ಮೈಸೂರು ಮಹಾರಾಜರ 550 ವರ್ಷಗಳ ಭವ್ಯ ಇತಿಹಾಸ
ಭಾರತಕ್ಕೆ ಸ್ವಾತಂತ್ರ್ಯ ಸಿಗುವವರೆಗೆ ಸುಮಾರು ಅರ್ಧ ಸಹಸ್ರಮಾನಕ್ಕೂ ಹೆಚ್ಚು ಕಾಲ ಕರ್ನಾಟಕವನ್ನು, ಸಂಸ್ಕೃತಿಯನ್ನು, ಶ್ರೀಮಂತಿಕೆಯನ್ನು ಮೆರೆದಾಡಿಸಿದ ಹೆಗ್ಗಳಿಕೆ ಮೈಸೂರು ಅರಸರದು. ಈ ಅವಧಿಯಲ್ಲಿ ಯಾವ್ಯಾರ ರಾಜರು ಮೈಸೂರು ಪ್ರಾಂತ್ಯವನ್ನು ಆಳಿ ಮೆರೆದಾಡಿದರು ಎಂಬುದರತ್ತ ಒಂದು ನೋಟ ಇಲ್ಲಿದೆ. ಶ್ರೀಕಂಠದತ್ತ ಒಡೆಯರ್ ಅವರ ಅಕಾಲಿಕ ನಿಧನದಿಂದ ತೆರವಾಗಿದ್ದ ಸ್ಥಾನವನ್ನು ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ತುಂಬುತ್ತಿದ್ದು, ಮೈಸೂರಿನ ಭವ್ಯ ಪರಂಪರೆ ಮುಂದುವರಿಯುತ್ತಿದೆ. ಮೈಸೂರು ಮಹಾರಾಜರ ಭವ್ಯ ಇತಿಹಾಸದ ಪುಟಗಳನ್ನು ಇಲ್ಲಿ ಓದಿರಿ - ಸಂಪಾದಕ.
***
ಮೈಸೂರು ರಾಜರ ಆಡಳಿತಾವಧಿ ಚರಿತ್ರೆ ಪ್ರಕಾರ 1399ರಿಂದ ಆರಂಭವಾಗುತ್ತದೆ. ಯದುರಾಯರನ್ನು ಯದುವಂಶದ ಸ್ಥಾಪಕರೆಂದು ಹೇಳಲಾಗುತ್ತದೆ. ಯದುರಾಯ ಮತ್ತು ಕೃಷ್ಣರಾಯರು ಉತ್ತರದ ದ್ವಾರಕಾಪಟ್ಟಣದ ರಾಜದೇವನ ಮಕ್ಕಳಾಗಿದ್ದು, ಇವರು ಪುರಾಣ ಪ್ರಸಿದ್ಧ ಯಾದವಗಿರಿ(ಮೇಲುಕೋಟೆ)ಗೆ ತಮ್ಮ ಮನೆ ದೇವರಾದ ಚೆಲುವನಾರಾಯಣ ಸ್ವಾಮಿಯ ದರ್ಶನ ಮಾಡಲು ಆಗಮಿಸುತ್ತಾರೆ. ದರ್ಶನ ಮುಗಿಸಿಕೊಂಡು ಕಾವೇರಿ ನದಿ ದಾಟಿ ಮೈಸೂರನ್ನು ತಲುಪುತ್ತಾರೆ.
ಈ ಸಂದರ್ಭ ಮೈಸೂರಿನಲ್ಲಿ ಪಾಳೆಗಾರರಾಗಿದ್ದ ಚಾಮರಾಜ ಎಂಬುವರು ಆಡಳಿತ ನಡೆಸಿ ತೀರಿಕೊಂಡಿದ್ದರು. ಇವರಿಗೆ ಹೆಂಡತಿ ಹಾಗೂ ಸುಂದರ ಮಗಳಿದ್ದರು. ಪಾಳೆಗಾರ ಚಾಮರಾಜರು ಕಾಲವಾದ ಬಳಿಕ ಮೈಸೂರು ಸೀಮೆಯ ದಳವಾಯಿಯಾಗಿದ್ದ ಕೊರಗಳ್ಳಿ ಮಾರನಾಯಕ ಇವರಿಗೆ ಹಿಂಸೆ ನೀಡಲು ಆರಂಭಿಸಿದನಲ್ಲದೆ, ಚಾಮರಾಜರ ಪುತ್ರಿ ರಾಜಕುಮಾರಿ ದೇವಾಜಮ್ಮಣಿಯನ್ನು ತನಗೆ ವಿವಾಹ ಮಾಡಿಕೊಡುವಂತೆ ಪೀಡಿಸತೊಡಗಿದನು. [ಮೈಸೂರಿನಲ್ಲಿ ಮರುಕಳಿಸಲಿದೆ ಗತಕಾಲದ ರಾಜವೈಭವ]
ಈತನ ಹಿಂಸೆಯಿಂದ ಬೇಸತ್ತ ಮಹಾರಾಣಿ ಜಂಗಮರ ಸಹಾಯದಿಂದ ಯದುರಾಯ ಮತ್ತು ಕೃಷ್ಣರಾಯರ ಮಧ್ಯೆ ಸಂಧಾನ ನಡೆಸಿ ಅವರ ಸಹಕಾರದಿಂದ ಮಾರನಾಯಕನನ್ನು ಕೊಂದು ಬಳಿಕ ಯದುರಾಯನಿಗೆ ತನ್ನ ಮಗಳು ದೇವಾಜಮ್ಮಣಿಯನ್ನು ಕೊಟ್ಟು ವಿವಾಹ ಮಾಡುವ ಮೂಲಕ ಮೈಸೂರಿನಲ್ಲಿ ಯದುವಂಶದ ಹುಟ್ಟಿಗೆ ಕಾರಣರಾದರು.
ಅಲ್ಲಿಂದ ಮುಂದಕ್ಕೆ 1423ರಿಂದ 1459ರವರೆಗೆ ಒಂದನೇ ಹಿರಿಯ ಬೆಟ್ಟದ ಚಾಮರಾಜ ಒಡೆಯರ್, 1459ರಿಂದ 1478ರವರೆಗೆ ಹಿರಿಯ ಬೆಟ್ಟದ ಚಾಮರಾಜ ಒಡೆಯರ್ ಪುತ್ರ ತಿಮ್ಮರಾಜ ಒಡೆಯರ್ ಆಡಳಿತ ನಡೆಸಿದರೆ, ನಂತರ 1478ರಿಂದ 1513ರವರೆಗೆ ಎರಡನೇ ಹಿರಿಯ ಚಾಮರಾಜ ಒಡೆಯರ್, 1513ರಿಂದ 1553ರವರೆಗೆ ಮೂರನೇ ಹಿರಿಯ ಬೆಟ್ಟದ ಚಾಮರಾಜ ಒಡೆಯರ್ ಆಡಳಿತ ನಡೆಸಿದರು.
1553ರಿಂದ 1572ರವರೆಗೆ ಆಡಳಿತ ನಡೆಸಿದ ಎರಡನೆಯ ತಿಮ್ಮರಾಜ ಒಡೆಯರ್ ಮೈಸೂರನ್ನು ವಿಸ್ತರಿಸಿದರು. ಸುತ್ತಲಿನ ಪಾಳೇಗಾರರನ್ನು ಗೆದ್ದು ಅವರಿಂದ ಆನೆ, ಕುದುರೆ ಮೊದಲಾದವುಗಳನ್ನು ಪಡೆದರಲ್ಲದೆ 'ಬಿರುದೆಂತೆಂಬರ ಗಂಡ' ಎಂಬ ಬಿರುದಿಗೂ ಪಾತ್ರರಾದರು.
-
Train Delay: ರೈಲು ಪ್ರಯಾಣಿಕರೇ ಎಚ್ಚರ! ನಾಳೆ ಬೆಂಗಳೂರು-ಚೆನ್ನೈ ನಡುವಿನ ಸಂಚಾರದಲ್ಲಿ ಭಾರಿ ವ್ಯತ್ಯಯ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ!














Click it and Unblock the Notifications