ಕಿಡ್ನಾಪ್ ಆಗಿದ್ದ ತಹಶೀಲ್ದಾರ್ ಕೆ.ಆರ್.ಪೇಟೆಯಲ್ಲಿ ಪ್ರತ್ಯಕ್ಷ
ಮೈಸೂರು, ಆಗಸ್ಟ್ 3: ಶುಕ್ರವಾರ ಬೆಳಿಗ್ಗೆ ನಾಪತ್ತೆಯಾಗಿದ್ದ ಕೆ.ಆರ್. ಪೇಟೆ ಕೆ. ಮಹೇಶ್ ಚಂದ್ರ ತಹಶೀಲ್ದಾರ್ ಸಂಜೆ ಪೊಲೀಸ್ ಠಾಣೆಯಲ್ಲಿ ಪ್ರತ್ಯಕ್ಷಗೊಂಡಿದ್ದಾರೆ.
ಸಂಜೆ 5 ಗಂಟೆ ಸುಮಾರಿಗೆ ಕೆ.ಆರ್.ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರತ್ಯಕ್ಷರಾದ ಅವರು, ಮುಸುಕುಧಾರಿಗಳು ತಮ್ಮನ್ನು ಕಿಡ್ನಾಪ್ ಮಾಡಿರುವುದಾಗಿ ಹೇಳಿಕೆ ನೀಡಿದ್ದಾರೆ.
ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ತಹಶೀಲ್ದಾರ್ ಮಹೇಶಚಂದ್ರ ಅವರನ್ನು ಬೆಳಗ್ಗೆ ಅಪಹರಣ ಮಾಡಲಾಗಿದೆ ಎಂಬ ಸುದ್ದಿ ಹರಡಿತ್ತು.
ಗುರುವಾರ ರಾತ್ರಿ ಕೆ.ಆರ್.ನಗರ ತಾಲ್ಲೂಕಿನ ಚಿಕ್ಕವಡ್ಡರಗುಡಿ ಗ್ರಾಮದ ಬಳಿ ಎರಡು ಬೈಕ್ನಲ್ಲಿ ಬಂದ ಮೂರು-ನಾಲ್ಕು ಜನ ಮುಸುಕುಧಾರಿಗಳು ನನ್ನ ಕಾರನ್ನು ಅಡ್ಡಗಟ್ಟಿ, ಕಿರುಚಾಡದಂತೆ ಪ್ರಾಣ ಬೆದರಿಕೆ ಹಾಕಿದರು.

ಮುಖಕ್ಕೆ ಮುಸುಕು ಹಾಕಿ ಬೈಕ್ನಲ್ಲಿ ಕೂರಿಸಿ ಕೊಂಡು ಹೋದರು. ನನ್ನನ್ನು ಎಲ್ಲಿಗೆ ಕರೆದೊಯ್ದರು ಎಂಬುದು ಗೊತ್ತಾಗಲಿಲ್ಲ. ನಂತರ ಕತ್ತಲೆ ಕೋಣೆಯಲ್ಲಿ ಕೂಡಿ ಹಾಕಿದ್ದರು. ಮುಸುಕುಧಾರಿಗಳು ಕನ್ನಡ ಮತ್ತು ಹಿಂದಿ ಭಾಷೆ ಮಾತನಾಡುತ್ತಿದ್ದರು ಎಂದು
ಸಂಜೆ 4.30ರ ಸಮಯದಲ್ಲಿ ಅದೇ ಬೈಕ್ನಲ್ಲಿ ನನ್ನನ್ನು ಕೆ.ಆರ್.ಪೇಟೆ ತಾಲೂಕಿನ ತೆಂಡೇಕೆರೆ ಬಳಿ ಬಿಟ್ಟು ಹೋದರು, ನಾನು ಅಲ್ಲಿಂದ ಬಸ್ನಲ್ಲಿ ಬಂದಿದ್ದಾಗಿ ಅವರು ಪೊಲೀಸರಿಗೆ ತಿಳಿಸಿದ್ದಾರೆ.
ಮಂಡ್ಯ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಾಧಿಕಾ ಮತ್ತು ಸಿಬ್ಬಂದಿ ಜತೆಯಲ್ಲಿ ತೆಂಡೇಕೆರೆ ಗ್ರಾಮಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಮಹೇಶ್ ಚಂದ್ರ ಅಪರಣದ ಹಿಂದೆ ಕಲ್ಲುಗಣಿಗಾರಿಕೆ ಮಾಫಿಯಾ ಇದೆ ಎಂಬ ಅನುಮಾನ ವ್ಯಕ್ತವಾಗಿದೆ.
ಮಹೇಶ್ ಚಂದ್ರ ಅವರ ಕಾರು ಶುಕ್ರವಾರ ಬೆಳಿಗ್ಗೆ ಮೈಸೂರಿನ ಬಳಿ ಪತ್ತೆಯಾಗಿತ್ತು. ಕಾರನ್ನು ನೋಡಿದ ಗ್ರಾಮಸ್ಥರು ಪೊಲೀಸರಿಗೆ ಮಾಹಿತಿ ನೀಡಿದ್ದರು.
ಒಂದು ವಾರದ ಹಿಂದೆ ಕೆ.ಮಹೇಶ್ ಚಂದ್ರ ಅವರು ಕೆ.ಆರ್.ನಗರದಿಂದ ಕೆ.ಆರ್.ಪೇಟೆಗೆ ವರ್ಗಾವಣೆಗೊಂಡಿದ್ದರು. ಗುರುವಾರ ಸಂಜೆ 7.30ಕ್ಕೆ ವಿಭಾಗಾಧಿಕಾರಿಯೊಂದಿಗೆ ಸಭೆ ಮುಗಿಸಿ, 8.45ಕ್ಕೆ ಮನೆಯತ್ತ ಹೊರಟಿದ್ದರು.
ತಾಯಿಗೆ ಅನಾರೋಗ್ಯವಿದೆ ಎಂದು ಶುಕ್ರವಾರ ಮತ್ತು ಶನಿವಾರ ಅವರು ರಜೆ ಪಡೆದಿದ್ದರು. ಆದರೆ, ಗುರುವಾರ ಪ್ರವಾಸಿ ಮಂದಿರದ ಹೊರಟ ಅವರು ಮನೆ ಸೇರಿರಲಿಲ್ಲ. ಅವರ ಮೊಬೈಲ್ ಕೂಡಾ ಸ್ವಿಚ್ ಆಫ್ ಆಗಿತ್ತು.
-
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Prakash Raj Mother passed Away: ನಟ ಪ್ರಕಾಶ್ ರಾಜ್ ತಾಯಿ ಸ್ವರ್ಣಲತಾ ನಿಧನ, ಚಿತ್ರರಂಗದ ಗಣ್ಯರಿಂದ ಸಂತಾಪ












Click it and Unblock the Notifications