ಮೈಸೂರಿನ ನೀಲಿಯ ಬಾನಂಗಳದಲ್ಲಿ ಹಾರಾಡಿದ ಹಾವು, ರೈಲು, ಹುಲಿ... !
ಮೈಸೂರು, ಸೆಪ್ಟೆಂಬರ್.30:ಸೂತ್ರದ ಹಿಡಿತದಿಂದ ಬಾನಂಗಳದಲ್ಲಿ ತೇಲಾಡುತ್ತ, ಒದ್ದಾಡುತ್ತ, ನಸು ನಗುತ್ತ, ಮನಸ್ಸಿಗೆ ಮುದ ನೀಡುತ್ತ, ಬಾನು-ಭುವಿಗಳನ್ನು ಅಪ್ಪಿಕೊಳ್ಳಲು ಹಾತೊರೆಯುವ ಗಾಳಿಪಟಗಳ ಚೆಲ್ಲಾಟವೇ ಅದ್ಭುತ.
ಕತ್ತು ಎತ್ತರಿಸಿ ಕಣ್ಣು ಪಿಳುಕಿಸುತ್ತ, ಬಾನಂಗಳದ ಕಡೆ ಅತ್ತಿಂದಿತ್ತ ಕಣ್ಣೋಟ ಹಾಯಿಸುತ್ತ ಸೂರ್ಯನೆದುರಿಸಿ ಗಾಳಿಪಟಗಳನ್ನು ನೋಡುವುದೇ ಒಂದು ಹೊಸ ಲೋಕದಲ್ಲಿ ವಿರಮಿಸಿದಷ್ಟು ಖುಷಿ ನೀಡುವ ಅನುಭವ.
ಚಿಕ್ಕ ಮಕ್ಕಳಷ್ಟೇ ಅಲ್ಲದೆ ಎಲ್ಲ ವಯೋಮಾನದವರನ್ನು ಆಕರ್ಷಿಸುವ ತಾಕತ್ತಿದೆ ಗಾಳಿಪಟಕ್ಕೆ. ಅಂದಹಾಗೆ ಇದೇ ಮೊದಲ ಬಾರಿಗೆ ಮೈಸೂರಿನಲ್ಲಿ ಗಾಳಿಪಟ ಉತ್ಸವ ಶನಿವಾರ (ಸೆ. 29) ಮತ್ತು ಭಾನುವಾರ (ಸೆ. 30) ಆಯೋಜನೆಯಾಗಿದೆ.

ಹೆಲಿಪ್ಯಾಡ್ ನ ವಿಶಾಲ ಮೈದಾನದಲ್ಲಿ ಈ ಉತ್ಸವ ಏರ್ಪಡಿಸಲಾಗಿದ್ದು, ಸಣ್ಣವರಿಂದ ಹಿಡಿದು ವೃದ್ಧರವರೆಗೂ ಗಾಳಿಪಟ ಹಬ್ಬವನ್ನು ಎಂಜಾಯ್ ಮಾಡುತ್ತಿದ್ದಾರೆ.
ರಂಗುರಂಗಿನ ವಿವಿಧ ಕಲ್ಪನೆಗಳಲ್ಲಿ ಸಾಕಾರಗೊಂಡ, ಪಕ್ಷಿ, ಪ್ರಾಣಿಗಳ ಗಾಳಿಪಟಗಳು ಆಕಾಶದಲ್ಲಿ ಹಾರಿ ಹೊಂಗನಸು ಸೃಷ್ಟಿಸಿದವು. ಚಿತ್ತಾರದ ಮೂಲಕ ಮಾಯಾಂಗನೆಯಂತೆ ಕಣ್ಮುಂದೆ ಹಾದುಹೋದವು. ಬಣ್ಣಬಣ್ಣದ ಹಕ್ಕಿಗಳು ಸಾಲಾಗಿ ಹೋಗುವಂತೆ ಕಂಡು ಬರುವ ದೃಶ್ಯಾವಳಿ ಮನಸ್ಸನ್ನು ಪುಳಕಗೊಳಿಸುತ್ತಿದೆ.

ಹಾವು, ರೈಲು, ಹುಲಿ ಸೇರಿದಂತೆ ವಿವಿಧ ಪ್ರಾಣಿಗಳ ಚಿತ್ರಗಳನ್ನು ಹೊಂದಿದ ಗಾಳಿಪಟಗಳು ಆಕಾಶದಲ್ಲಿ ಸದ್ದು ಮಾಡುತ್ತಿವೆ.
ಮಂಗಳೂರು ನೇತೃತ್ವದಲ್ಲಿ ಎರಡು ದಿನಗಳ ಕಾಲ ಗಾಳಿಪಟ ಉತ್ಸವ ನಡೆದಿದ್ದು, ಮುಂಬೈನಿಂದ 4, ಅಹಮದಾಬಾದ್ 6, ಸೂರತ್ 5, ಹೈದರಾಬಾದ್ 3 ಮತ್ತು ಮಂಗಳೂರಿನ 10ಕ್ಕೂ ಹೆಚ್ಚು ವೃತ್ತಿನಿರತ ಕೈಟ್ ಪ್ಲೈಯರ್ಸ್ ಗಳು ಭಾಗವಹಿಸಿದ್ದಾರೆ.

ನೀಲಿಯ ಬಾನಂಗಳದಲ್ಲಿ ಬಿಳಿ ಮೋಡಗಳ ಮಗ್ಗುಲಲ್ಲಿ ಬಹುವರ್ಣ, ವೈವಿಧ್ಯಮಯ ಆಕಾರದ ಕಲರ್, ಕಲರ್ ಗಾಳಿಪಟಗಳು ಸ್ವಚ್ಛಂದವಾಗಿ ವಿಹರಿಸಿ ವೀಕ್ಷಕರ ಮನಸೂರೆಗೊಳಿಸುತ್ತಿವೆ.

ಸುಂದರ ಚಿಟ್ಟೆಗಳಂತೆ ರೂಪುಗೊಂಡ ಗಾಳಿಪಟಗಳು, ಮುಗಿಲಲ್ಲಿ ರೆಕ್ಕೆ ಬೀಸುತ್ತಾ ನರ್ತಿಸುವಂತೆ ಕಾಣುತ್ತಿತ್ತು. ರಾತ್ರಿ ಹೊತ್ತಿನಲ್ಲಿ ಎಲ್ಇಡಿ ಲೈಟ್ ಬಳಸಿ ಹಾರುವ ಪಟಗಳೂ ಗಮನ ಸೆಳೆಯುತ್ತಿರುವುದು ವಿಶೇಷವಾಗಿದೆ.
-
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Price: ದಿಢೀರ್ ಏರಿಕೆ ಕಂಡ ಚಿನ್ನದ ದರ: ಪ್ರತಿ ಗ್ರಾಂಗೆ 14,929 ರೂಪಾಯಿ, ಕೆ.ಜಿಗೆ 2.5 ಲಕ್ಷ ರೂ. ತಲುಪಿದ ಬೆಳ್ಳಿ












Click it and Unblock the Notifications