಡಾವಣೆ ನಿರ್ಮಾಣ ಮಾಡಲು ಪ್ರಕ್ರಿಯೆಯನ್ನು ಕೆಎಚ್ಬಿ ಆರಂಭಿಸಲಿದೆ. ಬಡಾವಣೆಗೆ ಭೂಮಿ ನೀಡಿದ ರೈತರಿಗೆ ಸಹ ಸೈಟುಗಳನ್ನು ನೀಡಿ, ಜನರಿಗೆ 20 ಸಾವಿರ ನಿವೇಶನ ಹಂಚಿಕೆ ಮಾಡುವ ಗುರಿಯನ್ನು ಕೆಎಚ್ಬಿ ಹೊಂದಿದೆ.
ಈಗಾಗಲೇ ಕೆಎಚ್ಬಿ ನಗರದಲ್ಲಿ ಹೂಟಗಳ್ಳಿ, ಇಲವಾಲ ಮತ್ತು ಕೆಂಚಲಗೂಡಿನಲ್ಲಿ ಬಡಾವಣೆಗಳನ್ನು ನಿರ್ಮಾಣ ಮಾಡಿ ಮನೆಗಳನ್ನು ಸಹ ನಿರ್ಮಾಣ ಮಾಡಿ ಹಂಚಿಕೆ ಮಾಡಿದೆ. ಈಗ ಮುಡಾ ಸೈಟುಗಳ ಬೆಲೆಗಳು ಗಗನಕ್ಕೆ ಏರಿದೆ. ಆದ್ದರಿಂದ ಕೆಎಚ್ಬಿ ನಗರದಲ್ಲಿ ಮತ್ತೊಂದು ಬಡಾವಣೆ ನಿರ್ಮಾಣ ಮಾಡಲು ತಯಾರಿ ನಡೆಸಿದೆ.
ನಗರದ ಹೊರ ವಲಯದಲ್ಲಿ ರೈತರಿಂದ ಶೇ 50:50ರ ಅನುಪಾತದಲ್ಲಿ ಜಮೀನು ಖರೀದಿ ಮಾಡಲಾಗುತ್ತದೆ. ಒಂದೇ ಕಡೆ ಜಮೀನು ಸಿಕ್ಕಿದರೆ ದೊಡ್ಡ ಬಡಾವಣೆ, ಇಲ್ಲವಾದಲ್ಲಿ ನಾಲ್ಕು ಅಥವ 5 ಕಡೆ ಜಮೀನು ಪಡೆದು ಬಡಾವಣೆ ನಿರ್ಮಾಣ ಮಾಡುವುದು ಕೆಎಚ್ಬಿಯ ಆಲೋಚನೆಯಾಗಿದೆ.
2009-10ರಲ್ಲಿ ಕೆಎಚ್ಬಿ ನಗರದಲ್ಲಿ ನಿವೇಶನ ಆಕಾಂಕ್ಷಿಗಳಿಂದ ಸೈಟು ಬೇಡಿಕೆಯ ಸಮೀಕ್ಷೆ ನಡೆಸಿತ್ತು. ಆಗ 3 ಸಾವಿರಕ್ಕೂ ಅಧಿಕ ಅರ್ಜಿಗಳನ್ನು ಸ್ವೀಕಾರ ಮಾಡಲಾಗಿತ್ತು. ಆದರೆ ಆಗ ಮುಡಾ ಬಡಾವಣೆ ನಿರ್ಮಾಣ ಮಾಡುವ ಯೋಜನೆ ಕೈಗೊಂಡ ಕಾರಣ ಕೆಎಚ್ಬಿ ತನ್ನ ಆಲೋಚನೆಯನ್ನು ಕೈ ಬಿಟ್ಟಿತ್ತು.
ಮೈಸೂರಿನಲ್ಲಿ ಇತ್ತೀಚೆಗೆ ಕೆಎಚ್ಬಿ ಮಾನಂದವಾಡಿ ರಸ್ತೆಯ ಕೆಂಚಲಗೂಡು ಬಳಿ ಬಡಾವಣೆ ನಿರ್ಮಾಣ ಮಾಡಿ, ಸೈಟುಗಳನ್ನು ಹಂಚಿಕೆ ಮಾಡಿದೆ. ಈ ಮಾದರಿಯಲ್ಲಿ ನಗರದ ಹೊರ ವಲಯದಲ್ಲಿ ಬಡಾವಣೆ ನಿರ್ಮಾಣ ಮಾಡಿ ಸೈಟುಗಳನ್ನು ಹಂಚಿಕೆ ಮಾಡುವುದು ಕೆಎಚ್ಬಿಯ ಆಲೋಚನೆಯಾಗಿದೆ.
ಮೈಸೂರು ನಗರದ ಮಾತ್ರವಲ್ಲ ತಾಲೂಕು ಕೇಂದ್ರಗಳಲ್ಲಿಯೂ ಬಡಾವಣೆ ನಿರ್ಮಾಣ ಮಾಡಲು ಕೆಎಚ್ಬಿ ಯೋಜನೆ ರೂಪಿಸುತ್ತಿದೆ. ಈಗಾಗಲೇ ನಂಜನಗೂಡಿನಲ್ಲಿ ಬಡಾವಣೆ ನಿರ್ಮಾಣ ಮಾಡಿ ಸೈಟುಗಳನ್ನು ಹಂಚಿಕೆ ಮಾಡಿದೆ. ಇದೇ ಮಾದರಿಯಲ್ಲಿ ರೈತರಿಂದ ಶೇ 60:40ರ ಅನುಪಾತದಲ್ಲಿ ಜಮೀನು ಖರೀದಿ ಮಾಡಿ, ತಾಲೂಕು ಕೇಂದ್ರಗಳಲ್ಲಿ ಬಡಾವಣೆ ನಿರ್ಮಿಸಲಾಗುತ್ತದೆ.
-
CET ರ್ಯಾಂಕಿಂಗ್ಗೆ ಪಿಯುಸಿಯ ಯಾವ ಅಂಕ ಪರಿಗಣನೆ? ಪರೀಕ್ಷೆ-1 ಅಥವಾ ಪರೀಕ್ಷೆ-2? ಇಲ್ಲಿದೆ ಮಹತ್ವದ ಸ್ಪಷ್ಟನೆ -
ಮೈಸೂರು-ಮುಂಬೈ ವಂದೇ ಭಾರತ್ ರೈಲಿಗೆ ರಾಜವಂಶಸ್ಥ ಯದುವೀರ ಒಡೆಯರ್ ಒತ್ತಾಯ -
Copra: ಹೊಸ ದಾಖಲೆ ನಿರ್ಮಿಸಿದ ತಿಪಟೂರು ಉಂಡೆ ಕೊಬ್ಬರಿ, ಕ್ವಿಂಟಾಲ್ಗೆ 38,000 ರೂ. -
Review: ವಿನ್ಯಾಸ, ಗುಣಮಟ್ಟ, ಡಿಸ್ಪ್ಲೆ, ಕ್ಯಾಮೆರಾ ಎಲ್ಲದರಲ್ಲೂ ಬೆಸ್ಟ್ OnePlus Nord 6 ಫೋನ್ -
April 14 Horoscope: 12 ರಾಶಿಗಳಿಗೆ ಇಂದು ಈ ರಾಶಿಯವರ ಕೈ ಹಿಡಿಯುವುದು ಅದೃಷ್ಟ:ನಿತ್ಯ ಭವಿಷ್ಯದ ಸಂಪೂರ್ಣ ವಿವರ -
ಬೆಂಗಳೂರು ಟ್ರಾಫಿಕ್ ಪೊಲೀಸ್ ಜೊತೆ ಹಿಂದಿ ಯುವಕನ ಕಿರಿಕ್, ಪ್ರಶ್ನಿಸಿದ ಕನ್ನಡಿಗನಿಗೆ ನೀವೆಲ್ಲ ಜಾಬ್ಲೆಸ್ ಎಂದು ಅವಾಜ್ -
ಮಗನ ಜೊತೆಯಲ್ಲೇ ದ್ವಿತೀಯ PUC ಪರೀಕ್ಷೆ ಬರೆದು ಪಾಸ್ ಆದ 57 ವರ್ಷದ ತಂದೆ: 40 ವರ್ಷದ ಹಿಂದಿನ ಕನಸು ನನಸು -
Karna Serial: ಕರ್ಣ ಸೀರಿಯಲ್ಗೆ ಎಂಟ್ರಿ ಕೊಟ್ಟ ನಟ ಗಗನ್ ಚಿನ್ನಪ್ಪ, ಟ್ವಿಸ್ಟ್ ನೋಡಿ ವೀಕ್ಷಕರು ಶಾಕ್ -
ದ್ವಿತೀಯ PUC ಫಲಿತಾಂಶ: ಕನ್ನಡ ಮಾಧ್ಯಮಕ್ಕಿಂತ ಇಂಗ್ಲಿಷ್ ಮಾಧ್ಯಮದವರದ್ದೇ ಮೇಲುಗೈ -
ಬೆಂಗಳೂರು ಸೇರಿ 11 ಜಿಲ್ಲೆಗಳಲ್ಲಿ ಕೈಗಾರಿಕಾ ಅಭಿವೃದ್ಧಿ: 18,430 ರೂ ಹೂಡಿಕೆಗೆ ಅಸ್ತು, 15000 ಉದ್ಯೋಗ ಸೃಷ್ಟಿ -
Bengaluru: 'ಮುಕ್ಕಾಲ ಮುಕ್ಕಾಬುಲ' ಹಾಡಿಗೆ ಸಖತ್ ಹೆಜ್ಜೆ ಹಾಕಿದ ಗಣಿತ ಪ್ರೊಫೆಸರ್; ಡಾನ್ಸ್ ವಿಡಿಯೋ ಭಾರೀ Viral -
Naseer Ahmed: ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಯಿಂದ ನಸೀರ್ ಅಹ್ಮದ್ ವಜಾ; ಕಾಂಗ್ರೆಸ್ನಲ್ಲಿ ಆಂತರಿಕ ಭಿನ್ನಮತ ಸ್ಫೋಟ












Click it and Unblock the Notifications