ರಾಜ್ಯದ ಆಡಳಿತ ಕುಸಿದಿರುವುದಕ್ಕೆ ಮೈಸೂರಿನ ಗಲಾಟೆಯೇ ಸಾಕ್ಷಿ
ಮೈಸೂರು, ಜೂನ್ 15: "ರಾಜ್ಯದಲ್ಲಿ ಆಡಳಿತ ಸಂಪೂರ್ಣ ಕುಸಿದಿದ್ದು, ಇದಕ್ಕೆ ಮೈಸೂರಿನಲ್ಲಿ ನಡೆದ ಐಎಎಸ್ ಅಧಿಕಾರಿಗಳ ಗಲಾಟೆಯೇ ಸಾಕ್ಷಿ," ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಟೀಕಿಸಿದರು.
ಮೈಸೂರಿನ ಸುತ್ತೂರು ಶಾಖಾ ಮಠಕ್ಕೆ ಭೇಟಿ ನೀಡಿದ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, "ಈ ಸರ್ಕಾರ ಕುಸಿದಿರುವುದಕ್ಕೆ ಮೈಸೂರಿನ ಘಟನೆ ಪ್ರತಿಬಿಂಬ ಎಂಬಂತೆ ಕಾಣುತ್ತಿದೆ. ಮೈಸೂರಿನಂತಹ ಜಿಲ್ಲೆಯಲ್ಲೇ ಆಡಳಿತ ಕುಸಿದ ಮೇಲೆ ಬೇರೆ ಜಿಲ್ಲೆಯ ಸ್ಥಿತಿ ಹೇಗಿರಬೇಡಾ?" ಎಂದು ಪ್ರಶ್ನಿಸಿದರು.
"ರಾಜ್ಯದ ಸಚಿವರು ಹಾಗೂ ಸಿಎಂ ಯಡಿಯೂರಪ್ಪ ನಡುವೆ ಸಮನ್ವಯತೆ ಇಲ್ಲ. ಸಿಎಂ ಅಲ್ಲಿ ಇಲ್ಲಿ ಸಭೆ ಮಾಡಿಕೊಂಡು ಓಡಾಡುತ್ತಿದ್ದಾರೆ. ಸಚಿವ ಏನು ಮಾಡುತ್ತಿದ್ದಾರೆ? ನೀವೇ ಹೇಳಿ," ಎಂದು ಡಿ.ಕೆ. ಶಿವಕುಮಾರ್ ಮರು ಪ್ರಶ್ನಿಸಿದರು.

"ಮುಖ್ಯಮಂತ್ರಿಯಾಗಿ ಬಿ.ಎಸ್. ಯಡಿಯೂರಪ್ಪ ಮುಂದುವರೆಯುತ್ತಾರೋ? ಇಲ್ಲವೋ? ಎಂಬುದು ನನಗೆ ಸಂಬಂಧಿಸಿದ ವಿಚಾರವಲ್ಲ. ನಿನ್ನೆ ಮೊನ್ನೆ ಸುತ್ತೂರು ಮಠಕ್ಕೆ ಬಂದವರನ್ನು ಕೇಳಿದರೆ ಗೊತ್ತಾಗಬಹುದು," ಎಂದು ಪ್ರಶ್ನೆಯೊಂದಕ್ಕೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಉತ್ತರಿಸಿದರು.

ಸತ್ತವರ ಕುಟುಂಬಕ್ಕೆ ಒಂದು ಲಕ್ಷ ರೂ. ಪರಿಹಾರ ವಿಚಾರದ ಕುರಿತು ವ್ಯಂಗ್ಯವಾಡಿದ ಡಿ.ಕೆ. ಶಿವಕುಮಾರ್, 'ಅಮ್ಮನವರು ಪಟ್ಟಕ್ಕೆ ಬರುವುದರೊಳಗೆ, ಐನೋರು ಚಟ್ಟಕ್ಕೆ ಹೋಗುವ ರೀತಿ' 1 ಲಕ್ಷ ಪರಿಹಾರ ಕೊಡುವುದಕ್ಕಿಂತ, ಖಾಸಗಿ ಆಸ್ಪತ್ರೆಗೆ ಕೊರೊನಾ ರೋಗಿಗಳು ಕಟ್ಟಿರುವ ಬಿಲ್ ವಾಪಸ್ ಕೊಡಿಸಿ," ಎಂದು ಆಗ್ರಹಿಸಿದರು.
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು












Click it and Unblock the Notifications