ಮೈಸೂರು ಅರಮನೆ ಫೋಟೋಶೂಟ್ ವಿವಾದ : ಏನು, ಎತ್ತ?
ಮೈಸೂರು, ಮೇ.26 : ಯುವರಾಜ ಯದುವೀರ ಅರಸ್ ವಿವಾಹಕ್ಕೂ ಮುನ್ನವೇ ಮೈಸೂರು ಅರಮನೆ ಸುದ್ದಿಯಲ್ಲಿದೆ. ಇದಕ್ಕೆ ಕಾರಣವಾಗಿರುವುದು ಯುವ ಜೋಡಿಗಳ ಫೋಟೋ ಶೂಟ್. ಗುರುವಾರ ಸಾಮಾಜಿಕ ತಾಣಗಳಲ್ಲಿ, ಟಿವಿ ವಾಹಿನಿಗಳಲ್ಲಿ ಮೈಸೂರು ಅರಮನೆಯದ್ದೇ ಸುದ್ದಿ.
ಮೈಸೂರು ಅರಮನೆ ಕೇವಲ ರಾಜಮನೆತನಕ್ಕೆ ಸೇರಿದ್ದಲ್ಲ. ಅದು ಕನ್ನಡಿಗರ ಸ್ವತ್ತು ಎಂದೇ ಕನ್ನಡಿಗರು ಪರಿಭಾವಿಸಿದ್ದಾರೆ. ಇಂಥ ವೇಳೆ ಈ ಬಗೆಯ ಫೋಟೋ ಶೂಟ್ ನಡೆದಿದ್ದು ಯುವ ಜೋಡಿಗಳು ಕೈ ಕೈ ಹಿಡಿದು ಓಡಾಡಿರುವುದು ನಾಗರಿಕರ ಆಕ್ರೋಶಕ್ಕೆ ಕಾರಣವಾಗಿದೆ. [ಜೂನ್ 27ಕ್ಕೆ ಯದುವೀರ್ ಒಡೆಯರ್ ವಿವಾಹ]

ಏಪ್ರಿಲ್ ನಲ್ಲಿ ವಿಡಿಯೋವನ್ನು ಯೂಟ್ಯೂಬ್ ಗೆ ಅಪ್ ಲೋಡ್ ಮಾಡಲಾಗಿದ್ದು ಈಗ ಸುದ್ದಿ ಮಾಡುತ್ತಿದೆ. 2016 ಫೆಬ್ರುವರಿ 27, 28ರಂದು ನಡೆದ ಆದಿತ್ಯ-ನವ್ಯಾ ವಿವಾಹ ಕಾರ್ಯಕ್ರಮದ ವೇಳೆ ತೆಗೆದ ವಿಡಿಯೋ ಇದಾಗಿದೆ. ಬೆಂಗಳೂರು ನಿವಾಸಿ ಆದಿತ್ಯ ಲಂಡನ್ ನ ನ್ಯಾಟಿಂಗ್ಯಾಮ್ ವಿವಿಯಲ್ಲಿ ಎಂಎಸ್ಸಿ ಪದವಿ ಪಡೆದಿದ್ದಾರೆ ಎಂದು ಹೇಳಲಾಗಿದೆ. [ಯುವರಾಣಿ ತ್ರಿಷಿಕಾ ಕಾಣದೆ ನಿರಾಶರಾದ ಜನ]
ನಮಗೆ ಗೊತ್ತಿಲ್ಲ : 'ಫೋಟೋ ಶೂಟ್ ಬಗ್ಗೆ ನಮಗೆ ಗೊತ್ತಿಲ್ಲ. ಅರಮನೆಯಲ್ಲಿ ಭದ್ರತೆ ಇದ್ದರೂ ಹೇಗೆ ಫೋಟೋ ಮಾಡಿದ್ದಾರೆ ಎಂಬುದು ತಿಳಿದಿಲ್ಲ. ನಾವೇ ಎಂದೂ ಈ ಬಗೆಯಾಗಿ ಫೋಟೋ ತೆಗೆಸಿಕೊಂಡಿಲ್ಲ. ಇದು ಹೇಗೆ ಮಾಡಿದ್ದಾರೆ? ಎಂಬುದನ್ನು ತನಿಖೆ ಮಾಡುತ್ತೇವೆ' ಎಂದು ರಾಣಿ ಪ್ರಮೋದಾ ದೇವಿ ಅವರು ವಿವಾದದ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ.
ಮೈಸೂರು ಅಂಬಾ ವಿಲಾಸ ಅರಮನೆಯ ದರ್ಬಾರ್ ಹಾಲ್, ಖಾಸಗಿ ಹಾಲ್, ಕಲ್ಯಾಣ ಮಂಟಪಗಳಲ್ಲಿ ಚಿತ್ರೀಕರಣ ಮಾಡಿರುವುದು ಚರ್ಚೆಯ ವಿಷಯವಾಗಿ ಮಾರ್ಪಟ್ಟಿದೆ. ಸಿನಿಮಾಗಳ ಶೂಟಿಂಗ್ ಗೂ ಸಹ ಕೇಳಲಾಗಿದ್ದರೂ ಅವಕಾಶ ಸಿಕ್ಕಿರಲಿಲ್ಲ. ಆದರೆ ಇದೀಗ ಫೋಟೋ ಶೂಟ್ ಗೆ ಅವಕಾಶ ಸಿಕ್ಕಿದ್ದಾದರೂ ಹೇಗೆ ಎಂಬ ಪ್ರಶ್ನೆ ಎಲ್ಲರನ್ನೂ ಕಾಡುತ್ತಿದೆ.
-
Gold Rate Today: ಕರ್ನಾಟಕದ ಬೆಂಗಳೂರಿನಲ್ಲಿ ಬಂಗಾರ ದರ ಇಳಿಕೆ: ಇಲ್ಲಿದೆ ಮಾರ್ಚ್ 6ರ ದರಪಟ್ಟಿ -
Oil Import: ತೈಲ ಆಮದಿಗೆ ವಿದೇಶಗಳ ಅನುಮತಿ ಬೇಕಿಲ್ಲ: ಭಾರತದ ಸ್ವತಂತ್ರ ಇಂಧನ ನೀತಿ ಹೊಂದಿದೆ -
ಬೆಂಗಳೂರಿನಲ್ಲಿ 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ: ಬಜೆಟ್ನಲ್ಲಿ ಹೊಸ ಸುದ್ದಿ ಕೊಟ್ಟ ಸಿಎಂ ಸಿದ್ದರಾಮಯ್ಯ -
Jacob Bethell: ಟೀಂ ಇಂಡಿಯಾ ವಿರುದ್ಧ ಸೋತರೂ ಕನ್ನಡಿಗರ ಮನಗೆದ್ದ 22 ವರ್ಷದ ಜೇಕಬ್ ಬೆಥೆಲ್ -
ರಕ್ಷಿತ್ ಶೆಟ್ಟಿ ಪೋಸ್ಟ್ ವೈರಲ್, ರಶ್ಮಿಕಾ ಮಂದಣ್ಣ ಬಗ್ಗೆ ಚರ್ಚೆ ಶುರು... Rashmika Mandanna -
ಸಂಜು ನಿಜವಾದ ಮ್ಯಾಚ್ ವಿನ್ನರ್, ವಿಶ್ವದ ನಂ.1 ಟಿ20 ಬ್ಯಾಟರ್ ಅಭಿಷೇಕ್ ಮೇಲೆ ನಂಬಿಕೆಯಿಡಿ: ರವಿಶಾಸ್ತ್ರಿ ಮಹತ್ವದ ಸಲಹೆ -
ಮೊಟ್ಟೆ ಬೆಲೆ ಭಾರಿ ಕುಸಿತ, ಕೋಟಿ ಕೋಟಿ ರೂಪಾಯಿ ಕಳೆದುಕೊಳ್ಳುತ್ತಿರುವ ರೈತರು... Operation Roaring Lion -
Horoscope March 7: ಉದ್ಯೋಗದಲ್ಲಿ ಉತ್ತಮ ಬದಲಾವಣೆ, ದಾಂಪತ್ಯದಲ್ಲಿ ಸಿಹಿ ಅಲೆ, ದಿನ ಭವಿಷ್ಯ -
ಕರ್ನಾಟಕ ಬಜೆಟ್ 2026: ನಮ್ಮ ಮೆಟ್ರೋ 41 ಕಿ.ಮೀ ಹೆಚ್ಚುವರಿ ಮಾರ್ಗ ಶೀಘ್ರವಾಗಿ ಪೂರ್ಣ -
Ration card: ರಾಜ್ಯದಲ್ಲಿ ಪಡಿತರಚೀಟಿ ತಿದ್ದುಪಡಿಗೆ ಮತ್ತೆ ಅವಕಾಶ -
Karnataka Budget 2026 PDF: ಕರ್ನಾಟಕ ಬಜೆಟ್ 2026-27 ಪಿಡಿಎಫ್ ಡಾಕ್ಯುಮೆಂಟ್ ಇಲ್ಲಿ ಡೌನ್ಲೋಡ್ ಮಾಡಿ -
ಕನ್ನಡ ನಾಡಿನ ಪ್ರತಿಭೆಗಳ ಸಾಧನೆ, ಯುಪಿಎಸ್ಸಿ ಟಾಪರ್ಸ್ ಮಾಹಿತಿ ತಿಳಿಯಿರಿ | UPSC Toppers












Click it and Unblock the Notifications