ಮೈಸೂರು ಅರಮನೆ ಫೋಟೋಶೂಟ್ ವಿವಾದ : ಏನು, ಎತ್ತ?
ಮೈಸೂರು, ಮೇ.26 : ಯುವರಾಜ ಯದುವೀರ ಅರಸ್ ವಿವಾಹಕ್ಕೂ ಮುನ್ನವೇ ಮೈಸೂರು ಅರಮನೆ ಸುದ್ದಿಯಲ್ಲಿದೆ. ಇದಕ್ಕೆ ಕಾರಣವಾಗಿರುವುದು ಯುವ ಜೋಡಿಗಳ ಫೋಟೋ ಶೂಟ್. ಗುರುವಾರ ಸಾಮಾಜಿಕ ತಾಣಗಳಲ್ಲಿ, ಟಿವಿ ವಾಹಿನಿಗಳಲ್ಲಿ ಮೈಸೂರು ಅರಮನೆಯದ್ದೇ ಸುದ್ದಿ.
ಮೈಸೂರು ಅರಮನೆ ಕೇವಲ ರಾಜಮನೆತನಕ್ಕೆ ಸೇರಿದ್ದಲ್ಲ. ಅದು ಕನ್ನಡಿಗರ ಸ್ವತ್ತು ಎಂದೇ ಕನ್ನಡಿಗರು ಪರಿಭಾವಿಸಿದ್ದಾರೆ. ಇಂಥ ವೇಳೆ ಈ ಬಗೆಯ ಫೋಟೋ ಶೂಟ್ ನಡೆದಿದ್ದು ಯುವ ಜೋಡಿಗಳು ಕೈ ಕೈ ಹಿಡಿದು ಓಡಾಡಿರುವುದು ನಾಗರಿಕರ ಆಕ್ರೋಶಕ್ಕೆ ಕಾರಣವಾಗಿದೆ. [ಜೂನ್ 27ಕ್ಕೆ ಯದುವೀರ್ ಒಡೆಯರ್ ವಿವಾಹ]

ಏಪ್ರಿಲ್ ನಲ್ಲಿ ವಿಡಿಯೋವನ್ನು ಯೂಟ್ಯೂಬ್ ಗೆ ಅಪ್ ಲೋಡ್ ಮಾಡಲಾಗಿದ್ದು ಈಗ ಸುದ್ದಿ ಮಾಡುತ್ತಿದೆ. 2016 ಫೆಬ್ರುವರಿ 27, 28ರಂದು ನಡೆದ ಆದಿತ್ಯ-ನವ್ಯಾ ವಿವಾಹ ಕಾರ್ಯಕ್ರಮದ ವೇಳೆ ತೆಗೆದ ವಿಡಿಯೋ ಇದಾಗಿದೆ. ಬೆಂಗಳೂರು ನಿವಾಸಿ ಆದಿತ್ಯ ಲಂಡನ್ ನ ನ್ಯಾಟಿಂಗ್ಯಾಮ್ ವಿವಿಯಲ್ಲಿ ಎಂಎಸ್ಸಿ ಪದವಿ ಪಡೆದಿದ್ದಾರೆ ಎಂದು ಹೇಳಲಾಗಿದೆ. [ಯುವರಾಣಿ ತ್ರಿಷಿಕಾ ಕಾಣದೆ ನಿರಾಶರಾದ ಜನ]
ನಮಗೆ ಗೊತ್ತಿಲ್ಲ : 'ಫೋಟೋ ಶೂಟ್ ಬಗ್ಗೆ ನಮಗೆ ಗೊತ್ತಿಲ್ಲ. ಅರಮನೆಯಲ್ಲಿ ಭದ್ರತೆ ಇದ್ದರೂ ಹೇಗೆ ಫೋಟೋ ಮಾಡಿದ್ದಾರೆ ಎಂಬುದು ತಿಳಿದಿಲ್ಲ. ನಾವೇ ಎಂದೂ ಈ ಬಗೆಯಾಗಿ ಫೋಟೋ ತೆಗೆಸಿಕೊಂಡಿಲ್ಲ. ಇದು ಹೇಗೆ ಮಾಡಿದ್ದಾರೆ? ಎಂಬುದನ್ನು ತನಿಖೆ ಮಾಡುತ್ತೇವೆ' ಎಂದು ರಾಣಿ ಪ್ರಮೋದಾ ದೇವಿ ಅವರು ವಿವಾದದ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆ.
ಮೈಸೂರು ಅಂಬಾ ವಿಲಾಸ ಅರಮನೆಯ ದರ್ಬಾರ್ ಹಾಲ್, ಖಾಸಗಿ ಹಾಲ್, ಕಲ್ಯಾಣ ಮಂಟಪಗಳಲ್ಲಿ ಚಿತ್ರೀಕರಣ ಮಾಡಿರುವುದು ಚರ್ಚೆಯ ವಿಷಯವಾಗಿ ಮಾರ್ಪಟ್ಟಿದೆ. ಸಿನಿಮಾಗಳ ಶೂಟಿಂಗ್ ಗೂ ಸಹ ಕೇಳಲಾಗಿದ್ದರೂ ಅವಕಾಶ ಸಿಕ್ಕಿರಲಿಲ್ಲ. ಆದರೆ ಇದೀಗ ಫೋಟೋ ಶೂಟ್ ಗೆ ಅವಕಾಶ ಸಿಕ್ಕಿದ್ದಾದರೂ ಹೇಗೆ ಎಂಬ ಪ್ರಶ್ನೆ ಎಲ್ಲರನ್ನೂ ಕಾಡುತ್ತಿದೆ.
-
ಪೆಟ್ರೋಲ್ ಬದಲು ಎಥೆನಾಲ್ ಬ್ಲೆಂಡಿಂಗ್ ಮ್ಯಾಜಿಕ್; ಸಂಕಷ್ಟದಲ್ಲಿ ಭಾರತಕ್ಕೆ ನೆರವಾದ ಮೋದಿ ಮಾಸ್ಟರ್ ಪ್ಲ್ಯಾನ್: ಕೃಷ್ಣ ಭಟ್ ಬರಹ -
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ. -
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
ಬೆಂಗಳೂರು-ಅರಸೀಕೆರೆ ನಡುವೆ ನೂತನ ಮೆಮು ರೈಲು ಸೇವೆ: ಈಡೇರಿತು ಪ್ರಯಾಣಿಕರ ಬಹುದಿನದ ಬೇಡಿಕೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
IPL ಐಪಿಎಲ್ ಫ್ರೀ ಟಿಕೆಟ್ ವಿವಾದ: ವೆಂಕಟೇಶ್ ಪ್ರಸಾದ್ – ಸಿದ್ದರಾಮಯ್ಯ ಭೇಟಿ ಫೋಟೋಗೆ ತೇಜಸ್ವಿ ಸೂರ್ಯ ಕೆಂಡ -
Pratham: ನಟ ಪ್ರಥಮ್ ಬೆಂಗಳೂರು ತೊರೆಯಲು ದರ್ಶನ್ ಅಭಿಮಾನಿಗಳ ಗಲಾಟೆ ಕಾರಣವೇ? ಅಸಲಿ ಕಾರಣ ಬಿಚ್ಚಿಟ್ಟ ಒಳ್ಳೆ ಹುಡುಗ












Click it and Unblock the Notifications