ಇಡೀ ದೇಶದಲ್ಲಿ ಸಮ್ಮಿಶ್ರ ಹೋರಾಟ ಮಾಡುತ್ತೇವೆ: ಕೃಷ್ಣ ಭೈರೇಗೌಡ
ಮೈಸೂರು, ನವೆಂಬರ್ 17: ರಾಜ್ಯದಲ್ಲಿ ಕಾಂಗ್ರೆಸ್, ಜೆಡಿಎಸ್ ಮೈತ್ರಿ ಸರ್ಕಾರ ಅಧಿಕಾರದಲ್ಲಿದೆ. ಹಾಗಾಗಿ ಕಾಂಗ್ರೆಸ್ - ಜೆಡಿಎಸ್ ಎರಡೂ ಪಕ್ಷಗಳು ಒಂದುಗೂಡಿ ಮುಂದಿನ ಐದು ವರ್ಷ ಮೈಸೂರು ಪಾಲಿಕೆ ಆಡಳಿತ ನಡೆಸಲಿದ್ದಾರೆ ಎಂದು ಸಚಿವ ಕೃಷ್ಣ ಭೈರೇಗೌಡ ತಿಳಿಸಿದ್ದಾರೆ.
ಮಾಧ್ಯಮಗಳೊಂದಿಗೆ ಮಾತನಾಡಿದ ಅವರು ಎರಡು ವರ್ಷದ ಅವಧಿಗೆ ಕಾಂಗ್ರೆಸ್ ಪಕ್ಷದಿಂದ ಮೇಯರ್, ಜೆಡಿಎಸ್ ನಿಂದ ಉಪಮೇಯರ್ ನೇಮಕವಾಗಲಿದೆ. ಇದಾದ ಬಳಿಕ ಮೂರು ವರ್ಷಗಳ ಕಾಲ ಜೆಡಿಎಸ್ ನಿಂದ ಮೇಯರ್ , ಕಾಂಗ್ರೆಸ್ಸಿನಿಂದ ಉಪಮೇಯರ್ ಒಪ್ಪಂದ ನಡೆದಿದೆ. ಈ ಮೈತ್ರಿ ಮುಂದಿನ ಲೋಕಸಭೆ ಚುನಾವಣೆವರೆಗೂ ಇರಲಿದೆ.
ಇಡೀ ದೇಶದಲ್ಲಿ ಸಮ್ಮಿಶ್ರ ಹೋರಾಟ ಮಾಡುತ್ತೇವೆ . ಈಗಾಗಲೇ ಉಪ ಚುನಾವಣೆಯನ್ನು ಗಮನಿಸುವುದಾದರೆ ಜನರು ಸಮ್ಮಿಶ್ರ ಸರ್ಕಾರದ ಪರವಾಗಿದ್ದಾರೆ. ಬಿಜೆಪಿಯನ್ನು ಕಿತ್ತೊಗೆಯುವ ಸಲುವಾಗಿ ನಾವು ಮುಂದಿನ ದಿನಗಳಲ್ಲಿಯೂ ಮೈತ್ರಿಯನ್ನು ಮುಂದುವರೆಸುತ್ತೇವೆ. ಮೈಸೂರಿನ ಈ ಹೊಂದಾಣಿಕೆ ಆಡಳಿತ ಮುಂದಿನ ನಮ್ಮ ನಡೆಗೆ ಸಾಕ್ಷಿಯಾಗಿದೆ.

ಮುಂದಿನ ದಿನಗಳಲ್ಲಿ ಯಾವುದೇ ಕಚ್ಚಾಟ ಮಾಡಿಕೊಳ್ಳದೆ ಹೊಂದಾಣಿಕೆಯಿಂದ ಸಾಗುವ ಭರವಸೆ ಇದೆ ಎಂದರು.
ಇನ್ನು ಮೈಸೂರು ಮೇಯರ್ ವಿಚಾರದಲ್ಲಿ ನಮ್ಮ ವರಿಷ್ಠರ ತೀರ್ಮಾನಕ್ಕೆ ಬದ್ಧರಾಗಿದ್ದೇವೆ ಎಂದು ಮೈಸೂರಿನಲ್ಲಿ ಸಾರಾ ಮಹೇಶ್ ಹೇಳಿದ್ದಾರೆ. ಸಿದ್ದರಾಮಯ್ಯ ನಮ್ಮೆಲ್ಲರಿಗಿಂತ ದೊಡ್ಡವರು. ಮಾಜಿ ಮುಖ್ಯಮಂತ್ರಿ ಆಗಿದ್ದವರು . ಸಮ್ಮಿಶ್ರ ಸರ್ಕಾರದ ಸಮನ್ವಯ ಸಮಿತಿ ಅಧ್ಯಕ್ಷರೂ ಆಗಿದ್ದಾರೆ. ಅವರ ತೀರ್ಮಾನದಂತೆಯೇ ನಾವು ಸಚಿವರಾಗಿದ್ದೇವೆ.
ಮೇಯರ್ ಆಯ್ಕೆ ಸಂಬಂಧ ಕಾಂಗ್ರೆಸ್ ತಮ್ಮ ವರಿಷ್ಠರಿಗೆ ಮನವಿ ಮಾಡಿದ್ದರು. ಅದರಂತೆ ನಮ್ಮ ವರಿಷ್ಠರು ಮೇಯರ್ ಸ್ಥಾನವನ್ನು ಬಿಟ್ಟುಕೊಟ್ಟಿದ್ದಾರೆ. ಮೊದಲ ಹಾಗೂ ಮೂರನೇ ಅವಧಿಗೆ ಕಾಂಗ್ರೆಸ್ , ಎರಡನೇ ನಾಲ್ಕನೇ ಹಾಗೂ ಐದನೇ ಅವಧಿಗೆ ಜೆಡಿಎಸ್ ಪಕ್ಷದಿಂದ ಮೇಯರ್ ಆಗಲಿದ್ದಾರೆ ಎಂದು ತಿಳಿಸಿದ್ದಾರೆ.
-
ದಾವಣಗೆರೆ ದಕ್ಷಿಣದಲ್ಲಿ ಕಾಂಗ್ರೆಸ್ ಅಬ್ಬರ: ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಸಮ್ಮುಖದಲ್ಲಿ ಸಮರ್ಥ್ ಶಾಮನೂರು ನಾಮಪತ್ರ ಸಲ್ಲಿಕೆ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD












Click it and Unblock the Notifications