ಕಿಡ್ನಾಪ್ ಆಗಿದ್ದ ತಹಶೀಲ್ದಾರ್ ಕೆ.ಆರ್.ಪೇಟೆಯಲ್ಲಿ ಪ್ರತ್ಯಕ್ಷ
ಮೈಸೂರು, ಆಗಸ್ಟ್ 3: ಶುಕ್ರವಾರ ಬೆಳಿಗ್ಗೆ ನಾಪತ್ತೆಯಾಗಿದ್ದ ಕೆ.ಆರ್. ಪೇಟೆ ಕೆ. ಮಹೇಶ್ ಚಂದ್ರ ತಹಶೀಲ್ದಾರ್ ಸಂಜೆ ಪೊಲೀಸ್ ಠಾಣೆಯಲ್ಲಿ ಪ್ರತ್ಯಕ್ಷಗೊಂಡಿದ್ದಾರೆ.
ಸಂಜೆ 5 ಗಂಟೆ ಸುಮಾರಿಗೆ ಕೆ.ಆರ್.ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರತ್ಯಕ್ಷರಾದ ಅವರು, ಮುಸುಕುಧಾರಿಗಳು ತಮ್ಮನ್ನು ಕಿಡ್ನಾಪ್ ಮಾಡಿರುವುದಾಗಿ ಹೇಳಿಕೆ ನೀಡಿದ್ದಾರೆ.
ಮಂಡ್ಯ ಜಿಲ್ಲೆಯ ಕೆ.ಆರ್.ಪೇಟೆ ತಹಶೀಲ್ದಾರ್ ಮಹೇಶಚಂದ್ರ ಅವರನ್ನು ಬೆಳಗ್ಗೆ ಅಪಹರಣ ಮಾಡಲಾಗಿದೆ ಎಂಬ ಸುದ್ದಿ ಹರಡಿತ್ತು.
ಗುರುವಾರ ರಾತ್ರಿ ಕೆ.ಆರ್.ನಗರ ತಾಲ್ಲೂಕಿನ ಚಿಕ್ಕವಡ್ಡರಗುಡಿ ಗ್ರಾಮದ ಬಳಿ ಎರಡು ಬೈಕ್ನಲ್ಲಿ ಬಂದ ಮೂರು-ನಾಲ್ಕು ಜನ ಮುಸುಕುಧಾರಿಗಳು ನನ್ನ ಕಾರನ್ನು ಅಡ್ಡಗಟ್ಟಿ, ಕಿರುಚಾಡದಂತೆ ಪ್ರಾಣ ಬೆದರಿಕೆ ಹಾಕಿದರು.

ಮುಖಕ್ಕೆ ಮುಸುಕು ಹಾಕಿ ಬೈಕ್ನಲ್ಲಿ ಕೂರಿಸಿ ಕೊಂಡು ಹೋದರು. ನನ್ನನ್ನು ಎಲ್ಲಿಗೆ ಕರೆದೊಯ್ದರು ಎಂಬುದು ಗೊತ್ತಾಗಲಿಲ್ಲ. ನಂತರ ಕತ್ತಲೆ ಕೋಣೆಯಲ್ಲಿ ಕೂಡಿ ಹಾಕಿದ್ದರು. ಮುಸುಕುಧಾರಿಗಳು ಕನ್ನಡ ಮತ್ತು ಹಿಂದಿ ಭಾಷೆ ಮಾತನಾಡುತ್ತಿದ್ದರು ಎಂದು
ಸಂಜೆ 4.30ರ ಸಮಯದಲ್ಲಿ ಅದೇ ಬೈಕ್ನಲ್ಲಿ ನನ್ನನ್ನು ಕೆ.ಆರ್.ಪೇಟೆ ತಾಲೂಕಿನ ತೆಂಡೇಕೆರೆ ಬಳಿ ಬಿಟ್ಟು ಹೋದರು, ನಾನು ಅಲ್ಲಿಂದ ಬಸ್ನಲ್ಲಿ ಬಂದಿದ್ದಾಗಿ ಅವರು ಪೊಲೀಸರಿಗೆ ತಿಳಿಸಿದ್ದಾರೆ.
ಮಂಡ್ಯ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಾಧಿಕಾ ಮತ್ತು ಸಿಬ್ಬಂದಿ ಜತೆಯಲ್ಲಿ ತೆಂಡೇಕೆರೆ ಗ್ರಾಮಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಮಹೇಶ್ ಚಂದ್ರ ಅಪರಣದ ಹಿಂದೆ ಕಲ್ಲುಗಣಿಗಾರಿಕೆ ಮಾಫಿಯಾ ಇದೆ ಎಂಬ ಅನುಮಾನ ವ್ಯಕ್ತವಾಗಿದೆ.
ಮಹೇಶ್ ಚಂದ್ರ ಅವರ ಕಾರು ಶುಕ್ರವಾರ ಬೆಳಿಗ್ಗೆ ಮೈಸೂರಿನ ಬಳಿ ಪತ್ತೆಯಾಗಿತ್ತು. ಕಾರನ್ನು ನೋಡಿದ ಗ್ರಾಮಸ್ಥರು ಪೊಲೀಸರಿಗೆ ಮಾಹಿತಿ ನೀಡಿದ್ದರು.
ಒಂದು ವಾರದ ಹಿಂದೆ ಕೆ.ಮಹೇಶ್ ಚಂದ್ರ ಅವರು ಕೆ.ಆರ್.ನಗರದಿಂದ ಕೆ.ಆರ್.ಪೇಟೆಗೆ ವರ್ಗಾವಣೆಗೊಂಡಿದ್ದರು. ಗುರುವಾರ ಸಂಜೆ 7.30ಕ್ಕೆ ವಿಭಾಗಾಧಿಕಾರಿಯೊಂದಿಗೆ ಸಭೆ ಮುಗಿಸಿ, 8.45ಕ್ಕೆ ಮನೆಯತ್ತ ಹೊರಟಿದ್ದರು.
ತಾಯಿಗೆ ಅನಾರೋಗ್ಯವಿದೆ ಎಂದು ಶುಕ್ರವಾರ ಮತ್ತು ಶನಿವಾರ ಅವರು ರಜೆ ಪಡೆದಿದ್ದರು. ಆದರೆ, ಗುರುವಾರ ಪ್ರವಾಸಿ ಮಂದಿರದ ಹೊರಟ ಅವರು ಮನೆ ಸೇರಿರಲಿಲ್ಲ. ಅವರ ಮೊಬೈಲ್ ಕೂಡಾ ಸ್ವಿಚ್ ಆಫ್ ಆಗಿತ್ತು.
-
Sachin Tendulkar: ಅಭಿಷೇಕ್ ಶರ್ಮಾಗೆ ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ವಿಶೇಷ ಸಂದೇಶ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
ಟೀಕೆಗಳು ಸಾಯುತ್ತವೆ, ಕೆಲಸಗಳು ಉಳಿಯುತ್ತವೆ ಎಂಬ ಮಾತಿನಂತೆ ನಡೆದುಕೊಂಡ ಯುವರಾಜ್ ಸಿಂಗ್ ಶಿಶ್ಯ ಅಭಿಷೇಕ್ ಶರ್ಮಾ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Property: ಬೆಂಗಳೂರಿನ 510 ಕೋಟಿ ಮೌಲ್ಯದ 14 ಎಕರೆ ಭೂಮಿ ವಶಕ್ಕೆ ಪಡೆದ ಜಿಬಿಎ, ಕಾರಣವೇನು -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು -
ಟಿ20 ವಿಶ್ವಕಪ್ 2026 ಭಾರತದ ಮುಡಿಗೆ: ಬಾಲ ಮುದುರಿಕೊಂಡ 'ಸೈಲೆಂಟ್' ಸ್ಯಾಂಟ್ನರ್












Click it and Unblock the Notifications