ಬಾಲಕನಿಗೆ ಎರಡೂ ಕಿಡ್ನಿ ವಿಫಲ : ಸಹಾಯ ಮಾಡಿ

ಎರಡೂ ಮೂತ್ರಕೋಶಗಳ ಬದಲಿಸುವಿಕೆ, ಆಸ್ಪತ್ರೆ ಮತ್ತು ಔಷಧಿಗಳ ಖರ್ಚು, ಡಯಾಲಿಸಿಸ್ ಗಾಗಿ ಪ್ರತಿ ತಿಂಗಳು 25 ಸಾವಿರ ರು. ಸೇರಿದಂತೆ ಒಟ್ಟು 6.85 ಲಕ್ಷ ರು.ಗಳ ಅಗತ್ಯವಿದೆ. ಹೃದಯವಂತ ದಾನಿಗಳು ಹಣದ ಸಹಾಯ ನೀಡಿ ಮಾನವೀಯತೆ ಮೆರೆಯಬೇಕು ಎಂದು ಮಂಡ್ಯದ ನಿವಾಸಿಯಾಗಿರುವ ನವೀನನ ತಾಯಿ ಮಧುಶ್ರೀ ಅವರು ತಿಳಿಸಿದ್ದಾರೆ.
ನವೀನನ ತಂದೆ ಶಂಕರ್ ಅವರು ತೀರಿಕೊಂಡಿದ್ದು, ತಾಯಿ ಮಧುಶ್ರೀ ಅವರು ದಿನಗೂಲಿ ಮಾಡಿ ಜೀವನ ಸಾಗಿಸುತ್ತಿದ್ದಾರೆ ಮತ್ತು ಬಾಡಿಗೆ ಮನೆಯಲ್ಲಿ ವಾಸಿಸುತ್ತಿದ್ದಾರೆ. ತಮ್ಮ ಬಳಿ ಮಗನಿಗೆ ಚಿಕಿತ್ಸೆ ಒದಗಿಸಲು ಯಾವುದೇ ಮೂಲಗಳಿಲ್ಲ ಎಂದು ಮಧುಶ್ರೀ ಅವರು ಅಲವತ್ತುಕೊಂಡಿದ್ದಾರೆ. [ಬಡವರಿಗಾಗಿ ಮಿಡಿಯುತ್ತಿರುವ ಹೃದಯವಂತೆ]
ನವೀನನಿಗೆ ಎರಡೂ ಕಿಡ್ನಿಗಳು ವಿಫಲವಾಗಿದ್ದು, ಎರಡನ್ನೂ ಬದಲಿಸಬೇಕೆಂದು ಮೈಸೂರಿನ ಕೃಷ್ಣ ರಾಜೇಂದ್ರ ಮೆಡಿಕಲ್ ಆಸ್ಪತ್ರೆಯ ವೈದ್ಯ ಡಾ. ಮುದ್ದುಕೃಷ್ಣ ಅವರು ಸರ್ಟಿಫಿಕೇಟ್ ನೀಡಿದ್ದಾರೆ. ಬಾಲಕನ ಸ್ಥಿತಿ ತುಂಬಾ ಚಿಂತಾಜನಕವಾಗಿದ್ದು, ಆತನಿಗೆ ಕನಿಷ್ಠ 2 ವರ್ಷಗಳ ಕಾಲ ಚಿಕಿತ್ಸೆ ನೀಡಬೇಕಾಗುತ್ತದೆ ಎಂದು ವೈದ್ಯರು ಹೇಳಿದ್ದಾರೆ.
ಹೃದಯವಂತ ದಾನಿಗಳು ಕೆಳಗೆ ನೀಡಿರುವ ಮೊಬೈಲ್ ನಂಬರ್ ನಲ್ಲಿ ವಿಚಾರಿಸಿ, ದೃಢಪಡಿಸಿಕೊಂಡು ನಮೂದಿಸಿರುವ ಬ್ಯಾಂಕ್ ವಿಳಾಸಕ್ಕೆ ಹಣವನ್ನು ಜಮಾ ಮಾಡಬಹುದು. ಈಗಾಗಲೆ ಆತ ಅಧ್ಯಯನ ಮಾಡುತ್ತಿರುವ ಶಾಲೆಯ ಶಿಕ್ಷಕರು ಮತ್ತು ವಿದ್ಯಾರ್ಥಿಗಳು ಒಂದಿಷ್ಟು ಹಣವನ್ನು ಕೂಡಿಸಿ ಕೊಟ್ಟಿದ್ದಾರೆ. ಆದರೆ, ಅಷ್ಟು ಹಣ ಸಂಪೂರ್ಣ ಚಿಕಿತ್ಸೆಗೆ ಸಾಕಾಗದ ಕಾರಣ ತಾಯಿ ಸಹಾಯಕ್ಕೆ ಹಸ್ತ ಚಾಚಿದ್ದಾರೆ.
ವಿಳಾಸ : ಮಧುಶ್ರೀ, ಮಣಿಪುರ ಹೌಸ್, ದುಡ್ಡ, ಮಂಡ್ಯ ತಾಲೂಕ್, ಮಂಡ್ಯ ಜಿಲ್ಲೆ, ಕರ್ನಾಟಕ. ಮೊಬೈಲ್ ನಂ. : 97314 76106.
ಬ್ಯಾಂಕ್ ವಿವರ : Madhushree, A/c No : 64099688700, IFSC : SBMY0040035, State Bank of Mysore (Mandya) [ಹಿಂದೂ ಕಿಡ್ನಿ ಮುಸ್ಲಿಂಗೆ, ಮುಸ್ಲಿಂ ಕಿಡ್ನಿ ಹಿಂದೂಗೆ!]
-
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Bengaluru Property Tax: ಆಸ್ತಿ ತೆರಿಗೆ ಸ್ವೀಕಾರಕ್ಕಾಗಿ ರಾತ್ರಿ 10ಗಂಟೆವರೆಗೆ ಪಾಲಿಕೆ ಕಚೇರಿ ಓಪನ್ -
Arecanut Price: ದಾವಣಗೆರೆ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ ಭರ್ಜರಿ ಏರಿಕೆ: ಇಲ್ಲಿದೆ ಮಾರ್ಚ್ 30ರ ದರಪಟ್ಟಿ -
Hardik Pandya: ಕೇವಲ 35 ದಿನಗಳಲ್ಲಿ ಕೋಟಿ.. ಕೋಟಿ ಖರ್ಚು ಮಾಡಿದ ಹಾರ್ದಿಕ್ ಪಾಂಡ್ಯ; ಇಲ್ಲಿದೆ ಪಟ್ಟಿ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ












Click it and Unblock the Notifications