Dwarakish: ವಿಧಾನಸಭಾ ಚುನಾವಣೆಗೆ ಸ್ಪರ್ಧಿಸಿದ್ದ ದ್ವಾರಕೀಶ್ ಪಡೆದಿದ್ದ ಮತಗಳೆಷ್ಟು?
ಕನ್ನಡ ಚಿತ್ರರಂಗ ಕಂಡ ಅಪ್ರತಿಮ ಪ್ರತಿಭೆ, ಕರುನಾಡ ಕುಳ್ಳ ಎಂದೇ ಖ್ಯಾತರಾದ ಹಿರಿಯ ನಟ ದ್ವಾರಕೀಶ್ ನಿಧನರಾಗಿದ್ದು, ಕನ್ನಡ ಚಿತ್ರರಂಗದ ಮೇರು ಪ್ರತಿಭೆಯೊಂದನ್ನು ಕಳೆದುಕೊಂಡಿದೆ. ದ್ವಾರಕೀಶ್ ಮೈಸೂರಿನ ಪ್ರತಿಭೆ ಎಂಬುದೇ ಹೆಮ್ಮೆಯ ಸಂಗತಿಯಾಗಿದೆ.
ದ್ವಾರಕೀಶ್ ಅವರು ಮೈಸೂರಿನ ಇಟ್ಟಿಗೂಡಿನಲ್ಲಿ ವಾಸವಿದ್ದರು. ಹುಣಸೂರಿನಲ್ಲಿ 1942ರ ಆಗಸ್ಟ್ 19ರಂದು ಶಾಮರಾವ್-ಜಯಮ್ಮ ದಂಪತಿಗೆ ಮಗನಾಗಿ ದ್ವಾರಕೀಶ್ ಜನಿಸಿದರು. ಮೈಸೂರಿನ ಬನುಮಯ್ಯ ಮತ್ತು ಶಾರದಾ ವಿಲಾಸ ಶಾಲೆಯಲ್ಲಿ ದ್ವಾರಕೀಶ್ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಪೂರ್ಣಗೊಳಿಸಿದರು.

ಬಳಿಕ ಸಿಪಿಸಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಮೆಕ್ಯಾನಿಕಲ್ ಎಂಜಿನಿಯರಿಂಗ್ ಡಿಪ್ಲೊಮಾ ಕೋರ್ಸ್ ಪೂರೈಸಿದರು. ನಗರದ ಪ್ರಭಾ ಟಾಕೀಸ್ ಬಳಿ ದ್ವಾರಕೀಶ್ ಅವರ ಅಣ್ಣ ಭಾರತ್ ಆಟೋ ಸ್ಪೇರ್ ಸ್ಟೋರ್ ಪ್ರಾರಂಭಿಸಿದ್ದರು. ಅದರಲ್ಲಿ ದ್ವಾರಕೀಶ್ ಕೂಡ ಕೆಲಸ ಮಾಡಿದ್ದಾರೆ.
ಬಾಲ್ಯದಿಂದಲೂ ದ್ವಾರಕೀಶ್ ಅವರಲ್ಲಿ ಸಿನಿಮಾ ಆಸಕ್ತಿ ಹೆಚ್ಚಿತ್ತು. ಸೋದರಮಾವ ಹುಣಸೂರು ಕೃಷ್ಣಮೂರ್ತಿ ಅವರಿಗೆ ಚಿತ್ರರಂಗಕ್ಕೆ ಹೋಗಲು ಸಹಕರಿಸುವಂತೆ ದುಂಬಾಲು ಬಿದ್ದರು. ಮುಂದೆ ಅವರು ಸಿ.ವಿ.ಶಂಕರ್ ನಿರ್ದೇಶನದಲ್ಲಿ 'ವೀರಸಂಕಲ್ಪ' ಚಿತ್ರದಲ್ಲಿ ದ್ವಾರಕೀಶ್ ಅವರಿಗೆ ಮೊದಲ ಅವಕಾಶ ಒಲಿಯುವಂತೆ ಮಾಡಿದರು.
ಚುನಾವಣೆಯಲ್ಲಿ ಸೋಲು
ರಾಜಕೀಯದ ಬಗ್ಗೆಯೂ ಆಸಕ್ತಿ ಹೊಂದಿದ್ದ ದ್ವಾರಕೀಶ್, 2004ರಲ್ಲಿ ವಿಜಯ ಸಂಕೇಶ್ವರ ಅವರು ಕಟ್ಟಿದ್ದ 'ಕನ್ನಡ ನಾಡು' ಪಾರ್ಟಿಯ ಸಂಘಟನೆಯಲ್ಲಿ ತೊಡಗಿಸಿಕೊಂಡಿದ್ದರು. 2004ರ ವಿಧಾನಸಭಾ ಚುನಾವಣೆಯಲ್ಲಿ ಹುಣಸೂರು ಕ್ಷೇತ್ರದಿಂದ ಕನ್ನಡ ನಾಡು ಪಾರ್ಟಿ ಅಭ್ಯರ್ಥಿಯಾಗಿ ಸ್ಪರ್ಧಿಸಿದ್ದರು. ಆದರೆ, ಜೆಡಿಎಸ್ನ ಜಿ.ಟಿ.ದೇವೇಗೌಡ ಅವರು 60,258 ಮತಗಳನ್ನು ಪಡೆದು ಗೆಲುವು ಸಾಧಿಸಿದರೆ, ದ್ವಾರಕೀಶ್ 2,265 ಮತಗಳನ್ನು ಪಡೆದು ಸೋಲು ಕಂಡಿದ್ದರು.
ದ್ವಾರಕೀಶ್ ಅವರ ಬಾಲ್ಯದ ಸ್ನೇಹಿತ, ಹಿರಿಯ ರಂಗಕರ್ಮಿ ರಾಜಶೇಖರ ಕದಂಬ ಅವರು ದ್ವಾರಕೀಶ್ ಅವರೊಂದಿಗಿನ ಒಡನಾಟವನ್ನು ಹಂಚಿಕೊಂಡಿದ್ದಾರೆ. "ಶಾಲಾ, ಕಾಲೇಜು ದಿನಗಳಲ್ಲಿ ದ್ವಾರಕೀಶ್ ರಂಗಭೂಮಿಯೊಂದಿಗೆ ನಂಟು ಬೆಳೆಸಿಕೊಳ್ಳದೆ ಇದ್ದರೂ ಅವರಲ್ಲಿ ಅದ್ಭುತವಾದ ನಟ ಇದ್ದ. ನಾನು ದ್ವಾರಕೀಶ್ ಬಾಲ್ಯದ ಸ್ನೇಹಿತರು. ಸಿಪಿಸಿ ಪಾಲಿಟೆಕ್ನಿಕ್ ಕಾಲೇಜಿನಲ್ಲಿ ಡಿಪ್ಲೊಮಾ ಓದುವಾಗ ದ್ವಾರಕೀಶ್ ನನಗಿಂತ ಒಂದು ವರ್ಷ ಹಿರಿಯ ವಿದ್ಯಾರ್ಥಿಯಾಗಿದ್ದರು," ಎಂದು ನೆನಪಿಸಿಕೊಂಡರು.
-
ಪುನೀತ್ ರಾಜ್ಕುಮಾರ್ ಹುಟ್ಟುಹಬ್ಬದ ವಿಶೇಷ: ಬೆಟ್ಟದ ಹೂವಿನಿಂದ ಗಂಧದ ಗುಡಿಯವರೆಗೆ, ಅಪ್ಪು ಎಂಬ ಅಳಿಸಲಾಗದ ನಗು -
ಎಲ್ಪಿಜಿ ಸಿಲಿಂಡರ್ ಪೂರೈಕೆ ಸ್ಥಗಿತ: ನಾಳೆಯಿಂದ ಬೆಂಗಳೂರಿನಾದ್ಯಂತ ಹೋಟೆಲ್ಗಳು ಬಂದ್ -
Bengaluru Second Airport: ಬೆಂಗಳೂರು ಎರಡನೇ ವಿಮಾನ ನಿಲ್ದಾಣಕ್ಕೆ ಈ ಪ್ರದೇಶ ಬೆಸ್ಟ್: ಉದ್ಯಮಿ ಕಿರಣ್ ಮಜುಂದಾರ್ ಶಾ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ












Click it and Unblock the Notifications