ಕೆ.ಆರ್ ನಗರ ಕ್ಷೇತ್ರ; ಜಿಟಿ ದೇವೇಗೌಡ ಕುಟುಂಬಕ್ಕೆ ಪಂಥಾಹ್ವಾನ ನೀಡಿದ ಸಾ.ರಾ ಮಹೇಶ್
ಮೈಸೂರು, ಫೆಬ್ರವರಿ 9: ಮೈಸೂರಿನ ಕೆ.ಆರ್ ನಗರ ವಿಧಾನಸಭಾ ಕ್ಷೇತ್ರಕ್ಕೆ ಯಾರೇ ಬಂದು ಸ್ಪರ್ಧಿಸಿದರೂ ಎದುರಿಸಲು ನಾನು ಸಿದ್ಧನಿದ್ದೇನೆ ಎಂದು ಚಾಮುಂಡೇಶ್ವರಿ ಶಾಸಕ ಜಿಟಿ ದೇವೆಗೌಡ ಕುಟುಂಬಕ್ಕೆ ಕೆ.ಆರ್ ನಗರ ಕ್ಷೇತ್ರದ ಹಾಲಿ ಶಾಸಕ ಸಾ.ರಾ ಮಹೇಶ್ ಅವರು ಪರೋಕ್ಷವಾಗಿ ಪಂಥಾಹ್ವಾನ ನೀಡಿದ್ದಾರೆ.
ಮೈಸೂರಿನಲ್ಲಿ ಇಂದು ಮಾತನಾಡಿದ ಶಾಸಕ ಸಾ.ರಾ ಮಹೇಶ್, ಕೆ.ಆರ್ ನಗರಕ್ಕೆ ಅಭಿನಂದನೆಗೆಂದು ಬಂದವರು ರಾಜಕೀಯವಾಗಿ ಬರಲಾರರು. ರಾಜಕೀಯವಾಗಿ ಬಂದರೆ ಅವರನ್ನು ಎದುರಿಸಲು ನಾನು ಸಿದ್ಧ ಎಂದು ಹೇಳಿದರು.
ಅಭಿನಂದನೆ, ಹುಟ್ಟುಹಬ್ಬ, ಶವಸಂಸ್ಕಾರಕ್ಕೆ ಬಂದವರೆಲ್ಲಾ ರಾಜಕೀಯ ಮಾಡುವುದಕ್ಕಾಗುವುದಿಲ್ಲ ಎಂದು ಸಾ.ರಾ.ಮಹೇಶ್ ಅವರು ಜಿ.ಟಿ.ದೇವೇಗೌಡರ ಹೆಸರೇಳದೆ ಪರೋಕ್ಷವಾಗಿ ಟಾಂಗ್ ನೀಡಿದರು.

ಈ ಹಿಂದೆ ಮುಖ್ಯಮಂತ್ರಿ ಅಭ್ಯರ್ಥಿ ಎಂದು ಬಿಂಬಿತವಾದವರನ್ನೇ 22 ಸಾವಿರ ಮತಗಳ ಅಂತರದಲ್ಲಿ ಸೋಲಿಸಿದ್ದೇನೆ. ನನ್ನ ಕ್ಷೇತ್ರದ ಜನ ನನ್ನನ್ನು ಮೂರು ಬಾರಿ ಆಯ್ಕೆ ಮಾಡಿದ್ದಾರೆ. ಕೆ.ಆರ್ ನಗರದಲ್ಲಿ ಈ ಮೊದಲು ಸತತವಾಗಿ ಎರಡು ಬಾರಿ ಯಾರಿಗೂ ಅವಕಾಶ ಸಿಕ್ಕಿರಲಿಲ್ಲ. ಅಂತಹದರಲ್ಲಿ ಇಲ್ಲಿನ ಜನರು ನನ್ನನ್ನು ಮೂರು ಬಾರಿ ಆಯ್ಕೆ ಮಾಡಿದ್ದಾರೆ ಎಂದು ಸಾ.ರಾ ಮಹೇಶ್ ತಿಳಿಸಿದರು.
ನನ್ನ ಪಕ್ಷ, ನಮ್ಮ ಜನ, ಕಾರ್ಯಕರ್ತರು ಇರುವವರೆಗೂ ಯಾವುದಕ್ಕೂ ತೊಂದರೆಯಿಲ್ಲ. ಚುನಾವಣೆ ಬರಲಿ, ಆ ಸಂದರ್ಭದಲ್ಲಿ ಯಾವ ರೀತಿಯ ಬೆಳವಣಿಗೆ ಇರುತ್ತದೆಯೋ ನೋಡೋಣ ಎಂದು ಕೆ.ಆರ್ ನಗರ ಶಾಸಕ ಸಾ.ರಾ.ಮಹೇಶ್ ಹೇಳಿದರು.
-
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ












Click it and Unblock the Notifications