ಅವತ್ತು ಮೈಸೂರು ಅರಮನೆಯಲ್ಲಿ ಏನಾಗಿತ್ತು ಗೊತ್ತಾ?
ಮೈಸೂರು, ಜೂನ್ 25 : ವಿಶ್ವದ ಗಮನಸೆಳೆದಿರುವ ಮೈಸೂರು ಅರಮನೆಗೆ ಶತಮಾನದ ಇತಿಹಾಸವಿದೆ. ಆದರೆ, ಇದಕ್ಕೂ ಹಿಂದೆ ಇಲ್ಲಿದ್ದ ಹಳೆಯ ಅರಮನೆಯ ಬಗ್ಗೆ ಮತ್ತು ಅದು ಹೇಗೆ ನಾಶವಾಯಿತು? ಎಂಬುವುದರ ಬಗ್ಗೆ ಹೆಚ್ಚಿನವರಿಗೆ ತಿಳಿದಿರಲಿಕ್ಕಿಲ್ಲ.
ಹಳೆಯ ಅರಮನೆಯನ್ನು 1800 ರಿಂದ 1804ರ ಅವಧಿಯಲ್ಲ್ಲಿ ಕಟ್ಟಲಾಗಿತ್ತು. ಈ ಅರಮನೆಯು ಕಟ್ಟಿಗೆ ಹಾಗೂ ಇಟ್ಟಿಗೆಗಳಿಂದ ನಿರ್ಮಾಣವಾಗಿದ್ದರಿಂದ ಆಕರ್ಷಕವಾಗಿದ್ದರೂ ಸುರಕ್ಷಿತವಾಗಿರಲಿಲ್ಲ. ಹೀಗಾಗಿ ಅದು ಬೆಂಕಿಗೆ ಆಹುತಿಯಾಯಿತು. ಆದರೆ, ಬೆಂಕಿಗೆ ಹೇಗೆ ಆಹುತಿಯಾಯಿತು? ಎಂಬುದು ತಿಳಿದರೆ ಅಚ್ಚರಿಯಾಗಬಹುದು. [ಯದುವೀರ್, ಒಂದು ಪರಿಚಯ]

1897 ಫೆಬ್ರವರಿ 28ರಂದು ಚಾಮರಾಜೇಂದ್ರ ಒಡೆಯರ್ ಮತ್ತು ವಾಣಿವಿಲಾಸ ಸನ್ನಿಧಾನದವರ ಹಿರಿಯ ಪುತ್ರಿ ಜಯಲಕ್ಷ್ಮಮ್ಮಣ್ಣಿಯವರ ವಿವಾಹ ಸರ್ದಾರ್ ಕಾಂತರಾಜೇ ಅರಸ್ ಅವರೊಂದಿಗೆ ಜರುಗಿದಾಗ ಜಯಲಕ್ಷ್ಮಮ್ಮಣ್ಣಿಯವರ ಕೂದಲಿಗೆ ಸಾಂಬ್ರಾಣಿ ಹೊಗೆ ಕೊಡುವ ಸಂದರ್ಭ ಕೆಂಡವೊಂದು ಕೆಳಗೆ ಬಿದ್ದು ತೇಗದ ಮರಕ್ಕೆ ಬೆಂಕಿ ಹತ್ತಿಕೊಂಡು ಉರಿಯತೊಡಗಿತ್ತು. [40 ವರ್ಷ ಬಳಿಕ ಅರಮನೆಯಲ್ಲಿ ವಿವಾಹ ಸಂಭ್ರಮ!]
ಈ ಬೆಂಕಿಯನ್ನು ಸುಮಾರು 8000 ಮಂದಿ ಸೇರಿ ನಂದಿಸಲು ಪ್ರಯತ್ನಿಸಿದರಾದರೂ ಸಂಪೂರ್ಣವಾಗಿ ನಂದಿಸಲು ಸಾಧ್ಯವಾಗಲಿಲ್ಲ. ಆದರೆ, ಅರಮನೆಯಲ್ಲಿದ್ದ ರಾಜವಂಶಸ್ಥರನ್ನು ಯಾವುದೇ ಪ್ರಾಣಾಪಾಯವಾಗದಂತೆ ಕಾಪಾಡಲಾಗಿತ್ತು. ಬಳಿಕ ರಾಜವಂಶಸ್ಥರು ಸಮೀಪದ ಜಗನ್ಮೋಹನ ಅರಮನೆಯಲ್ಲಿ ವಾಸ್ತವ್ಯ ಹೂಡಿದ್ದರು.[ಯದುವೀರ್ - ತ್ರಿಷಿಕಾ ಮದುವೆ ಚಿತ್ರಗಳು]

ಬೆಂಕಿ ಅನಾಹುತದಿಂದ ಅರಮನೆ ನಾಶವಾದ ಬಳಿಕ ಹೊಸ ಅರಮನೆಯನ್ನು ಬೆಂಕಿ ಆಕಸ್ಮಿಕ ಸಂಭವಿಸಿದರೂ ಏನೂ ಆಗದ ರೀತಿಯಲ್ಲಿ ಹೊಸ ಮಾದರಿಯಲ್ಲಿ ನಿರ್ಮಿಸಲು ತೀರ್ಮಾನಿಸಲಾಯಿತು. ಆಗ ನಿರ್ಮಾಣವಾದ ಅರಮನೆಯೇ ಈಗಿನ ಜಗಮಗಿಸುವ ಭವ್ಯ ಅರಮನೆ.[ಅರಮನೆಯಲ್ಲಿ ಯದುವೀರ್ ವಿವಾಹ ಸಂಭ್ರಮ ಆರಂಭ]
-
Sachin Tendulkar: ಅಭಿಷೇಕ್ ಶರ್ಮಾಗೆ ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ವಿಶೇಷ ಸಂದೇಶ -
Bengaluru Home: ಬೆಂಗಳೂರಲ್ಲಿ ಸ್ವಂತ ಮನೆಯ ಕನಸು ಕಾಣುತ್ತಿರುವವರಿಗೆ ಜಿಬಿಎ ಗುಡ್ನ್ಯೂಸ್: ಒಂಟಿ ಮನೆ ಯೋಜನೆ ಅಪ್ಡೇಟ್ಸ್ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Suryakumar Yadav: ಮೀಟರ್ ಇದ್ರೆ ಮೈದಾನದಲ್ಲಿ ಅಭಿಮಾನಿಗಳ ಬಾಯಿ ಮುಚ್ಚಿಸಿ: ಮಿಚೆಲ್ ಸ್ಯಾಂಟ್ನರ್ಗೆ ಸೂರ್ಯ ಸವಾಲು -
ಟೀಕೆಗಳು ಸಾಯುತ್ತವೆ, ಕೆಲಸಗಳು ಉಳಿಯುತ್ತವೆ ಎಂಬ ಮಾತಿನಂತೆ ನಡೆದುಕೊಂಡ ಯುವರಾಜ್ ಸಿಂಗ್ ಶಿಶ್ಯ ಅಭಿಷೇಕ್ ಶರ್ಮಾ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
"ಬೆಂಗಳೂರು ಮಲಯಾಳಿಗರ ಹಬ್" ಎಂದ ಕೇರಳಿಗರು, ವೈರಲ್ ವಿಡಿಯೋ ನೋಡಿ ಕಣ್ಣು ಕೆಂಪಾಗಿಸಿದ ಕನ್ನಡಿಗರು -
Bengaluru Property: ಬೆಂಗಳೂರಿನ 510 ಕೋಟಿ ಮೌಲ್ಯದ 14 ಎಕರೆ ಭೂಮಿ ವಶಕ್ಕೆ ಪಡೆದ ಜಿಬಿಎ, ಕಾರಣವೇನು -
Jaggery: ಬೆಲ್ಲದಲ್ಲಿ ಕಲಬೆರಕೆಯ ಕೆಮಿಕಲ್, ಬಣ್ಣ, ಸಕ್ಕರೆ ಮಿಶ್ರಣ: ಪರಿಶೀಲನೆ ಮಾಡುವ ಸರಳ ವಿಧಾನಗಳು -
ಟಿ20 ವಿಶ್ವಕಪ್ 2026 ಭಾರತದ ಮುಡಿಗೆ: ಬಾಲ ಮುದುರಿಕೊಂಡ 'ಸೈಲೆಂಟ್' ಸ್ಯಾಂಟ್ನರ್












Click it and Unblock the Notifications