ಅವತ್ತು ಮೈಸೂರು ಅರಮನೆಯಲ್ಲಿ ಏನಾಗಿತ್ತು ಗೊತ್ತಾ?
ಮೈಸೂರು, ಜೂನ್ 25 : ವಿಶ್ವದ ಗಮನಸೆಳೆದಿರುವ ಮೈಸೂರು ಅರಮನೆಗೆ ಶತಮಾನದ ಇತಿಹಾಸವಿದೆ. ಆದರೆ, ಇದಕ್ಕೂ ಹಿಂದೆ ಇಲ್ಲಿದ್ದ ಹಳೆಯ ಅರಮನೆಯ ಬಗ್ಗೆ ಮತ್ತು ಅದು ಹೇಗೆ ನಾಶವಾಯಿತು? ಎಂಬುವುದರ ಬಗ್ಗೆ ಹೆಚ್ಚಿನವರಿಗೆ ತಿಳಿದಿರಲಿಕ್ಕಿಲ್ಲ.
ಹಳೆಯ ಅರಮನೆಯನ್ನು 1800 ರಿಂದ 1804ರ ಅವಧಿಯಲ್ಲ್ಲಿ ಕಟ್ಟಲಾಗಿತ್ತು. ಈ ಅರಮನೆಯು ಕಟ್ಟಿಗೆ ಹಾಗೂ ಇಟ್ಟಿಗೆಗಳಿಂದ ನಿರ್ಮಾಣವಾಗಿದ್ದರಿಂದ ಆಕರ್ಷಕವಾಗಿದ್ದರೂ ಸುರಕ್ಷಿತವಾಗಿರಲಿಲ್ಲ. ಹೀಗಾಗಿ ಅದು ಬೆಂಕಿಗೆ ಆಹುತಿಯಾಯಿತು. ಆದರೆ, ಬೆಂಕಿಗೆ ಹೇಗೆ ಆಹುತಿಯಾಯಿತು? ಎಂಬುದು ತಿಳಿದರೆ ಅಚ್ಚರಿಯಾಗಬಹುದು. [ಯದುವೀರ್, ಒಂದು ಪರಿಚಯ]

1897 ಫೆಬ್ರವರಿ 28ರಂದು ಚಾಮರಾಜೇಂದ್ರ ಒಡೆಯರ್ ಮತ್ತು ವಾಣಿವಿಲಾಸ ಸನ್ನಿಧಾನದವರ ಹಿರಿಯ ಪುತ್ರಿ ಜಯಲಕ್ಷ್ಮಮ್ಮಣ್ಣಿಯವರ ವಿವಾಹ ಸರ್ದಾರ್ ಕಾಂತರಾಜೇ ಅರಸ್ ಅವರೊಂದಿಗೆ ಜರುಗಿದಾಗ ಜಯಲಕ್ಷ್ಮಮ್ಮಣ್ಣಿಯವರ ಕೂದಲಿಗೆ ಸಾಂಬ್ರಾಣಿ ಹೊಗೆ ಕೊಡುವ ಸಂದರ್ಭ ಕೆಂಡವೊಂದು ಕೆಳಗೆ ಬಿದ್ದು ತೇಗದ ಮರಕ್ಕೆ ಬೆಂಕಿ ಹತ್ತಿಕೊಂಡು ಉರಿಯತೊಡಗಿತ್ತು. [40 ವರ್ಷ ಬಳಿಕ ಅರಮನೆಯಲ್ಲಿ ವಿವಾಹ ಸಂಭ್ರಮ!]
ಈ ಬೆಂಕಿಯನ್ನು ಸುಮಾರು 8000 ಮಂದಿ ಸೇರಿ ನಂದಿಸಲು ಪ್ರಯತ್ನಿಸಿದರಾದರೂ ಸಂಪೂರ್ಣವಾಗಿ ನಂದಿಸಲು ಸಾಧ್ಯವಾಗಲಿಲ್ಲ. ಆದರೆ, ಅರಮನೆಯಲ್ಲಿದ್ದ ರಾಜವಂಶಸ್ಥರನ್ನು ಯಾವುದೇ ಪ್ರಾಣಾಪಾಯವಾಗದಂತೆ ಕಾಪಾಡಲಾಗಿತ್ತು. ಬಳಿಕ ರಾಜವಂಶಸ್ಥರು ಸಮೀಪದ ಜಗನ್ಮೋಹನ ಅರಮನೆಯಲ್ಲಿ ವಾಸ್ತವ್ಯ ಹೂಡಿದ್ದರು.[ಯದುವೀರ್ - ತ್ರಿಷಿಕಾ ಮದುವೆ ಚಿತ್ರಗಳು]

ಬೆಂಕಿ ಅನಾಹುತದಿಂದ ಅರಮನೆ ನಾಶವಾದ ಬಳಿಕ ಹೊಸ ಅರಮನೆಯನ್ನು ಬೆಂಕಿ ಆಕಸ್ಮಿಕ ಸಂಭವಿಸಿದರೂ ಏನೂ ಆಗದ ರೀತಿಯಲ್ಲಿ ಹೊಸ ಮಾದರಿಯಲ್ಲಿ ನಿರ್ಮಿಸಲು ತೀರ್ಮಾನಿಸಲಾಯಿತು. ಆಗ ನಿರ್ಮಾಣವಾದ ಅರಮನೆಯೇ ಈಗಿನ ಜಗಮಗಿಸುವ ಭವ್ಯ ಅರಮನೆ.[ಅರಮನೆಯಲ್ಲಿ ಯದುವೀರ್ ವಿವಾಹ ಸಂಭ್ರಮ ಆರಂಭ]
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications