ತಲಕಾಡು; ಐತಿಹಾಸಿಕ ಪಂಚಲಿಂಗದರ್ಶನದ ವಿಶೇಷತೆಗಳು
ಮೈಸೂರು, ಡಿಸೆಂಬರ್ 10 : ಏಳು ವರ್ಷಗಳ ಬಳಿಕ ನಡೆಯುತ್ತಿರುವ ತಲಕಾಡಿನ ಐತಿಹಾಸಿಕ ಪಂಚಲಿಂಗದರ್ಶನ ಮಹೋತ್ಸವಕ್ಕೆ ಗುರುವಾರ ಸಂಜೆ ಚಾಲನೆ ಸಿಗಲಿದೆ. ಕೋವಿಡ್ ಹಿನ್ನಲೆಯಲ್ಲಿ ಸರಳವಾಗಿ ಕಾರ್ಯಕ್ರಮ ನಡೆಯಲಿದ್ದು, 10 ದಿನಗಳ ಕಾಲ ಪಂಚಲಿಂಗ ದರ್ಶನಕ್ಕೆ ಸ್ಥಳೀಯರಿಗೆ ಮಾತ್ರ ಅವಕಾಶವಿದೆ.
ಗುರುವಾರ ಸಂಜೆ 6 ಗಂಟೆಗೆ ವೈದ್ಯನಾಥೇಶ್ವರ ದೇವಾಲಯದಲ್ಲಿ ದೀಪ ಬೆಳಗುವ ಹಾಗೂ ಸಂಕಲ್ಪ ಪೂಜೆ ಮಾಡುವ ಮೂಲಕ ಪಂಚಲಿಂಗ ದರ್ಶನಕ್ಕೆ ಚಾಲನೆ ನೀಡಲಾಗುತ್ತದೆ. ಪ್ರಧಾನ ಅರ್ಚಕ ಆನಂದ್ ದೀಕ್ಷಿತ್ ನೇತೃತ್ವದಲ್ಲಿ ವಿವಿಧ ಪೂಜೆಗಳು ನಡೆಯಲಿವೆ.
ಮೈಸೂರು ಜಿಲ್ಲೆಯ ತಲಕಾಡಿನ ಪುಣ್ಯಕ್ಷೇತ್ರದಲ್ಲಿ ಪಂಚಲಿಂಗದರ್ಶನ ನಡೆಯಲಿದ್ದು, ಕಾವೇರಿ ನದಿಯಲ್ಲಿ ಪುಣ್ಯಸ್ನಾನ ಮಾಡಿ ಅಲ್ಲಿರುವ ಪಂಚಲಿಂಗಗಳ ದರ್ಶನ ಪಡೆದರೆ ಶಿವಸಾಯುಜ್ಯ ಲಭ್ಯವಾಗಲಿದೆ ಎಂಬ ನಂಬಿಕೆ ಭಕ್ತರಲ್ಲಿದೆ.
ಡಿಸೆಂಬರ್ 14ರಂದು (ಅಮಾವಾಸ್ಯೆ) ಮುಂಜಾನೆ 4.30ಕ್ಕೆ ನಡೆಯಲಿರುವ ವಿಶೇಷ ಪೂಜೆಯಲ್ಲಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಪಾಲ್ಗೊಳ್ಳಲಿದ್ದಾರೆ ಎಂದು ತಲಕಾಡು ದೇವಾಲಯಗಳ ಕಾರ್ಯ ನಿರ್ವಹಣಾಧಿಕಾರಿಗಳು ಹೇಳಿದ್ದಾರೆ.

ಕಾರ್ತಿಕ ಮಾಸದಲ್ಲಿ ಪಂಚಲಿಂಗ ದರ್ಶನ
ಕಾರ್ತೀಕ ಮಾಸದಲ್ಲಿ 5 ಸೋಮವಾರಗಳು ಬಂದು, ಕೊನೆಯ ಸೋಮವಾರ ಅಮಾವಾಸ್ಯೆಯ ಜೊತೆಗೆ ಅನುರಾಧ, ಜೇಷ್ಠಾ ಅಥವಾ ವಿಶಾಖಾ ನಕ್ಷತ್ರಗಳಲ್ಲಿ ಯಾವುದಾದರೂ ಒಂದು ನಕ್ಷತ್ರವಿದ್ದು, ಸೂರ್ಯ ಚಂದ್ರರಿಬ್ಬರೂ ವೃಶ್ಚಿಕ ಲಗ್ನದಲ್ಲಿ ಸೇರಿದಾಗ ಆ ದಿನದ ಉಷಾಃಕಾಲದಲ್ಲಿ ಬರುವ ಪದ್ಮಕ ಯೋಗವು ಅತ್ಯಂತ ಫಲಪ್ರದವಾದ ಪರ್ವಕಾಲವಾಗಿದ್ದು ಈ ವೇಳೆ ಪಂಚಲಿಂಗ ದರ್ಶನಕ್ಕೆ ಪಡೆದರೆ ಪುಣ್ಯ ಬರುತ್ತದೆ ಎಂಬ ನಂಬಿಕೆ ಇದೆ.

10 ತಂಡಗಳು ರಚನೆ
ಕೋವಿಡ್ ಪರಿಸ್ಥಿತಿ ಹಿನ್ನಲೆಯಲ್ಲಿ ಸರಳವಾಗಿ ಪಂಚಲಿಂಗ ದರ್ಶನ ಕಾರ್ಯಕ್ರಮ ನಡೆಯುತ್ತಿದೆ. ಕೋವಿಡ್ ಮಾರ್ಗಸೂಚಿ ಪ್ರಕಾರ ಪ್ರತಿ ದಿನ 1000 ಜನರಿಗೆ ಮಾತ್ರ ಪ್ರವೇಶ. ಪಂಚಲಿಂಗ ದರ್ಶನಕ್ಕೆ ಬರುವವರು ಕಡ್ಡಾಯವಾಗಿ ಕೋವಿಡ್ ನೆಗೆಟಿವ್ ವರದಿ ತರಬೇಕು. ಆರೋಗ್ಯ ಇಲಾಖೆಯಿಂದ ವೈದ್ಯರನ್ನು ಒಳಗೊಂಡ 10 ತಂಡಗಳ ನಿಯೋಜನೆ ಮಾಡಲಾಗಿದೆ. ಎಲ್ಲಾ 5 ದೇವಸ್ಥಾನಗಳ ಬಳಿ ಕೋವಿಡ್ ಪರೀಕ್ಷೆಗೆ ವ್ಯವಸ್ಥೆ ಮಾಡಲಾಗಿದೆ.

ಸಚಿವ ಸೋಮಶೇಖರ್ ಭಾಗಿ
ಪಂಚಲಿಂಗ ದರ್ಶನದ ಭದ್ರತೆಗಾಗಿ 9 ಕಡೆ ಚೆಕ್ ಪೋಸ್ಟ್ ಸ್ಥಾಪನೆ ಮಾಡಲಾಗಿದೆ. ಪಂಚಲಿಂಗ ದರ್ಶನಕ್ಕೆ ಸಂಜೆ ಚಾಲನೆ ಸಿಗಲಿದ್ದು, ಮೈಸೂರು ಜಿಲ್ಲಾ ಉಸ್ತುವಾರಿ ಹಾಗೂ ಸಹಕಾರ ಸಚಿವ ಎಸ್. ಟಿ. ಸೋಮಶೇಖರ್ ಅವರು ಪ್ರಥಮ ದಿನದ ಪೂಜೆಯಲ್ಲಿ ಪಾಲ್ಗೊಳ್ಳಲಿದ್ದಾರೆ.

ಪಂಚಲಿಂಗ ದರ್ಶನ 11 ಬಾರಿ ನಡೆದಿದೆ
ಮೈಸೂರಿನ ತಲಕಾಡಿನಲ್ಲಿ ಇದುವರೆಗೂ 11 ಬಾರಿ ಪಂಚಲಿಂಗ ದರ್ಶನ ಕಾರ್ಯಕ್ರಮ ನಡೆದಿದೆ. ಈ ಬಾರಿ ನಡೆಯುತ್ತಿರುವುದು 12ನೇಯ ದರ್ಶನವಾಗಿದೆ. 1911, 1924, 1938, 1952, 1965, 1979, 1986, 1993, 2006, 2009 ಮತ್ತು 2013ರಲ್ಲಿಈ ಹಿಂದೆ ನಡೆದಿತ್ತು.
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Sanju Samson Father: ಅಂದು ಮಗನನ್ನು ಅಲೆದಾಡಿಸಿದವರು ಇಂದು ಕ್ಷಮೆ ಕೇಳುತ್ತಿದ್ದಾರೆ: ಸಂಜು ಸ್ಯಾಮ್ಸನ್ ತಂದೆಯ ಭಾವುಕ ನುಡಿ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ












Click it and Unblock the Notifications